ಯಾದಗಿರಿ: 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಸುಶೀಲಾ ಅವರ ಅಧ್ಯಕ್ಷತೆಯಲ್ಲಿ 2024ರ ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ಕೆ.ಹೆಚ್. ರವಿ ಅವರು ತಿಳಿಸಿದ್ದಾರೆ. ಕಾರ್ಯಾಗಾರಕ್ಕೆ ಕಂದಾಯ, ಕೃಷಿ ತೋಟಗಾರಿಗೆ, ಸಾಂಖ್ಯಿಕ ಇಲಾಖೆ ಹಾಗೂ ರೇಷ್ಮೆ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.