-ಸ್ಮಾಲ್ ಕಿಕ್ಕರ್
--
-ಬಿಕೋ ಎನ್ನುತ್ತಿರುವ ರೈತರ ಜೀವನಾಡಿಯಾಗಿರುವ ಭೀಮಾ ನದಿ-----
ನದಿಯನ್ನು ಅವಲಂಬಿಸಿರುವ ಅಫಜಲಪುರ, ಜೇವರ್ಗಿ ಹಾಗೂ ಶಹಾಬಾದ್ ಭಾಗಗಳ ಸಾವಿರಾರು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಉಳಿಸಿಕೊಳ್ಳಲು ಮುಗಿಯುತ್ತ ಚಿತ್ತ ನೆಟ್ಟಿದ್ದಾರೆ. ಸಂಕಟದಲ್ಲಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು ಎಂಬುದು ರೈತರ ಆಗ್ರಹವಾಗಿದೆ.
ನೀರಿಲ್ಲದೆ ಒಣಗಿದ ಕಬ್ಬು ಮಳೆ ಹಿನ್ನಡೆಯಾಗಿದ್ದರಿಂದ ನದಿ ತೀರದ ಜಮೀನುಗಳು ಹಾಗೂ ಅಫಜಲಪುರ, ಆಳಂದ, ಜೇವರ್ಗಿ ತಾಲೂಕುಗಳು ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಳೆದಿರುವ ಬಚಾವತ್ ಆಯೋಗದ ಪ್ರಕಾರ ''''ಬರ'''' ದ ನೀರು ಸಾವಿರಾರು ಹೆಕ್ಟೇರ್ ಪ್ರದೇಶಗಳಲ್ಲಿರುವ ಕಬ್ಬು, ಉದ್ದು, ಹೆಸರು ಮತ್ತಿತ್ತರ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿವೆ. ಸಾಲ ಮಾಡಿ ಕೃಷಿ ಆರಂಭಿಸಿದ್ದ ರೈತರು ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಕೈತಪ್ಪುವ ಆತಂಕದಲ್ಲಿದ್ದಾರೆ.
ದಿಢೀರ್ ಮಳೆ ಬಂದಾಗ ಸೊನ್ನ ಬ್ರಿಡ್ಜ್ ಕಮ್ ಬ್ಯಾರೇಜ್ನಲ್ಲಿ ವೈಜ್ಞಾನಿಕವಾಗಿ ನೀರು ಸಂಗ್ರಹಣೆ ಮಾಡದೆ ಇರುವುದರಿಂದ ಬೇಸಿಗೆಯಲ್ಲಿ ನೀರಿನ ಬವಣೆ ಹೆಚ್ಚಾಗಲು ಕಾರಣವಾಗಿದೆ. 3.166 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿರುವ ಬ್ಯಾರೇಜ್ನಲ್ಲಿ ಪ್ರಸ್ತುತ ಕೇವಲ 0.248 ಟಿಎಂಸಿ ನೀರು ಮಾತ್ರ ಉಳಿದಿದ್ದು ನದಿ ತೀರದ ಗ್ರಾಮಗಳಲ್ಲೂ ನೀರಿನ ಅಭಾವ ತೀವ್ರಗೊಂಡಿದೆ.
ರಾಜ್ಯದ ಬರಪೀಡಿತವಾಗಿ ನರಳುತ್ತಿದ್ದರು ಕೃಷಿ ಸಚಿವರೇ ಇಲ್ಲ, ಸರ್ಕಾರದಲ್ಲಿ ರೈತರ ಗೋಳು ಕೇಳುವವರು ಯಾರು ಇಲ್ಲ, ಸಿಎಂ ಕಾಟಾಚಾರಕ್ಕೆ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಕೂಡಲೇ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು. ಮಹಾರಾಷ್ಟ್ರ ಸರ್ಕಾರಕ್ಕೆ ಮನವೊಲಿಸಿ ನೀರು ಬಿಡುವಂತೆ ಒತ್ತಾಯಿಸಬೇಕು. ಇಲ್ಲದಿದ್ದರೆ ಬಚಾವತ್ ಆಯೋಗ ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಬೇಕು. ಆದರೆ, ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯವಹಿಸಿವೆ ಎನ್ನುತ್ತಾರೆ ರೈತ ಶ್ರೀಮಂತ ಬಿರಾದಾರ.
ಕೋಟ್ಯಾಂತರ ರು. ಬಿಡುಗಡೆ ಮಾಡಲಾಗಿದೆ. ಆದರೆ, ಅನುದಾನ ಎಲ್ಲಿ ಹೋಗುತ್ತದೆ ಎನ್ನುವುದು ಶಾಸಕರು, ಅಧಿಕಾರಿಗಳು ಬಹಿರಂಗಪಡಿಸಬೇಕು. ಭೀಮಾ ನದಿಯ ನೀರು ಈವರೆಗೂ ವೈಜ್ಞಾನಿಕವಾಗಿ ಸಂಗ್ರಹಣೆ ಆಗುತ್ತಿಲ್ಲ. ಮಹಾರಾಷ್ಟ್ರದ ಉಜನಿ ಡ್ಯಾಮ್ನಿಂದ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಬರಗಾಲ ಮುಕ್ತ ಮಾಡಲು ಅಫಜಲಪುರ ಶಾಸಕರಿಗೆ ಇಚ್ಛಾಶಕ್ತಿಯೇ ಇಲ್ಲದಿರುವುದು ದುರಂತ.
---
...ಕೋಟ್....ರಾಜ್ಯ ಸರ್ಕಾರ ಬರಪೀಡಿತ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಿ, ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು. ರೈತರು ಬ್ಯಾಂಕುಗಳು, ಸಹಕಾರ ಸಂಘಗಳು ಹಾಗೂ ಖಾಸಗಿ ಸಾಲದ ಒತ್ತಡಕ್ಕೆ ಸಿಲುಕಿದ್ದು, ಅವರಿಗೆ ತಕ್ಷಣದ ಆರ್ಥಿಕ ನೆರವು ಅತ್ಯಗತ್ಯವಾಗಿದೆ.
-ಅಮೋಲ ಮೋರೆ, ಉಪಾಧ್ಯಕ್ಷ, ಜೆಡಿಎಸ್ ಅಫಜಲಪುರ