ಮುಂಗಾರು ಸನ್ನಿಹಿತ: ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ

KannadaprabhaNewsNetwork |  
Published : May 28, 2026, 01:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಮುಂಗಾರು ಮಳೆ ಆರಂಭಗೊಳ್ಳುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿ ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ಸಿದ್ಧರಾಗಿರುವಂತೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ನಿರ್ದೇಶನ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮುಂಗಾರು ಮಳೆ ಆರಂಭಗೊಳ್ಳುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿ ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ಸಿದ್ಧರಾಗಿರುವಂತೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಮುಂಗಾರು ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನ ಚರಂಡಿ, ಕಾಲುವೆ ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ನಗರ ಹಾಗೂ ಗ್ರಾಮೀಣ ಪ್ರದೇಶದ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಿದರೆ ರೋಗ ರುಜಿನ ಹರಡದಂತೆ ತಡೆಯಲು ಸಾಧ್ಯ ಎಂದರು.

ಅತಿವೃಷ್ಟಿ ಸಂಭವಿಸಿದಾಗ, ತುರ್ತು ನಿರ್ವಹಣೆಗೆ ನೋಡಲ್ ಅಧಿಕಾರಿಗಳನೇಮಕ ಮಾಡಬೇಕು. ನಗರ ವ್ಯಾಪ್ತಿಯ ಪ್ರತಿ ಯೊಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಂಟ್ರೋಲ್ ರೂಂಗಳನ್ನು ದಿನದ 24 ಗಂಟೆ ತೆರೆಯುವ ಜತೆಗೆ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ನೇಮಕ ಮಾಡಿ ತಹಸೀಲ್ದಾರ್ ಹಾಗೂ ತಾಲೂಕು ಕಚೇರಿಯೊಂದಿಗೆ ನಿರಂತರ ಸಂಪರ್ಕ ಹೊಂದಿರ ಬೇಕು. ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿರಂತರವಾಗಿ ಮಾಡಬೇಕು. ಒಂದೊಮ್ಮೆ ಕಲುಷಿತ ನೀರು ಕಂಡು ಬಂದಲ್ಲಿ ಪುನಶ್ಚೇತನಗೊಳಿಸುವ ಕಾರ್ಯ ಕೈಗೊಳ್ಳಬೇಕು ಎಂದರು.ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಗ್ರಾಪಂ ಸಹ ನೀರಿನ ಗುಣಮಟ್ಟ ಪರೀಕ್ಷೆ ಕೈಗೊಳ್ಳಬೇಕು. ಗ್ರಾಪಂನಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಮಾಡಿರುವುದರ ಬಗ್ಗೆ ಕೂಡಲೇ ವರದಿ ನೀಡುವಂತೆ ತಿಳಿಸಿದರು.

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಳೆಗಾಲದಲ್ಲಿ ಉಂಟಾಗುವ ಸಮಸ್ಯೆ ಪರಿಹರಿಸಲು ಟಾಸ್ಕ್‌ಫೋರ್ಸ್ ತಂಡ ಗಳನ್ನು ರಚಿಸಿ ಸಮಸ್ಯೆಗಳುಂಟಾದಲ್ಲಿ ಕೂಡಲೇ ಸ್ಪಂದಿಸಬೇಕು. ತುರ್ತು ದೂರವಾಣಿ ಸಂಪರ್ಕ ಸ್ಥಾಪಿಸಿ ಈ ಕುರಿತು ಪ್ರಚಾರಪಡಿಸಬೇಕು. ಹೆದ್ದಾರಿಗಳಿಗೆ ಅಡ್ಡಲಾಗಿ ಬಿದ್ದಂತಹ ಮರಗಳನ್ನು ತುರ್ತು ಕಾರ್ಯಾಚರಣೆ ಕೈಗೊಂಡು ತೆರವು ಗೊಳಿಸಬೇಕೆಂದು ಸೂಚಿಸಿದರು.ಅಪಾಯಕಾರಿ ಮರಗಳ ತೆರವಿಗೆ ಸ್ಥಳೀಯ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಮನ್ವಯದೊಂದಿಗೆ ನಿರ್ವಹಿಸಬೇಕು. ರಸ್ತೆಯ ಮೇಲೆ ಬೀಳುವ ಮರಗಳನ್ನು ತಕ್ಷಣ ತೆರವುಗೊಳಿಸಲು ಸನ್ನದ್ಧರಾಗಿರಬೇಕು. ಗಾಳಿ-ಮಳೆಯಿಂದ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಲ್ಲಿ ತಕ್ಷಣವೇ ಪುನರ್ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಕೈಗೊಳ್ಳಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯವಿರುವ ಎಲ್ಲಾ ರೀತಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಔಷಧ, ಚುಚ್ಚುಮದ್ದುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಡೆಂಗ್ಯೂ, ಮಲೇರಿಯಾ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗುರುತಿಸಿ ದುರಸ್ತ್ತಿಪಡಿಸಲು ಕ್ರಮ ವಹಿಸಬೇಕು. ಮಳೆಗಾಲದ ತುರ್ತು ಸಂದರ್ಭಗಳಲ್ಲಿ ಅಗತ್ಯವಿದ್ದಾಗ ಕಾಳಜಿ ಕೇಂದ್ರಗಳನ್ನು ತೆರೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದರು.ಜಿಲ್ಲೆಯಲ್ಲಿ ಈ ಹಿಂದೆ ಹೆಚ್ಚಿನ ಪ್ರವಾಹವಾಗಿರುವ ಸ್ಥಳಗಳನ್ನು ಗುರುತಿಸಿ ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳ ಬೇಕು. ಅಗ್ನಿಶಾಮಕ ದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷತಾ ಉಪಕರಣಗಳೊಂದಿಗೆ ಸನ್ನದ್ಧವಾಗಿರಬೇಕು. ಗೃಹರಕ್ಷಕ ದಳದ ಸಿಬ್ಬಂದಿ ಸಹ ತುರ್ತು ಸೇವೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಮಳೆಗಾಲ ದಲ್ಲಿ ಗುಡುಗು, ಸಿಡಿಲು ಸಂದರ್ಭದಲ್ಲಿ ಹವಾಮಾನ ಇಲಾಖೆ ನೀಡುವ ಮುನ್ನೆಚ್ಚರಿಕೆ ಕ್ರಮ ಪಾಲಿಸುವುದರೊಂದಿಗೆ ಯಾವುದೇ ಮಾನವ ಹಾಗೂ ಪ್ರಾಣಿಗಳ ಜೀವಹಾನಿಯಾಗದಂತೆ ನೋಡಿಕೊಳ್ಳಬೇಕು. ಗುಡುಗು, ಸಿಡಿಲಿನ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಶ್ವತ್ಥ್‌ಬಾಬು, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಮಂಗಳಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ದಿವಾಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಮೆಸ್ಕಾಂನ ಅಧೀಕ್ಷಕ ಅಭಿಯಂತರ ಮಂಜುನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆ ಶಿಥಿಲ ಕೊಠಡಿಗಳ ಸಮಗ್ರ ಮಾಹಿತಿ ನೀಡಿ: ಬಿಇಒ
ಸ್ವಾಯತ್ತ ಸಂಸ್ಕೃತಿಯ ದಿಕ್ಕು ತಪ್ಪಿಸುವವರ ಬಗ್ಗೆ ಎಚ್ಚರವಿರಲಿ: ಪ್ರೊ.ಎಸ್. ನಟರಾಜ ಬೂದಾಳು