ಮುಂಗಾರು ಬೆಳೆ ಸಮೀಕ್ಷೆ ಜಾಗೃತಿ ರಥಯಾತ್ರೆಗೆ ಚಾಲನೆ

KannadaprabhaNewsNetwork |  
Published : Aug 16, 2024, 12:46 AM IST
ಪೋಟೋ೧೫ಸಿಎಲ್‌ಕೆ೩ ಚಳ್ಳಕೆರೆ ನಗರದ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಮುಂಗಾರು ಬೆಳೆ ಸಮೀಕ್ಷೆ ೨೦೨೪-೨೫ನೇ ಸಾಲಿನ ಮೊಬೈಲ್ ಯಾಫ್ ಮಾಹಿತಿ ರಥಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಕೃಷಿ ಇಲಾಖೆ ರೈತ ಸಮುದಾಯಕ್ಕೆ ನ್ಯಾಯಯುತವಾಗಿ ಬೆಳೆ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪಾರದರ್ಶಕತೆಯನ್ನು ಕಂಡುಕೊಳ್ಳಬೇಕಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರು ತಮ್ಮ ಜಮೀನುಗಳಿಗೆ ಮಾಡಿದ ಬಿತ್ತನೆ ಬಗ್ಗೆ ಸರಿಯಾದ ಮಾಹಿತಿ ಸಂಗ್ರಹಿಸಿ ಆಪ್ ಮೂಲಕ ದಾಖಲಿಸಬೇಕು. ಇದರಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಕೃಷಿ ಇಲಾಖೆ ರೈತ ಸಮುದಾಯಕ್ಕೆ ನ್ಯಾಯಯುತವಾಗಿ ಬೆಳೆ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪಾರದರ್ಶಕತೆಯನ್ನು ಕಂಡುಕೊಳ್ಳಬೇಕಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರು ತಮ್ಮ ಜಮೀನುಗಳಿಗೆ ಮಾಡಿದ ಬಿತ್ತನೆ ಬಗ್ಗೆ ಸರಿಯಾದ ಮಾಹಿತಿ ಸಂಗ್ರಹಿಸಿ ಆಪ್ ಮೂಲಕ ದಾಖಲಿಸಬೇಕು. ಇದರಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ತಿಳಿಸಿದರು.

ಅವರು, ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಮುಂಗಾರು ಬೆಳೆ ಸಮೀಕ್ಷೆ 2024-25ನೇ ಸಾಲಿನ ಮೊಬೈಲ್ ಆಪ್ ಮಾಹಿತಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಗ್ರಾಮೀಣ ಭಾಗಗಳಲ್ಲಿ ಹಲವಾರು ತಾಂತ್ರಿಕ ಸಮಸ್ಯೆಯಿಂದ ರೈತರ ಜಮೀನಲ್ಲಿರುವ ಬೆಳಗಳನ್ನು ದಾಖಲು ಮಾಡುವಲ್ಲಿ ಅನೇಕ ತಪ್ಪುಗಳು ಕಂಡುಬಂದಿವೆ. ಇದರಿಂದ ರೈತ ಸಂಕಷ್ಟಕ್ಕೆ ಈಡಾಗುತ್ತಾನೆ. ಕೃಷಿ ಇಲಾಖೆ ರೈತರ ಪಾಲಿಗೆ ಬೆಳಕಾಗಬೇಕೆಂದರು.

ಸಹಾಯಕ ಕೃಷಿ ನಿರ್ದೇಶಕ ಜೆ. ಅಶೋಕ್ ಮಾತನಾಡಿ, ತಾಲೂಕಿನಾದ್ಯಂತ ಎರಡು ದಿನಗಳ ಹಿಂದೆ ಉತ್ತಮ ಮಳೆಯಾಗಿದೆ. ಕುಂಠಿತಗೊಂಡ ಬಿತ್ತನೆ ಕಾರ್ಯಕ್ಕೆ ಮರುಚಾಲನೆ ದೊರೆತಂತಾಗಿದೆ. ಕೃಷಿ ಇಲಾಖೆ ಮುಂಗಾರು ಬೆಳೆ ಸಮೀಕ್ಷೆಗೆ ನೂತನ ತಾಂತ್ರಿಕತೆಯಿಂದ ಕೂಡಿದ ಆಪ್‌ ಅನ್ನು ಬಳಕೆಗೆ ತಂದಿದೆ. ಇಲಾಖೆಯ ವಾಹನದ ಮೂಲಕವೇ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ದಾಖಲಾತಿಗಳ ಜಾಗೃತಿ ಮೂಡಿಸಲಾಗುವುದು ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಗುಜ್ಜಾರಪ್ಪ, ಚೌಳೂರು ಬಸವರಾಜು, ಇಒ ಶಶಿಧರ, ಬಿಇಒ ಕೆ.ಎಸ್. ಸುರೇಶ್, ಡಿವೈಎಸ್ಪಿ ಟಿ.ಬಿ.ರಾಜಣ್ಣ, ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ನಗರಸಭಾ ಸದಸ್ಯ ಎಂ.ಜೆ. ರಾಘವೇಂದ್ರ, ಟಿ. ಮಲ್ಲಿಕಾರ್ಜುನ್, ಎನ್. ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!