ಕನ್ನಡಪ್ರಭ ವಾರ್ತೆ ಮಡಿಕೇರಿ
ಸ್ಪರ್ಧೆಯಲ್ಲಿ ಮಡಿಕೇರಿ ನಗರ ಸೇರಿದಂತೆ ದೂರದ ಕರಿಕೆ, ಮದೆನಾಡು, ಕಡಗದಾಳು ಹಾಗೂ ವಿವಿಧ ಕಡೆಯ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರಶಸ್ತಿ ಗಳಿಸಿದರು.
ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಡಿಕೇರಿ ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ(ಪ್ರಭಾರ) ದಿನೇಶ್ ಕೆ. ಮಾತನಾಡಿ, ಮಕ್ಕಳಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸುವ ಮೂಲಕ ಅರಣ್ಯ ಹಾಗೂ ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ. ಪರಿಸರ ವೈವಿಧ್ಯತೆಯಲ್ಲಿ ಪ್ರತಿಯೊಂದು ಜೀವಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಕಣ್ಣಿಗೆ ಕಾಣದ ಜೀವಿಯಿಂದ ಹಿಡಿದು ಬೃಹತ್ ಆಕಾರದ ಆನೆಯಂತಹ ಪ್ರಾಣಿಗಳು ಕೂಡ ಈ ಪರಿಸರದಲ್ಲಿ ಅಷ್ಟೇ ಮಹತ್ವವನ್ನು ಪಡೆಕೊಂಡಿದೆ. ಆದ್ದರಿಂದ ನಾವು ಜೀವ ವೈವಿಧ್ಯತೆಯನ್ನು ಕಾಪಾಡಿಕೊಳ್ಳಬೇಕಿದೆ ಎಂದು ಹೇಳಿದರು.ವನ್ಯಜೀವಿ ಸಂಕುಲ ಉಳಿಸಲು ಮುಂದಾಗಬೇಕು:
ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷ ರತ್ನಾಕರ್ ರೈ ಮಾತನಾಡಿ ಮಕ್ಕಳಿಗೆ ಕಲೆಗಳು ಕೇವಲ ಹವ್ಯಾಸವಲ್ಲ. ಅವು ಅವರ ವ್ಯಕ್ತಿತ್ವ ನಿರ್ಮಾಣಕ್ಕೆ, ಭಾವನಾತ್ಮಕ ಬೆಳವಣಿಗೆಗೆ ಮತ್ತು ಭವಿಷ್ಯದ ದೃಷ್ಟಿಕೋನ ರೂಪಿಸಲು ಸಹಕಾರ ಮಾಡುತ್ತದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ಪ್ರತಿಯೊಬ್ಬರು ತಮ್ಮ ಶ್ರಮವನ್ನು ಮತ್ತು ಸೃಜನಶೀಲತೆಯನ್ನು ಸ್ಪರ್ಧೆಯಲ್ಲಿ ತೋರಿಸಿದ್ದೀರಿ. ಮಕ್ಕಳಲ್ಲಿ ಒಂದಲ್ಲಾ ಒಂದು ಪ್ರತಿಭೆ ಅಡಗಿದೆ. ಸೋಲು ಜೀವನದ ಒಂದು ಭಾಗ ಮಾತ್ರ. ಆದರೆ ನಿಮ್ಮ ಪ್ರಯತ್ನ ಸದಾ ಇರಬೇಕು ಎಂದು ಹೇಳಿದರು.
ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ರವೀಂದ್ರ ರೈ ಮಾತನಾಡಿ ಚಿತ್ರಕಲಾ ಸ್ಪರ್ಧೆಯ ಮೂಲಕ ಕನ್ನಡಪ್ರಭ ಪತ್ರಿಕೆ ಮಕ್ಕಳಲ್ಲಿ ಅರಣ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಸಂತಸದ ವಿಷಯ. ಕಡಿಮೆ ಅವಧಿಯಲ್ಲಿ ಹೆಚ್ಚು ಮಕ್ಕಳನ್ನು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿದೆ. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಹೊರ ತರುವುದರೊಂದಿಗೆ ವಿದ್ಯಾರ್ಥಿಗಳನ್ನು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ರೂಪಿಸಲು ಸಹಕಾರಿ ಎಂದು ಹೇಳಿದರು.
ಮಡಿಕೇರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಲಲಿತಾ ರಾಘವನ್, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಬಿ.ಕೆ. ಕಾರ್ಯಪ್ಪ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಎಂ. ಧನಂಜಯ್, ಮಡಿಕೇರಿ ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ನಮಿತಾ ಆರ್. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
4ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ಕರಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಜೆ. ನಿಶ್ಮಿತಾ(ಪ್ರ),
6ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ಮಡಿಕೇರಿ ಕೊಡಗು ವಿದ್ಯಾಲಯದ ಪಿ.ಎಂ. ಮನ್ವಿತಾ(ಪ್ರ), ಮಡಿಕೇರಿ ಬ್ಲಾಸಂ ಶಾಲೆಯ ಹಿಬಾ ಫಾತಿಮ(ದ್ವಿ), ಬ್ಲಾಸಂ ಶಾಲೆಯ ಸಾನ್ವಿ ಎಸ್ ಪಿ(ತೃ), ಮಡಿಕೇರಿ ಸಂತ ಮೈಕಲರ ಕನ್ನಡ ಮಾಧ್ಯಮ ಶಾಲೆಯ ಸೂರಜ್ ಎಂ ಎಸ್ ಹಾಗೂ ತನೂಶ್ ಎನ್ ಎಲ್ ಸಮಾಧಾನಕರ ಬಹುಮಾನ ಗಳಿಸಿದರು.