ಮುಂಗಾರು ಬೆಳೆ ಹಾನಿ ಪರಿಹಾರ: ₹ 108 ಕೋಟಿ ಜಮೆ

KannadaprabhaNewsNetwork |  
Published : May 14, 2024, 01:08 AM ISTUpdated : May 14, 2024, 11:17 AM IST
4 | Kannada Prabha

ಸಾರಾಂಶ

ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿ ಪಟ್ಟಿಯನ್ನು ನಾಡ ಕಚೇರಿ, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಹಸೀಲ್ದಾರ್‌ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.

ಧಾರವಾಡ:  ಜಿಲ್ಲೆಯಲ್ಲಿ ಈಗಾಗಲೇ ಹತ್ತು ಹಂತಗಳಲ್ಲಿ ಒಟ್ಟು 1.06,707 ರೈತರಿಗೆ ₹ 108.12 ಕೋಟಿ ಇನ್‌ಪುಟ್‌ ಸಬ್ಸಿಡಿ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್‍ಡಿಆರ್‌ಎಫ್ ಅಥವಾ ಎನ್‍ಡಿಆರ್‌ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಠ ₹ 2 ಸಾವಿರ ವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು, ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತ ಪಾವತಿಸಲು ಅನುದಾನ ಬಿಡುಗಡೆ ಮಾಡಿ, ಸರ್ಕಾರವು ಆದೇಶಿಸಿದೆ. ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿ ಪಟ್ಟಿಯನ್ನು ನಾಡ ಕಚೇರಿ, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಹಸೀಲ್ದಾರ್‌ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ. ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಪ್ರೂಟ್ಸ್ ಐಡಿ ಕಡ್ಡಾಯ ಆಗಿರುವುದರಿಂದ ಈ ವರೆಗೂ ಪ್ರೂಟ್ಸ್ ಐಡಿ ಮಾಡಿಸಿಕೊಳ್ಳದೆ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪ್ರೂಟ್ಸ್ ಐಡಿ ಸೃಜಿಸಿಕೊಳ್ಳಬಹುದು. ಪ್ರೂಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು 0836-2233840, 1077, 0836-2233860, 0836-2447517, 0836-2746334 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ