ಮಲ್ಲಿಕಾರ್ಜುನ ಪಟ್ಟಣಶೆಟ್ಟಿ
ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಹೀಗೆ ಎರಡು ಪ್ರಕೃತಿಯ ಅತಿರೇಕಗಳಿಂದ ನಲುಗಿದ್ದ ತಾಲೂಕಿನ ರೈತರಿಗೆ ಪ್ರಸಕ್ತ ವರ್ಷ ಬಿತ್ತನೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಪೂರಕವಾಗಿ ಮಳೆ ಸುರಿಯುತ್ತಿರುವುದರಿಂದ ರೈತರನ್ನು ಹೊಲಗಳನ್ನು ಹದ ಮಾಡಲು ಮುಂದಾಗಿದ್ದಾರೆ. ಮುಂಗಾರಿನ ಆರಂಭ ಉತ್ತಮವಾಗಿರುವುದರಿಂದ ಸಹಜವಾಗಿ ರೈತರು ಹುಮ್ಮಸ್ಸಿನಿಂದ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ.
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 58.357ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಿರೀಕ್ಷೆ ಹೊಂದಲಾಗಿದೆ. ಹಲವೆಡೆ ಈಗಾಗಲೇ ಒಂದೆರಡು ಮಳೆ ಬಿದ್ದಿದ್ದರಿಂದ ನೆಲ ತಂಪಾಗಿದ್ದು, ಕಳೆದ ಮೂರು ತಿಂಗಳಿಂದ ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ರೈತರು ಜಮೀನುಗಳನ್ನು ಬಿತ್ತನೆಗೆ ಸಿದ್ಧಗೊಳಿಸುವುದರಲ್ಲಿ ನಿರತರಾಗಿದ್ದಾರೆ. ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ, ಹತ್ತಿ, ಹೆಸರು, ಕಬ್ಬು, ಮೆಕ್ಕೆಜೋಳ ಬೆಳೆಯಲು ಪೂರಕ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ. ಕಳೆದ ಬಾರಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ತೊಗರಿ ಕೈಕೊಟ್ಟಿತ್ತು. ಎರಡು ಬಾರಿ ಬಿತ್ತನೆ ಮಾಡಿದರೂ ಮಳೆಯ ಅಭಾವದಿಂದಾಗಿ ರೈತರು ನಷ್ಟದ ಸುಳಿಗೆ ಸಿಲುಕಿದ್ದರು. ತಾಲೂಕಿನ ಹಲವೆಡೆ ರೈತರು ಇಳುವರಿ ಬಾರದೇ ತೀವ್ರ ನಷ್ಟಕ್ಕೆ ಸಿಲುಕಿದ್ದರು. ಹೀಗಾಗಿ, ರೈತರ ಕೈಗೆ ಹಣ ಸಿಗಲೇ ಇಲ್ಲ. ಸಾಲದ ಮೊತ್ತ ಏರುತ್ತಲೇ ಇತ್ತು. ಬೆಳೆ ವಿಮೆ, ಬೆಳೆ ನಷ್ಟ ಪರಿಹಾರವನ್ನು ರಾಜ್ಯ ಸರ್ಕಾರ ಹಾಗೂ ವಿಮಾ ಕಂಪನಿಗಳು ಬಿಡುಗಡೆ ಮಾಡಿದ್ದರಿಂದ ರೈತರಿಗೆ ಒಂದಷ್ಟು ಸಮಾಧಾನ ತಂದಿದೆ. ಆದಕಾರಣ ಬೀಜ, ರಸಗೊಬ್ಬರವನ್ನು ಖರೀದಿಸಲು ಮುಂದಾಗಿದ್ದಾರೆ. ಅದರಲ್ಲೂ ಈ ಬಾರಿ ಹತ್ತಿಯನ್ನು ಸರ್ಕಾರ ಬೆಂಬಲ ಬೆಲೆ ₹ 8450 ಗೆ ಘೋಷಣೆಯಿಂದ ರೈತರು ಹತ್ತಿ ಬೆಳೆ ಕಡೆಗೆ ಒಲವು ತೋರುತ್ತಿದ್ದಾರೆ.ವಾಡಿಕೆಗಿಂತಲೂ ಹೆಚ್ಚು ಮಳೆ:
ಬಿತ್ತನೆ ಬೀಜ ಹಾಗೂ ಗೊಬ್ಬರ ಕೊರತೆ ಇಲ್ಲ: ತಾಲೂಕಿನಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜಗಳ ದಾಸ್ತಾನು ಇದೆ. ಉತ್ತಮ ಮಳೆ ಆಗುತ್ತಿದ್ದಂತೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಸಹಾಯ ಧನದಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸುವಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದೆಂದು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಕೋಟ್.....
-ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಶಾಸಕರು
ಕೋಟ್
-ಶರಣಗೌಡ ಬಿರಾದಾರ. ಕೃಷಿ ಇಲಾಖೆ ಅಧಿಕಾರಿ