ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮ್ಮ ಆಶೀರ್ವಾದರಿಂದ ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ನನ್ನ ಸದಸ್ಯತ್ವದ ಅವಧಿಯಲ್ಲಿ ಈ ಜಿಲ್ಲೆಯ ಪ್ರಮುಖ ವಿಷಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸತತ ಪ್ರಯತ್ನ ಮಾಡಿ, ಜಾರಿಗೆ ತರುವಲ್ಲಿ ಶ್ರಮಿಸುತ್ತೇನೆ. ಇದಕ್ಕಾಗಿ ನಾನು ಹತ್ತು ವಿಷನ್ಗಳನ್ನು ಇಟ್ಟುಕೊಂಡಿದ್ದೇನೆ ಎಂದರು. ಇದೇ ವೇಳೆ ವಿಷನ್ ವಿಜಯಪುರ ಎಂಬ 10 ಅಂಶಗಳಿಗೆ ಒತ್ತು ಕೊಡಲಾಗಿದ್ದು, ಅವುಗಳ ಪ್ರಣಾಳಿಕೆ ಬಿಡುಗಡೆ ಮಾಡಿದರು.
ನೀರಾವರಿ: ದಶಕಗಳಿಂದ ನೆನಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಲು ಅಗತ್ಯವಿರುವ ಕೇಂದ್ರ ಸರ್ಕಾರದಲ್ಲಿ 2010 ರಿಂದ ನೆನಗುದಿಗೆ ಬಿದ್ದಿರುವ ಬ್ರಿಜೇಶಕುಮಾರ ತೀರ್ಪು ಗೆಜೆಟ್ ನೋಟಿಫಿಕೇಶನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ, ಪೂರ್ಣಗೊಳಿಸುವುದು.ಕೃಷ್ಣಾ ನ್ಯಾಯಾದೀಕರಣ (ಬ್ರಿಜೇಶಕುಮಾರ ಆಯೋಗ) ತೀರ್ಪು 2010 ರಲ್ಲಿ ನೀಡಿದ್ದರೂ, 15 ವರ್ಷಗಳು ಕಳೆದರೂ ಇನ್ನೂ ಕೇಂದ್ರ ಸರ್ಕಾರದಿಂದ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಕೇಂದ್ರ ಸರ್ಕಾರದಿಂದ ಅಂತಿಮ ಅಧಿಸೂಚನೆ ಹೊರಡಿಸಿದರೆ, ಆಲಮಟ್ಟಿ ಅಣೆಕಟ್ಟು ಎತ್ತರಿಸಿ, 130 ಟಿ.ಎಂ.ಸಿ ನೀರು ಬಳಸಿ, ಯುಕೆಪಿ-3 ನೇ ಹಂತದ ಮುಳವಾಡ-ಚಿಮ್ಮಲಗಿ, ಇಂಡಿ, ಪೀರಾಪುರ ಬೂದಿಹಾಳ ಸೇರಿದಂತೆ ಎಲ್ಲ ಯೋಜನೆಗಳನ್ನು ನೀರು ಒದಗಿಸಿ 10 ಲಕ್ಷ ಎಕರೆ ಭೂಮಿಯನ್ನು ವಿಜಯಪುರ ಜಿಲ್ಲೆಯಲ್ಲಿ ನೀರಾವರಿಗೆ ಒಳಪಡಿಸಿ, ಕಾಲುವೆಗಳಿಗೆ ನೀರು ಹರಿಸಿ, ಕೆರೆ, ಹಳ್ಳ-ಕೊಳ್ಳಗಳನ್ನು ತುಂಬಿಸಿ, ಜಿಲ್ಲೆಯನ್ನು ಸಮೃದ್ಧಗೊಳಿಸುವುದು.
ವಿಮಾನ: ವಿಜಯಪುರದ ವಿಮಾನ ನಿಲ್ದಾಣ ಆರಂಭಗೊಂಡ ನಂತರ ರಾಷ್ಟ್ರದ ರಾಜಧಾನಿ ದೆಹಲಿ, ರಾಜ್ಯದ ರಾಜಧಾನಿ ಬೆಂಗಳೂರಿಗೆ ಸಂಪರ್ಕಿಸುವಂತೆ ವಿಮಾನಯಾನ ವ್ಯವಸ್ಥೆ ಒದಗಿಸುವುದು.
ಕೃಷಿ ತೋಟಗಾರಿಕೆ: ಕೇಂದ್ರ ಕೃಷಿ ಇಲಾಖೆಯಿಂದ ತೋಟಗಾರಿಕಾ ಬೆಳೆಗಾರರಿಗೆ ನೆರವಾಗಲು ರಾಷ್ಟ್ರೀಯ ದ್ರಾಕ್ಷಿ ಸಂಶೋಧನ ಕೇಂದ್ರ ಹಾಗೂ ತೋಟಗಾರಿಕಾ ವಿವಿಧ ತಳಿಗಳನ್ನು ಅಭಿವೃದ್ಧಿ ಪಡಿಸುವ ಫಾರ್ಮ್ ಆರಂಭಿಸುವುದು.
ಕ್ರೀಡೆ: ದೇಶದಲ್ಲಿಯೇ ಪಂಜಾಬ್ ಹೊರತು ಪಡಿಸಿದರೆ, ಸೈಕ್ಲಿಂಗ್ ಕ್ರೀಡೆಗೆ ವಿಜಯಪುರ ಜಿಲ್ಲೆ ಹೆಸರುವಾಸಿಯಾಗಿದ್ದು, ಕೆಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ ನೆರವಿನಿಂದ ಅಂತಾರ್ರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ ನಿರ್ಮಿಸುವುದು.
ಆದ್ದರಿಂದ ನನಗೆ ಮತ ನೀಡಿ, ಆಯ್ಕೆ ಮಾಡಿದರೆ ಪ್ರಾಮಾಣಿಕವಾಗಿ ಬೇಡಿಕೆ ಈಡೇರಿಕೆಗೆ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.