ಕನ್ನಡಪ್ರಭ ವಾರ್ತೆ ಕೋಲಾರಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳಿಂದ ಮಲಗುಂಡಿ ಸ್ವಚ್ಛಗೊಳಿಸಿರುವ ಪ್ರಕರಣ ಗಮನಿಸಿದಾಗ ಹಿಂದುಳಿದ ವರ್ಗದ ಮಕ್ಕಳು ಎಂದರೆ ಸರ್ಕಾರಕ್ಕೆ ತಿರಸ್ಕಾರ ಮನೋಭಾವ ಇದ್ದಂತಿದೆ. ಸ್ಥಳೀಯ ಶಾಸಕರು ಸಭೆ ನಡೆಸಿ ಪ್ರಕರಣ ಮುಚ್ಚಿಹಾಕುವ ಯತ್ನ ಮಾಡಿದ್ದಾರೆ, ಮುಖ್ಯಮಂತ್ರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹಾಗೂ ಸಂಸದ ಎಸ್. ಮುನಿಸ್ವಾಮಿ ಒತ್ತಾಯಿಸಿದರು.
ಎಸ್ಐಟಿ ತನಿಖೆಗೆ ವಹಿಸಲಿ:
ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ನಡೆದಿತ್ತು, ಅದು ಸಾಧ್ಯವಾಗದೆ ತಡವಾಗಿ ಬೆಳಕಿಗೆ ಬಂದಿದೆ, ಇದು ರಾಜ್ಯದ ಎಲ್ಲಾ ವಸತಿ ಶಾಲೆಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಇಂತಹ ಕೇಸ್ಗಳಲ್ಲಿ ಶಿಕ್ಷೆಯ ಪ್ರಮಾಣ ಬಹಳ ಕಡಿಮೆ ಇದೆ, ಸರ್ಕಾರ ಕೇವಲ ಕೇಸ್ ಹಾಕಿ ಸುಮ್ಮನಾಗಬಾರದು, ಇದರ ಜವಾಬ್ದಾರಿ ಹೊರಬೇಕು, ವಸತಿ ಶಾಲೆಗಳ ಕುಂದು ಕೊರತೆಗಳ ಬಗ್ಗೆ ಎಸ್ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.ಪ್ರಕರಣ ಮುಚ್ಚಿಹಾಕಲು ಶಾಸಕರ ಯತ್ನ:
ಮಕ್ಕಳ ಖಾಸಗಿ ವಿಡಿಯೋ ಬಗ್ಗೆ ಆರೋಪ ಕೇಳಿ ಬಂದಿದೆ, ನ್ಯಾಯಾಧೀಶರು ಸಹ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೇಸು ಹಾಕಿದರೆ ಪ್ರಕರಣ ದಾಖಲು ಮಾಡಿದರೆ ಬದಲಾವಣೆಯಾಗುವುದಿಲ್ಲ, ವಸತಿ ಶಾಲೆಗಳಲ್ಲಿ ನಡೆಯುತ್ತಿರುವ ಶೋಷಣೆ ಕುರಿತು ತನಿಖೆಯಾಗಬೇಕು. ಈ ಪ್ರಕರಣ ಸರ್ಕಾರಕ್ಕೆ ಗೌರವ ತರುವುದಿಲ್ಲ. ಪ್ರಕರಣದ ಬಗ್ಗೆ ಸಚಿವ ಎಚ್.ಸಿ. ಮಹಾದೇವಪ್ಪ ಕಠಿಣ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದರು.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹಾಗೂ ಸಂಸದ ಎಸ್.ಮುನಿಸ್ವಾಮಿ, ಮಕ್ಕಳು ಇಳಿಸಿದ್ದ ಪಿಟ್ ಬಳಿ ತೆರಳಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು ಜಿಪಂ ಸಿಇಒ ಪದ್ಮ ಬಸವಂತಪ್ಪ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಕ್ಕಳಿಂದ ಹೀಗೆ ಮಾಡಿಸೋದು ಸರಿಯೇ? ಡಿಸೆಂಬರ್ ೧ ರಂದು ನಡೆದಿರುವ ಘಟನೆಯಿದು, ಅಧಿವೇಶನ ಇದೆ ಅನ್ನೋ ಕಾರಣಕ್ಕೆ ಘಟನೆಯನ್ನು ಮುಚ್ವಿಟ್ಟಿದ್ದೀರಾ, ಘಟನೆ ಕುರಿತು ನಿಮಗೆ ಯಾವಾಗ ಗೊತ್ತಾಯಿತು ಎಂದು ಸಿಇಒ ಪದ್ಮಬಸಂತಪ್ಪ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ರನ್ನು ತರಾಟೆಗೆ ತೆಗೆದುಕೊಂಡರು.
ಶಿಕ್ಷಕರ ಪರವಾಗಿ ಮಕ್ಕಳ ಪ್ರತಿಭಟನೆ:
ಶಾಲೆಗೆ ನೂತನ ಪ್ರಾಂಶುಪಾಲ:
ಶಾಲೆಯ ಲಾಕರ್ ಮುರಿದ ಅಧಿಕಾರಿಗಳು:
ಶಾಲೆಗೆ ಬಂದ ಸೆಗ್ಗಿಂಗ್ ಮಿಷನ್:
ಕೆಟ್ಟ ಮೇಲೆ ಬುದ್ಧಿ ಕಲಿತ ಅಧಿಕಾರಿಗಳು ವಸತಿ ಶಾಲೆಗೆ ಬಂದ ಸೆಗ್ಗಿಂಗ್ ಮಷಿನ್ ಪಿಟ್ ಕ್ಲೀನ್ ಮಾಡಲು ಆಗಮಿಸಿತು, ಈಗಾಗಲೆ ಮಲ ಗುಂಡಿ ಸ್ವಚ್ಛಗೊಳಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ವಸತಿ ಶಾಲೆಯ ಅಧಿಕಾರಿಗಳು ಸಚಿವರು ಬಂದ ಬಳಿಕ ಪಿಟ್ ಕ್ಲೀನ್ ಮಾಡಿಸಲು ಮುಂದಾಗಿದ್ದಾರೆ, ಸದ್ಯ ವಸತಿ ಶಾಲೆಯ ಮಲ ಗುಂಡಿಯನ್ನು ಸೆಗ್ಗಿಂಗ್ ಮಷಿನ್ ಮೂಲಕ ಸ್ವಚ್ಛಗೊಳಿಸಲಾಯಿತು.