ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ನೆರವು ದೊರೆಯಬೇಕು

KannadaprabhaNewsNetwork |  
Published : Jan 08, 2026, 02:00 AM IST
5ಎಚ್ಎಸ್ಎನ್11 : ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಹೇಮಾವತಿ ಅವರು ಟೇಪ್‌ ಕತ್ತರಿಸುವ ಮೂಲಕ ಉದ್ಘಾಟಿಸಿದರು. | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ಕಾನೂನು ನೆರವು ಎಲ್ಲಿ ಪಡೆಯಬೇಕು ಎಂಬ ಅರಿವು ಇರುವುದಿಲ್ಲ, ವಕೀಲರಿಂದ ಮಾಹಿತಿ ಪಡೆಯಲು ಹಣ ಭರಿಸುವ ಶಕ್ತಿ ಇಲ್ಲದೆ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ವಿಫಲರಾಗುತ್ತಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಸಲಹಾ ಕೇಂದ್ರ ಸ್ಥಾಪಿಸಲಾಗಿದ್ದು ಸಾರ್ವಜನಿಕರು ಮುಂದೆ ಉಚಿತ ಕಾನೂನು ಸಲಹಾ ಕೇಂದ್ರದ ನೆರವು ಪಡೆದುಕೊಳ್ಳಬಹುದಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಅರಿವಿರಬೇಕು ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ನೆರವು ದೊರೆಯಬೇಕು ಎನ್ನುವುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಹೇಮಾವತಿ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ಕಾನೂನು ನೆರವು ಎಲ್ಲಿ ಪಡೆಯಬೇಕು ಎಂಬ ಅರಿವು ಇರುವುದಿಲ್ಲ, ವಕೀಲರಿಂದ ಮಾಹಿತಿ ಪಡೆಯಲು ಹಣ ಭರಿಸುವ ಶಕ್ತಿ ಇಲ್ಲದೆ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ವಿಫಲರಾಗುತ್ತಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಸಲಹಾ ಕೇಂದ್ರ ಸ್ಥಾಪಿಸಲಾಗಿದ್ದು ಸಾರ್ವಜನಿಕರು ಮುಂದೆ ಉಚಿತ ಕಾನೂನು ಸಲಹಾ ಕೇಂದ್ರದ ನೆರವು ಪಡೆದುಕೊಳ್ಳಬಹುದಾಗಿದೆ ಎಂದರು.ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಚ್ಚ ನ್ಯಾಯಾಲಯದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತದೆ ಕಾನೂನಿನ ಸಲಹೆ ಅವಶ್ಯಕತೆ ಇರುವವರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆಸ್ಪತ್ರೆ ಸೇರಿದಂತೆ ಎಲ್ಲಿ ಜನರಿಗೆ ಕಾನೂನಿನ ಅವಶ್ಯಕತೆ ಇರುತ್ತದೆ ಅಂತಹ ಸ್ಥಳಗಳಲ್ಲಿ ರಕ್ಷಣೆ ಪಡೆಯಬೇಕು ಎಂಬ ಯೋಜನೆಯಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನೆರವಿಗೆ ನಿವೃತ್ತ ವಕೀಲರನ್ನು ನೇಮಿಸಲಾಗಿದೆ ಯಾರು ಸಹ ಹಣ ನೀಡುವಂತಿಲ್ಲ, ಸರ್ಕಾರ ಹಣ ನೀಡುತ್ತದೆ. ಉಚಿತ ಕಾನೂನು ಸಲಹೆ ಪ್ರಯೋಜನವನ್ನು ಪಡೆದುಕೊಳ್ಳುವ ಮೂಲಕ ಕಾನೂನಿನಲ್ಲಿನ ತೊಡಕುಗಳನ್ನು ಪರಿಹರಿಸಿಕೊಳ್ಳಬೇಕು ಎಂದರು. ಉಚಿತ ಕಾನೂನು ಸಲಹೆ ಕೇಂದ್ರದಲ್ಲಿ ತಿಮ್ಮಶೆಟ್ಟಿ ಎಂಬ ವಕೀಲರನ್ನು ನೇಮಿಸಲಾಗಿದ್ದು, ವಕೀಲರಿಂದ ಹಣ ಬೇಡಿಕೆ ಬಂದರೆ ನೇರವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಗೆ ಮಾಹಿತಿ ನೀಡಬೇಕು ಉಚಿತ ಕಾನೂನು ಸಲಹಾ ಕೇಂದ್ರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿ ಕಾನೂನು ಅರಿವು ಅವಶ್ಯಕತೆ ಇರುವ ಮಹಿಳೆಯರು ಮತ್ತು ಮಕ್ಕಳು ಪ್ರಯೋಜನವನ್ನು ಪಡೆದುಕೊಳ್ಳಬಹುದು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವರ್ಗದವರು, ಮಾನಸಿಕವಾಗಿ ನೊಂದವರು ಉಚಿತ ಕಾನೂನು ಸೇವೆಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ಉಚಿತವಾಗಿ ಕಾನೂನು ಸೇವೆಯನ್ನು ಪಡೆಯಲು ೧೫೧೦೦ ಸಂಖ್ಯೆಗೆ ಕರೆ ಮಾಡಿ ತಮ್ಮಗೆ ಅವಶ್ಯಕತೆ ಇರುವ ಕಾನೂನು ನೆರವು ಹಾಗೂ ಕಾನೂನು ಕೇಂದ್ರದ ವಿವರವನ್ನು ಪಡೆಯಬಹುದಾಗಿದೆ ಅಥವಾ ನೇರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಾನೂನು ಸಲಹಾ ಕೇಂದ್ರಕ್ಕೆ ಭೇಟಿ ನೀಡಿ ವಕೀಲರೊಂದಿಗೆ ಸಮಾಲೋಚಿಸಿ ಸಲಹೆಗಳನ್ನು ಪಡೆಯಬಹುದಾಗಿದೆ ಎಂದರು.ಕಂದಾಯ ಮತ್ತು ವಿವಿಧ ಇಲಾಖಾ ಕೆಲಸ ಕಾರ್ಯಗಳಿಗೆ ಮತ್ತು ವಿವಿಧ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಚಿತವಾಗಿ ಕಾನೂನು ಸಲಹೆಯನ್ನು ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು. ಈ ವೇಳೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾಧಿಕಾರಿಯವರ ಕಾನೂನು ಸಲಹೆಗಾರರಾದ ವೆಂಕಟೇಶ್, ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಂತಿದ್ದ ಲಾರಿಗೆ ಕ್ರೂಸರ್‌ ಡಿಕ್ಕಿ: 4 ಜನರ ಸಾವು
ಎಚ್.ಡಿಕೆಯನ್ನು ಮುಖ್ಯಮಂತ್ರಿಯಾಗಿ ನೋಡಲು ಜನತೆ ಕಾತುರ