ಚಾತುರ್ಮಾಸ್ಯದಲ್ಲಿ ಹೆಚ್ಚಿನ ಭಕ್ತರು ಪಾಲ್ಗೊಳ್ಳಲಿ

KannadaprabhaNewsNetwork |  
Published : Jul 11, 2025, 01:47 AM IST
ಪೊಟೋ ಪೈಲ್ : 9ಬಿಕೆಲ್3 | Kannada Prabha

ಸಾರಾಂಶ

ಕುಲಗುರುಗಳು ಈ ವರ್ಷ ಕುಮಟಾದ ಕೋನಳ್ಳಿಯ ಸಭಾಭವನದಲ್ಲಿ ಚಾತುರ್ಮಾಸ್ಯ ಆಚರಿಸಿಕೊಳ್ಳುತ್ತಿದ್ದಾರೆ.

ಭಟ್ಕಳ: ಜುಲೈ ೧೦ರಿಂದ ಆಗಸ್ಟ್ ೨೦ರವರೆಗೆ ಕುಮಟಾದ ಕೋನಳ್ಳಿಯಲ್ಲಿ ನಡೆಯುವ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಚಾತುರ್ಮಾಸ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನಾಮಧಾರಿ ಗುರುಮಠದ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗುರುಮಠದ ಅಧ್ಯಕ್ಷ ಅರುಣ ನಾಯ್ಕ ಮಾತನಾಡಿ, ಸಮಾಜದ ಕುಲಗುರುಗಳು ಈ ವರ್ಷ ಕುಮಟಾದ ಕೋನಳ್ಳಿಯ ಸಭಾಭವನದಲ್ಲಿ ಚಾತುರ್ಮಾಸ್ಯ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಭಟ್ಕಳದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಿದ್ದು, ಅದಕ್ಕೆ ಸಮಾಜದ ಎಲ್ಲ ವರ್ಗದವರೂ ಹೆಚ್ಚಿನ ಸಹಕಾರ ಸ್ಮರಣೀಯ. ಸಮಾಜದ ಎಲ್ಲ ೧೮ ಕೂಟಗಳದವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಕೋರಿದರು.

ಜು.೨೭ರಂದು ಭಟ್ಕಳ ಭಾಗದವರಿಂದ ಗುರುಗಳ ಸೇವೆ ಮಾಡಲು ದಿನಾಂಕ ನಿಶ್ಚಯಿಸಿದ್ದಾರೆ. ಎಲ್ಲ ಕೂಟಗಳಿಂದ ಕನಿಷ್ಠ ಒಂದು ಟೆಂಪೋ ಹಾಗೂ ಪ್ರತಿ ಕೂಟದಿಂದ ಹೊರೆ ಕಾಣಿಕೆ ಸಂಗ್ರಹಿಸುವಂತೆ ನಿರ್ಣಯಿಸಲಾಗಿದೆ ಎಂದರು.

ನಾಮಧಾರಿ ಗುರುಮಠದ ಗೌರವಾಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ, ಶ್ರೀರಾಮ ಕ್ಷೇತ್ರ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ ಆಸರಕೇರಿ, ಗುರುಮಠದ ಕಾರ್ಯದರ್ಶಿ ಡಿ.ಎಲ್.ನಾಯ್ಕ, ಸಮಾಜದ ಹಿರಿಯ ಡಿ.ಬಿ. ನಾಯ್ಕ, ನ್ಯಾಯವಾದಿ ಮಾಸ್ತಿ ನಾಯ್ಕ, ವೆಂಕಟರಮಣ ನಾಯ್ಕ, ಗುರುಮಠ ದೇವಸ್ಥಾನದ ಉಪಾಧ್ಯಕ್ಷ ಎಂ.ಕೆ.ನಾಯ್ಕ, ಮಾತನಾಡಿದರು.

ದೇವಸ್ಥಾನದ ಕಾರ್ಯದರ್ಶಿ ಡಿ.ಎಲ್.ನಾಯ್ಕ, ಗೋವಿಂದ ನಾಯ್ಕ, ಶಾಂತಾರಾಮ ನಾಯ್ಕ ಜಾಲಿ, ವಿಠ್ಠಲ ನಾಯ್ಕ, ಎಸ್.ಎಂ. ನಾಯ್ಕ, ಸತೀಶಕುಮಾರ ನಾಯ್ಕ, ಮಹಾಬಲೇಶ್ವರ ನಾಯ್ಕ, ಶಿವರಾಮ ನಾಯ್ಕ ಉಪಸ್ಥಿತರಿದ್ದರು.ನಾಮಧಾರಿ ಸಮಾಜದ ಗೌರವಾಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ