ಮೂಡುಬಿದಿರೆ: ‘ಕೃಷ್ಣೋತ್ಸವ 2025’ ಆಮಂತ್ರಣ ಪತ್ರಿಕೆ ಬಿಡುಗಡೆ

KannadaprabhaNewsNetwork |  
Published : Jul 09, 2025, 12:25 AM ISTUpdated : Jul 09, 2025, 01:38 PM IST
ಕೃಷೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ | Kannada Prabha

ಸಾರಾಂಶ

ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 109 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ ಆಶ್ರಯದಲ್ಲಿ ‘ಕೃಷೋತ್ಸವ 2025’ ಮಾಜಿ ಸಚಿವ ಅಮರನಾಥ ಶೆಟ್ಟಿ ವೃತ್ತದ ಬಳಿ ನಡೆಯಲಿದ್ದು ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಶ್ರೀ ಕ್ಷೇತ್ರ ಪುತ್ತಿಗೆಯಲ್ಲಿ ನಡೆಯಿತು.

 ಮೂಡುಬಿದಿರೆ :  ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 109 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ ಆಶ್ರಯದಲ್ಲಿ ‘ಕೃಷೋತ್ಸವ 2025’ ಮಾಜಿ ಸಚಿವ ಅಮರನಾಥ ಶೆಟ್ಟಿ ವೃತ್ತದ ಬಳಿ ನಡೆಯಲಿದ್ದು ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಶ್ರೀ ಕ್ಷೇತ್ರ ಪುತ್ತಿಗೆಯಲ್ಲಿ ನಡೆಯಿತು. 

ದೇವರಿಗೆ ಪೂಜೆ ಸಲ್ಲಿಸಿದ ನಂತರ ಅನುವಂಶಿಕ ಮುಖ್ಯಸ್ಥ, ಚೌಟರ ಅರಮನೆಯ ಕುಲದೀಪ್ ಎಂ. ಬಿಡುಗಡೆಗೊಳಿಸಿದರು. ಶಾಸಕ ಉಮಾನಾಥ ಎ. ಕೋಟ್ಯಾನ್ ಭಾಗವಹಿಸಿ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದರು.ಪುರಸಭೆಯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಬಿಜೆಪಿ ಮುಖಂಡ ಕೆ.ಪಿ. ಜಗದೀಶ್ ಅಧಿಕಾರಿ, ಉದ್ಯಮಿಗಳಾದ ರಾಜೇಂದ್ರ ಜೈನ್, ಗಂಗಾಧ‌ರ್ ಶೆಟ್ಟಿ, ರಾಜೇಶ್ ಕೋಟೆಗಾರ್, ಬಂಟರ ಸಂಘ ಮಹಿಳಾ ಘಟಕ ಅಧ್ಯಕ್ಷೆ ಶೋಭಾ ಹೆಗ್ಡೆ, ಉದ್ಯಮಿ ಅಶ್ವಿತ್, ಪ್ರಶಾಂತ್ ಗುರುಸ್ವಾಮಿ ಒಂಟಿ ಕಟ್ಟೆ, ಮಂಜುನಾಥ ರೈ, ನಾಗವರ್ಮ ಜೈನ್ ಭಾಗವಹಿಸಿದರು.

ಜವನೆರ್ ಬೆದ್ರ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಅಮರ್ ಕೋಟೆ, ಪ್ರಧಾನ ಕಾರ್ಯದರ್ಶಿ ದಿನೇಶ್ ನಾಯಕ್, ಟ್ರಸ್ಟಿ ರಂಜೀತ್ ಶೆಟ್ಟಿ ಯುವ ಸಂಘಟನೆ ಸಂಚಾಲಕ ನಾರಾಯಣ ಪಿದಮಲೆ, ಸಹ ಸಂಚಾಲಕ ರಾಜೇಶ್, ಸಂಘಟನಾ ಕಾರ್ಯದರ್ಶಿ ಗುರುಪ್ರಸಾದ್ ಪೂಜಾರಿ ರಕ್ತನಿಧಿ ಸಂಚಾಲಕ ಮನು ಒಂಟಿ ಕಟ್ಟೆ, ಅಬ್ಬಕ್ಕ ಬ್ರಿಗೇಡ್ ಸಂಚಾಲಕಿ ಸಹನಾ ನಾಯಕ್, ಸೌಮ್ಯ ಗಣೇಶ್, ಭಕುತಿ ಭಜನಾ ವೃಂದ ಪ್ರಮುಖರಾದ ಸುಕನ್ಯ, ಅಮಿತಾ ಬನ್ನಡ್ಕ, ಹಾಗೂ ಸಂಘಟನೆ ಸದಸ್ಯರಾದ ಲಕ್ಷ್ಮಿ, ರಾಧಾ, ಅಭಿಲಾಶ್, ಗುರು, ಸಚಿನ್ ಪದ್ದೋಡಿ ಶರತ್ ಅಲಂಗಾರು ಮತ್ತಿತರರಿದ್ದರು.ಸಂಘಟನೆಯ ಯುವಜನ ಸಬಲೀಕರಣ ಸಂಚಾಲಕ ಸಂದೀಪ್ ಕೆಲಪುತ್ತಿಗೆ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌