ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಈರೇಗೌಡ ದೊಡ್ಡಿ ಗ್ರಾಮದಲ್ಲಿ ಸಮಾಜ ಸೇವಕ ಸಿ.ಟಿ.ಶಂಕರ್ ಅವರ ಹುಟ್ಟು ಹಬ್ಬದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳು ಮಾತ್ರ ಇವೆ. ಇಲ್ಲಿ ಬೃಹತ್ ಕೈಗಾರಿಕೆಗಳ ಪ್ರದೇಶ ತಲೆಯೆತ್ತಿದರೆ ಆಗ ಸಾಕಷ್ಟು ಪ್ರಮಾಣದಲ್ಲಿ ಹಣ ಹೂಡಿಕೆಯಾಗುವುದರ ಜೊತೆಗೆ ಯುವ ಜನರಿಗೆ ಉದ್ಯೋಗಾವಕಾಶಗಳು ಸಿಗುತ್ತವೆ ಎಂದು ಅಭಿಪ್ರಾಯಪಟ್ಟರು.
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮದ್ದೂರು, ಮಂಡ್ಯ, ಚನ್ನಪಟ್ಟಣ ಹಾಗೂ ಕುಣಿಗಲ್ ಶಾಸಕರು ಹೆಚ್ಚಿನ ಆಸಕ್ತಿ ವಹಿಸಬೇಕು. ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸಲು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕ್ಷೇತ್ರದ ಶಾಸಕ ಉದಯ್ ಸೇರಿದಂತೆ ನಾವೆಲ್ಲರೂ ವಿಶೇಷ ಒತ್ತು ನೀಡುತ್ತಿದ್ದೇವೆ. ಜಿಲ್ಲೆಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ಶ್ರಮಿಸುತ್ತಿದ್ದಾರೆ ಎಂದರು.
ಒಕ್ಕಲಿಗರು ಬೆಳೆಯಬಾರದೆಂದು ಎಚ್ಡಿಕೆ ಉದ್ದೇಶ: ಕೆ.ಎಂ.ಉದಯ್ ವಾಗ್ದಾಳಿ
ಒಬ್ಬ ರೈತನ ಮಗ ಅಭಿವೃದ್ಧಿ ಕೆಲಸ ಮಾಡಿದರೆ ಅವರಿಂದ ಸಹಿಸಲಾಗುತ್ತಿಲ್ಲ. ಒಕ್ಕಲಿಗರು ಬೆಳೆಯಬಾರದು ಎಂಬ ಉದ್ದೇಶದಿಂದ ಇಲ್ಲಿಗೆ ಬಂದು ನಮ್ಮನ್ನು ಟೀಕೆ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಶಾಸಕ ಕೆ.ಎಂ.ಉದಯ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದರು.
ಚಾಕನಕೆರೆಗೆ ನಾನು ಈ ಹಿಂದೆ ಬಾಗಿನ ಅರ್ಪಿಸಿದ್ದೆ. ಇದನ್ನು ಸಹಿಸದ ಕೆಲವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕರೆಸಿ ಬಾಗಿನ ಬಿಡಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ನಾಚಿಕೆ ಆಗಬೇಕು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಅವರದೇ ಪಕ್ಷದ ಶಾಸಕರು ಕ್ಷೇತ್ರದಲ್ಲಿದ್ದರೂ ಸಹ ಆಗ ಕೆರೆಗೆ ಇವರಿಂದ ನೀರು ತುಂಬಿಸಲು ಸಾಧ್ಯವಾಗಿರಲಿಲ್ಲ ಎಂದು ಟೀಕಿಸಿದರು.