ಕನ್ನಡಪ್ರಭ ವಾರ್ತೆ ಹಾಸನ
ಹಾಸನಾಂಬೆ ದೇವಿ ಸಾರ್ವನಿಕರ ದರ್ಶನಕ್ಕೆ ಭಾನುವಾರ ವೀಕೆಂಡ್ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಭಕ್ತರ ಪ್ರವಾಹ ಹರಿದು ಬಂದಿದ್ದು, ಸಾವಿರಾರು ಭಕ್ತಾದಿಗಳು ರಾಜ್ಯದ ವಿವಿಧೆಡೆಯಿಂದ ಆಗಮಿಸಿ ದರ್ಶನ ಪಡೆದರು. ಭಾನುವಾರ ಮುಂಜಾನೆ ಮೂರು ಗಂಟೆಯಿಂದ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆಯಲು ಭಕ್ತರು ಆರಂಭಿಸಿದರು. ಭಾರಿ ಭಕ್ತರು ಬಂದ ಕಾರಣ ಕಿಲೋಮೀಟರ್ ಗಟ್ಟಲೆ ಸರತಿ ಸಾಲಲ್ಲಿ ನಿಂತಿದ್ದರು. ಇನ್ನೂ ದರ್ಶಕ್ಕಾಗಿ ಗಂಟೆಗಂಟಲೇ ಕಾದು ನಿಂತಿದ್ದ ಕೆಲ ಭಕ್ತಾದಿಗಳು ಮತ್ತು ವಯೋವೃದ್ಧರು, ಮಹಿಳೆಯರು ಸರತಿ ಸಾಲಿನಲ್ಲಿ ನಿಲ್ಲಲಾಗದೆ ಕುಳಿತು ನಂತರ ದೇವಿಯ ದರ್ಶನ ಪಡೆದರು.
ಕಳೆದ ಎರಡು ದಿನಗಳಿಂದ ಲಕ್ಷ-ಲಕ್ಷ ಸಂಖ್ಯೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಶನಿವಾರ ಭಾರೀ ಜನಸಂದಣಿಯಿಂದ ನೂಕುನುಗ್ಗಲು ಸೃಷ್ಟಿಯಾಗಿ, ರ್ಶನಕ್ಕೆ ಅಧಿಕಾರಿಗಳ ಜೊತೆಯೇ ಭಕ್ತರು ಜಟಾಪಟಿ ನಡೆಸಿದ್ದರು. ಭಾನುವಾರವಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಹೆಚ್ಚಲಿರುವ ಭಕ್ತರ ದಂಡು ಹೆಚ್ಚಾಗಿತ್ತು. ಸದ್ಯ ಯಾವುದೇ ಕಲಹಗಳು ನಡೆಯದೇ ಭಾನುವಾರ ಉತ್ಸವ ಅಚ್ಚುಕಟ್ಟಾಗಿ ನಡೆಯಿತು. ಹಾಗೂ ಈ ಬಾರಿ ದಾಖಲೆ ಪ್ರಮಾಣದಲ್ಲಿ ಭಕ್ತರ ದಂಡು ಹರಿದು ಬಂದಿದೆ.ಎ ಸಿ ಮಾರುತಿರವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಇದುವರೆಗೆ ಒಟ್ಟು ಸುಮಾರು 9, 60,000 ಭಕ್ತಾದಿಗಳು ಆಗಮಿಸಿದ ಲೆಕ್ಕ ಇದೆ, ಶನಿವಾರ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡು ಬಂದಿತು , ಭಾನುವಾರ ಪ್ರತಿದಿನದಂತೆ ಭಕ್ತರ ಸಂಖ್ಯೆ ಇದೆ, ಇನ್ನೂ ಎರಡು ದಿನಗಳ ಕಾಲ ದೇವಿಯ ದರ್ಶನ ಇದ್ದು , ಭಕ್ತರ ಸಂಖ್ಯೆಯಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ. ಒಟ್ಟು ಆದಾಯ 4 ಕೋಟಿ 80 ಲಕ್ಷ ಇದ್ದು, ಈ ದಿನದವರೆಗೆ 5 ಕೋಟಿ 80 ಲಕ್ಷ, ಇದುವರೆಗೆ ಟಿಕೆಟ್ನಿಂದ ಸಂಗ್ರಹವಾಗಿದೆ. ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಶನಿವಾರದ ದಿನ ಅತಿಹೆಚ್ಚು ಸುಮಾರು ಎರಡು ಲಕ್ಷ ಭಕ್ತಾದಿಗಳ ಜನರು ಆಗಮಿಸಿದ್ದರು ಜನಜಂಗುಳಿ ಇತ್ತು, ನೂಕು ನುಗ್ಗಲು ಇರಲಿಲ್ಲ. ಸರಾಗವಾಗಿ ರ್ಶನ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳು ಸೇರಿ ಈ ವರ್ಷ ಒಟ್ಟು 12 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಬರುವ ಸಾಧ್ಯತೆ ಇದೆ. ಕರೆಂಟ್ ಶಾಕ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗಾಯಾಳುಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡಿ, ಅವರಿಗೆ ದೇವಿಯ ದರ್ಶನ ಕಲ್ಪಿಸಲಾಗಿದೆ, ಯಾವುದೇ ಹೆಚ್ಚಿನ ಅನಾಹುತ ಪ್ರಾಣಾಪಾಯ ಸಂಭವಿಸಿಲ್ಲ, ಸೂಕ್ತ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.