ರೈತ ಪರ ಸಮಸ್ಯೆಗಳ ಚಳವಳಿಗಳು ದಿಕ್ಕು ತಪ್ಪುತ್ತಿವೆ: ಕೆಂಪೂಗೌಡ

KannadaprabhaNewsNetwork |  
Published : Jan 26, 2025, 01:32 AM IST
25ಕೆಎಂಎನ್ ಡಿ15 | Kannada Prabha

ಸಾರಾಂಶ

ಕಬ್ಬಿನ ಬಾಕಿ ಪಾವತಿ ಕುರಿತಂತೆ ಸಕ್ಕರೆ ಕಾರ್ಖಾನೆಗಳಿಗೆ ಚಳವಳಿ ಮೂಲಕ ಚಾಟಿ ಏಟು ನೀಡುತ್ತಿದ್ದ ಕೋಣಸಾಲೆ ನರಸರಾಜು ವಿದ್ಯುತ್ ಸಮಸ್ಯೆ, ರೇಷ್ಮೆ ಬೆಳೆಗೆ ಸೂಕ್ತ ಬೆಂಬಲ ಬೆಲೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ವಿಚಾರದಲ್ಲಿ ರೈತ ಸಂಘಗಳನ್ನು ಒಗ್ಗೂಡಿಸಿಕೊಂಡು ತಮ್ಮದೇ ಆದ ರೀತಿಯಲ್ಲಿ ಹೋರಾಟ ನಡೆಸಿದ ನಿದರ್ಶನಗಳು ಸಾಕಷ್ಟಿವೆ.

ಕನ್ನಡಪ್ರಭ ವಾರ್ತೆ ಮದ್ದೂರು

ರೈತಪರ ಹೋರಾಟಗಾರ ಕೋಣಸಾಲೆ ನರಸರಾಜು ಅಗಲಿಕೆ ನಂತರ ರೈತ ಪರ ಚಳವಳಿಗಳು ದಿಕ್ಕು ತಪ್ಪುತ್ತಿವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಕೋಣಸಾಲೆ ಗ್ರಾಮದಲ್ಲಿ ಶನಿವಾರ ರೈತಪರ ಹೋರಾಟಗಾರ ದಿ.ಕೋಣಸಾಲೆ ನರಸರಾಜು ಅವರ 7ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ರೈತರ ಸಮಸ್ಯೆಗಳಿಗೆ ಕೀರ್ತಿ ಶೇಷರಾಗಿರುವ ವಿ.ಅಶೋಕ್ ಹಾಗೂ ಕೋಣಸಾಲೆ ನರಸರಾಜು ಒಗ್ಗೂಡಿ ಹೋರಾಟ ನಡೆಸುವ ಮೂಲಕ ಸಮಸ್ಯೆಗೆ ಪರಿಹಾರದ ಜೊತೆಗೆ ರೈತ ಚಳವಳಿಗೆ ಶಕ್ತಿ ತುಂಬಿದ್ದರು ಎಂದರು.

ಕಬ್ಬಿನ ಬಾಕಿ ಪಾವತಿ ಕುರಿತಂತೆ ಸಕ್ಕರೆ ಕಾರ್ಖಾನೆಗಳಿಗೆ ಚಳವಳಿ ಮೂಲಕ ಚಾಟಿ ಏಟು ನೀಡುತ್ತಿದ್ದ ಕೋಣಸಾಲೆ ನರಸರಾಜು ವಿದ್ಯುತ್ ಸಮಸ್ಯೆ, ರೇಷ್ಮೆ ಬೆಳೆಗೆ ಸೂಕ್ತ ಬೆಂಬಲ ಬೆಲೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ವಿಚಾರದಲ್ಲಿ ರೈತ ಸಂಘಗಳನ್ನು ಒಗ್ಗೂಡಿಸಿಕೊಂಡು ತಮ್ಮದೇ ಆದ ರೀತಿಯಲ್ಲಿ ಹೋರಾಟ ನಡೆಸಿದ ನಿದರ್ಶನಗಳು ಸಾಕಷ್ಟಿವೆ ಎಂದರು.

ರೈತ ಪರ ಸಂಘಟನೆಗಳು ಇನ್ನು ಮುಂದಾದರೂ ಒಂದೇ ವೇದಿಕೆಯಲ್ಲಿ ಬಂದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಚಿಂತನೆ ನಡೆಸಬೇಕು. ಗ್ರಾಮೀಣ ಭಾಗದ ಯುವ ರೈತರನ್ನು ಹೆಚ್ಚು ಹೆಚ್ಚಾಗಿ ಸಂಘಟಿಸುವ ಮೂಲಕ ಮುಂದಿನ ದಿನಗಳಲ್ಲಿ ರೈತ ಸಂಘಗಳಿಗೆ ಶಕ್ತಿ ನೀಡಿ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಲು ಅಣಿಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ಬೋರಾಪುರ ಶಂಕರಗೌಡ, ಲಿಂಗಪ್ಪಾಜಿ, ಜಿ.ಎ.ಶಂಕರ್, ವರದರಾಜು, ಉಮೇಶ, ರಾಮಕೃಷ್ಣ, ಮಂಜುನಾಥ, ರಘು ಪ್ರಕಾಶ್, ದೇಶಿಗೌಡ, ಪಟೇಲ್ ಬೋರೇಗೌಡ, ಸತೀಶ್, ನರಸರಾಜು ಪುತ್ರ ಪ್ರಸನ್ನ ಮತ್ತಿತರರು ಪಾಲ್ಗೊಂಡಿದ್ದರು.

PREV

Recommended Stories

ಬ್ರೇಕ್‌ ಫೇಲಾದ ಬಸ್‌ ಹಿಮ್ಮುಖ ಚಲಿಸಿದ್ದರಿಂದ 6 ಜನರ ಸಾವು
ಬಿಜೆಪಿಗಿಂತ 1 ದಿನ ಮೊದಲೇ ಜೆಡಿಎಸ್‌ ಧರ್ಮಸ್ಥಳ ಯಾತ್ರೆ