ಕನ್ನಡಪ್ರಭ ವಾರ್ತೆ ಚಾಮರಾಜನಗರ
ಗೋಡೆ ಕುಸಿತ: ಹನೂರಿನಲ್ಲಿ ಗುರುವಾರ ಸಂಜೆ ಬಿದ್ದ ಮಳೆಗೆ ಕುಮಾರ್ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದು 50 ಸಾವಿರಕ್ಕೂ ಹೆಚ್ಚು ಬೆಲೆಬಾಲುವ ಸಾಮಾಗ್ರಿಗಳು ನಾಶವಾಗಿವೆ. ಹಾಗೂ ಮನೆಯ ಗೋಡೆ ಕುಸಿದು ಹತ್ತಕ್ಕೂ ಹೆಚ್ಚು ಶೀಟ್ಗಳು ಜಖಂಗೊಂಡಿದೆ.ಘಟನೆ ವಿವರ: ಹನೂರಿನಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಕುಮಾರ್ ಎಂಬುವವರ ಮನೆಯ ಗೋಡೆ ಗುರುವಾರ ಸಂಜೆ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಹೊಸದಾಗಿ ಮಳಿಗೆ ಮಾಡಲು ಸಿದ್ಧತೆ ಕೈಗೊಳ್ಳಲಾಗಿತ್ತು. ಏಕಾಏಕಿ ಗೋಡೆ ಕುಸಿದ ಪರಿಣಾಮ ಹತ್ತಕ್ಕೂ ಹೆಚ್ಚು ಶೀಟ್ಗಳು , ಪೈಪ್ ಜಖಂಗೊಂಡಿದೆ. ಇನ್ನು ಹೊಸದಾಗಿ ಮಳಿಗೆ ನಿರ್ಮಾಣ ಮಾಡುತ್ತಿದ್ದ ರಾಜು ಎಂಬುವರ ಶೀಟ್ , ಪೈಪ್ ಗಳು ಜಖಂಗೊಂಡಿರುವುದರಿಂದ ಇವರದ್ದು ಸಹ 40 ಸಾವಿರ ಬೆಲೆ ಬಾಳುವ ಸಾಮಗ್ರಿಗಳು ನಷ್ಟವಾಗಿರುವುದರಿಂದ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಕಳೆದ ಮೂರು ದಿನಗಳಿಂದ ಬೀಳುತ್ತಿರುವ ಭಾರಿ ಮಳೆಗೆ ಗೋಡೆ ಕುಸಿದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಬೇಕೆಂದು ಕುಮಾರ್ ಮನವಿ ಮಾಡಿದ್ದಾರೆ.6ಸಿಎಚ್ಎನ್21
ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದಾಗಿರುವುದು.ಕೋಡಿ ಬಿದ್ದ ದೇವರಕೆರೆ, ಅಗಸನಕಟ್ಟೆ ಕೆರೆಗುಂಡ್ಲುಪೇಟೆ: ತಾಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದ ಅವಳಿ ಕೆರೆಗಳಾದ ದೇವರಕೆರೆ, ಅಗಸನಕಟ್ಟೆ ಕೆರೆ ಗುರುವಾರ ಬಿದ್ದ ಮಳೆಗೆ ತುಂಬಿ ಕೋಡಿ ಬಿದ್ದು, ಕೆರೆಯ ಏರಿಯ ಮೇಲೆಯೇ ಹರಿಯುತ್ತಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಎರಡು ಕೆರೆಗಳ ಕೋಡಿ ಸ್ವಲ್ಪ ಬಿರುಕು ಬಿಟ್ಟಿದೆ. ನೀರು ನಿಲ್ಲದೆ ಕೋಡಿ ಒಡೆದರೆ ರೈತರು ಬಿತ್ತನೆ ಮಾಡಿದ ಫಸಲು ನೀರಿನಲ್ಲಿ ಹೋಮವಾಗುತ್ತದೆ ಎಂಬ ಆತಂಕ ರೈತರಲ್ಲಿ ಎದುರಾಗಿದೆ. ಗ್ರಾಪಂ ಸದಸ್ಯ ನರಸಿಂಹ ಮಾತನಾಡಿ, ಕೆರೆ ಕೋಡಿ ಸಂಬಂಧ ಗ್ರಾಪಂ ಪಿಡಿಒ ಜೊತೆ ಮಾತನಾಡಿದ್ದು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.