ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಭಗವಾನ್ ಮಹಾವೀರ ಸ್ವಾಮಿಯ 2625ನೇ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.ಈ ಪವಿತ್ರ ಸಂದರ್ಭದಲ್ಲಿ, ಸಮಾಜದ ಶಾಂತಿ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬೆಳಗಾವಿಯ ಭರತೇಶ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ವಿನೋದ್ ದೊಡ್ಡಣ್ಣನವರ್ ಅವರಿಗೆ ಎಕ್ಸಲೆಂಟ್ ಸಂಸ್ಥೆಯ ವತಿಯಿಂದ ಪ್ರತಿಷ್ಠಿತ ‘ವರ್ಧಮಾನ ಮಹಾವೀರ ಶಾಂತಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಹಾದಿಯಲ್ಲಿ ಸಾಗುತ್ತಿದೆ ಎಂದು ಶ್ಲಾಘಿಸಿದರು.ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಶ್ಲಾಘನೆ:
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಇಂದು ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಕವಿದಿದ್ದು, ಇಂತಹ ಸಂದರ್ಭದಲ್ಲಿ ಶಾಂತಿ ಮತ್ತು ಅಹಿಂಸೆಯ ದೂತ ಭಗವಾನ್ ಮಹಾವೀರರ ಬೋಧನೆಗಳ ಪ್ರಸ್ತುತತೆ ಅತ್ಯಗತ್ಯವಾಗಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಎಕ್ಸಲೆಂಟ್ ಸಂಸ್ಥೆಯು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ಮಾತನಾಡಿ, ಪರಪೀಡನೆಯಿಲ್ಲದ, ಹಿಂಸೆಯಿಲ್ಲದ ಮೃದು ಹೃದಯದ ಮಿಡಿತವೇ ನಿಜವಾದ ಭಗವತ್ ಪೂಜೆಯಾಗಿದೆ. ಮಹಾವೀರರ ತತ್ವಗಳು ಇಂದಿನ ಯುವ ಪೀಳಿಗೆಗೆ ಅತ್ಯಂತ ಅವಶ್ಯಕ, ಎಂದು ಮಾರ್ಮಿಕವಾಗಿ ನುಡಿದರು.ಸಾಧಕರಿಗೆ ಗೌರವಾರ್ಪಣೆ: ಸಮಾಜದ ವಿವಿಧ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ‘ವರ್ಧಮಾನ ಮಹಾವೀರ ಸೇವಾ ಪುರಸ್ಕಾರ - ಎಕ್ಸಲೆಂಟ್ 2026’ ನೀಡಿ ಸನ್ಮಾನಿಸಲಾಯಿತು. ಮಹಾವೀರ ಪಾರ್ಶ್ವನಾಥ ಕುಂದೂರ್: ಶಿಕ್ಷಣ ತಜ್ಞರು ಹಾಗೂ ಜೈನ ಪರಂಪರೆ ಸಂರಕ್ಷಣಾ ಸಂಘಟಕರು, ನಿರಂಜನ್ ಜೈನ್ ಕುದ್ಯಾಡಿ: ಲೇಖಕರು ಹಾಗೂ ಸಾಮಾಜಿಕ ಜಾಲತಾಣದ ಪ್ರಭಾವಿ ವ್ಯಕ್ತಿ (Social Media Influencer), ಹರ್ಷೇಂದ್ರ ಕುಮಾರ್ ಮಾಳ: 77 ಬಾರಿ ರಕ್ತದಾನ ಮಾಡಿದ ಮಹಾ ದಾನಿ ಹಾಗೂ ಸಮಾಜ ಸೇವಕರು, ಸೇವಾ ಗೌರವ: ಸಂಸ್ಥೆಯ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸಿಬ್ಬಂದಿ ಸೇವೆ ಈ ಸಂದರ್ಭದಲ್ಲಿ ಗುರುತಿಸಿ ಗೌರವಿಸಲಾಯಿತು.
ಸಾಮಾಜಿಕ ಕಳಕಳಿ - ವಸ್ತ್ರದಾನ: ಇದೇ ಸಂದರ್ಭದಲ್ಲಿ ಸಂಸ್ಥೆಯು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆಯಿತು. ಸಂಸ್ಥೆಯ ಭದ್ರತಾ ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ‘ವಸ್ತ್ರದಾನ’ ಮಾಡುವ ಮೂಲಕ ಅವರ ಶ್ರಮವನ್ನು ಗೌರವಿಸಲಾಯಿತು.
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಸುನಾದ್ರಾಜ್ ಜೈನ್ ಅವರು ವಂದಿಸಿದರು. ಸಿಇಟಿ ಸಂಯೋಜಕರು ಹಾಗೂ ಹಿರಿಯ ಉಪನ್ಯಾಸಕರಾದ ರಂಜಿತ್ ಜೈನ್ ಅವರು ಕಾರ್ಯಕ್ರಮವನ್ನು ಅತ್ಯಂತ ಸುಂದರವಾಗಿ ನಿರೂಪಿಸಿದರು.