ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

KannadaprabhaNewsNetwork |  
Published : Apr 02, 2026, 02:45 AM IST
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ: ವಿನೋದ್ ದೊಡ್ಡಣ್ಣನವರ್‌ಗೆ ‘ವರ್ಧಮಾನಮಹಾವೀರ ಶಾಂತಿ ಪ್ರಶಸ್ತಿ’ ಪ್ರದಾನ | Kannada Prabha

ಸಾರಾಂಶ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಭಗವಾನ್ ಮಹಾವೀರ ಸ್ವಾಮಿಯ 2625ನೇ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಭಗವಾನ್ ಮಹಾವೀರ ಸ್ವಾಮಿಯ 2625ನೇ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.ಈ ಪವಿತ್ರ ಸಂದರ್ಭದಲ್ಲಿ, ಸಮಾಜದ ಶಾಂತಿ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬೆಳಗಾವಿಯ ಭರತೇಶ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ವಿನೋದ್ ದೊಡ್ಡಣ್ಣನವರ್ ಅವರಿಗೆ ಎಕ್ಸಲೆಂಟ್ ಸಂಸ್ಥೆಯ ವತಿಯಿಂದ ಪ್ರತಿಷ್ಠಿತ ‘ವರ್ಧಮಾನ ಮಹಾವೀರ ಶಾಂತಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿನೋದ್ ದೊಡ್ಡಣ್ಣನವರ್, ಜಗತ್ತಿನ ಪ್ರತಿಯೊಂದು ಜೀವಿಯೂ ಸ್ವತಂತ್ರವಾಗಿ ಬದುಕುವ ಹಕ್ಕನ್ನು ಹೊಂದಿದೆ. ಹಿಂಸೆಯಿಂದ ದೂರವಿದ್ದು, ಅಹಿಂಸೆ ಮತ್ತು ಶಾಂತಿ ಮಾರ್ಗವನ್ನು ಅನುಸರಿಸುವುದೇ ನಾವು ಮಹಾವೀರರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ. ಪ್ರಕೃತಿಯ ಮಡಲಿನಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಎಕ್ಸಲೆಂಟ್ ಸಂಸ್ಥೆಯು ಶಾಂತಿ ಮತ್ತು ಸೌಹಾರ್ದದ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಸಮಾಜದಲ್ಲಿ ಸಾರ್ಥಕ

ಹಾದಿಯಲ್ಲಿ ಸಾಗುತ್ತಿದೆ ಎಂದು ಶ್ಲಾಘಿಸಿದರು.ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಶ್ಲಾಘನೆ:

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಇಂದು ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಕವಿದಿದ್ದು, ಇಂತಹ ಸಂದರ್ಭದಲ್ಲಿ ಶಾಂತಿ ಮತ್ತು ಅಹಿಂಸೆಯ ದೂತ ಭಗವಾನ್ ಮಹಾವೀರರ ಬೋಧನೆಗಳ ಪ್ರಸ್ತುತತೆ ಅತ್ಯಗತ್ಯವಾಗಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಎಕ್ಸಲೆಂಟ್ ಸಂಸ್ಥೆಯು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ಮಾತನಾಡಿ, ಪರಪೀಡನೆಯಿಲ್ಲದ, ಹಿಂಸೆಯಿಲ್ಲದ ಮೃದು ಹೃದಯದ ಮಿಡಿತವೇ ನಿಜವಾದ ಭಗವತ್ ಪೂಜೆಯಾಗಿದೆ. ಮಹಾವೀರರ ತತ್ವಗಳು ಇಂದಿನ ಯುವ ಪೀಳಿಗೆಗೆ ಅತ್ಯಂತ ಅವಶ್ಯಕ, ಎಂದು ಮಾರ್ಮಿಕವಾಗಿ ನುಡಿದರು.ಸಾಧಕರಿಗೆ ಗೌರವಾರ್ಪಣೆ: ಸಮಾಜದ ವಿವಿಧ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ‘ವರ್ಧಮಾನ ಮಹಾವೀರ ಸೇವಾ ಪುರಸ್ಕಾರ - ಎಕ್ಸಲೆಂಟ್ 2026’ ನೀಡಿ ಸನ್ಮಾನಿಸಲಾಯಿತು. ಮಹಾವೀರ ಪಾರ್ಶ್ವನಾಥ ಕುಂದೂರ್: ಶಿಕ್ಷಣ ತಜ್ಞರು ಹಾಗೂ ಜೈನ ಪರಂಪರೆ ಸಂರಕ್ಷಣಾ ಸಂಘಟಕರು, ನಿರಂಜನ್ ಜೈನ್ ಕುದ್ಯಾಡಿ: ಲೇಖಕರು ಹಾಗೂ ಸಾಮಾಜಿಕ ಜಾಲತಾಣದ ಪ್ರಭಾವಿ ವ್ಯಕ್ತಿ (Social Media Influencer), ಹರ್ಷೇಂದ್ರ ಕುಮಾರ್ ಮಾಳ: 77 ಬಾರಿ ರಕ್ತದಾನ ಮಾಡಿದ ಮಹಾ ದಾನಿ ಹಾಗೂ ಸಮಾಜ ಸೇವಕರು, ಸೇವಾ ಗೌರವ: ಸಂಸ್ಥೆಯ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸಿಬ್ಬಂದಿ ಸೇವೆ ಈ ಸಂದರ್ಭದಲ್ಲಿ ಗುರುತಿಸಿ ಗೌರವಿಸಲಾಯಿತು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ (HOD Physics) ವಿಶ್ವರಾಜ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ, ಬೋಧಕೇತರ ಸಿಬ್ಬಂದಿಗಳಾದ ಶಾಂತಿರಾಜ ಹೆಗ್ಡೆ ಹಾಗೂ ರೇಷ್ಮಾ ಅವರಿಗೆ ಅವರ ಅನುಕರಣೀಯ ಸೇವೆಗಾಗಿ ವಿಶೇಷ ಸನ್ಮಾನ ನೀಡಿ ಅಭಿನಂದಿಸಲಾಯಿತು.

ಸಾಮಾಜಿಕ ಕಳಕಳಿ - ವಸ್ತ್ರದಾನ: ಇದೇ ಸಂದರ್ಭದಲ್ಲಿ ಸಂಸ್ಥೆಯು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆಯಿತು. ಸಂಸ್ಥೆಯ ಭದ್ರತಾ ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ‘ವಸ್ತ್ರದಾನ’ ಮಾಡುವ ಮೂಲಕ ಅವರ ಶ್ರಮವನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿಟ್ಲ ನವಿಲು ಬಸದಿಯ ಅಧ್ಯಕ್ಷ ಜಿತೀಶ್ ಎಂ., ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್, ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲ ಶ್ರೀಪ್ರಸಾದ್, ಎಕ್ಸಲೆಂಟ್ ಸ್ಟೇಟ್ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಹಿರಿಯರಾದ ಬಾಹುಬಲಿ ಪ್ರಸಾದ್, ಕೃಷ್ಣರಾಜ್ ಹೆಗ್ಡೆ, ಮೂಡುಬಿದಿರೆ ಜೈನ್ ಮಿಲನ್‌ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಜೈನ ಸಮುದಾಯದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಸುನಾದ್‌ರಾಜ್ ಜೈನ್ ಅವರು ವಂದಿಸಿದರು. ಸಿಇಟಿ ಸಂಯೋಜಕರು ಹಾಗೂ ಹಿರಿಯ ಉಪನ್ಯಾಸಕರಾದ ರಂಜಿತ್ ಜೈನ್ ಅವರು ಕಾರ್ಯಕ್ರಮವನ್ನು ಅತ್ಯಂತ ಸುಂದರವಾಗಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಮೇಶ ಮೇಟಿ ಪರ ಬಿರುಸಿನ ಪ್ರಚಾರ
ಅನಗತ್ಯ ಸಿಲಿಂಡರ್‌ ಗೊಂದಲ ಸೃಷ್ಟಿ ಬೇಡ