ಬಹುತೇಕ ಶಾಂತಿಯುತ ಮತದಾನ

KannadaprabhaNewsNetwork |  
Published : May 08, 2024, 01:04 AM IST
7ಸಿಡಿಎನ್‌1: ತಾಲೂಕಿನ ನಿವರಗಿ ಗ್ರಾಮದ ಮತದಾನ ಕೇಂದ್ರದಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿರುವ ಮತದಾರರು/ | Kannada Prabha

ಸಾರಾಂಶ

ತಾಲೂಕಿನ ದಸೂರ ಗ್ರಾಮದಲ್ಲಿ ಮೂಲಸೌಕರ್ಯಕ್ಕೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಹೊರತುಪಡಿಸಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ನಡೆಯಿತು ಎಂದು ತಹಸೀಲ್ದಾರ್ ರಾಜೇಶ ಬುರ್ಲಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಡಚಣ

ತಾಲೂಕಿನ ದಸೂರ ಗ್ರಾಮದಲ್ಲಿ ಮೂಲಸೌಕರ್ಯಕ್ಕೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಹೊರತುಪಡಿಸಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ನಡೆಯಿತು ಎಂದು ತಹಸೀಲ್ದಾರ್‌ ರಾಜೇಶ ಬುರ್ಲಿ ತಿಳಿಸಿದರು.ಮತದಾನ ಬಹಿಷ್ಕಾರ:

ತಾಲೂಕಿನ ದಸೂರ ಗ್ರಾಮದಲ್ಲಿ ಗ್ರಾಮಸ್ಥರು ಮೂಲಸೌಕರ್ಯಕ್ಕೆ ಆಗ್ರಹಿಸಿ ಕೆಲ ಗಂಟೆಗಳ ಕಾಲ ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು ಬಸ್ ಸೌಲಭ್ಯ, ರಸ್ತೆ ಅಭಿವೃದ್ಧಿಯಾಗುವವರೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಪಟ್ಟು ಹಿಡಿದಿದ್ದರು. ಸುದ್ದಿ ತಿಳಿದು ತಹಸೀಲ್ದಾರ್‌ ರಾಜೇಶ ಬುರ್ಲಿ ಹಾಗೂ ಅವರ ತಂಡದೊಂದಿಗೆ ಗ್ರಾಮಕ್ಕೆ ತೆರಳಿ ಗ್ರಾಮದ ಮುಖಂಡರ ಜೊತೆಯಲ್ಲಿ ಮಾತುಕತೆ ಮಾಡಿ ಅವರ ಬೇಡಿಕೆ ನ್ಯಾಯಯುತವಾದದ್ದು, ಈ ಸಂದರ್ಭದಲ್ಲಿ ನೀತಿಸಂಹಿತೆ ಇರುವುದರಿಂದ ಯಾವುದೇ ಕೆಲಸ ಕಾರ್ಯ ಮಾಡುವಂತಿಲ್ಲ. ಆದ್ದರಿಂದ ಮತದಾನ ಬಹಿಷ್ಕಾರ ಸೂಕ್ತವಲ್ಲ ಎಂದು ತಿಳಿಹೇಳಿ ಮತದಾನ ಮಾಡುವಂತೆ ಮನವಿ ಮಾಡಿದ ಪ್ರಯುಕ್ತ ಗ್ರಾಮಸ್ಥರು 8.30 ವೇಳೆಗೆ ಮರು ಮತದಾನ ಮಾಡಲು ಪ್ರಾರಂಭಿಸಿದರು.

ಶಾಂತಿಯುತ ಮತದಾನ:

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮತದಾನ ಶಾಂತಿಯುತವಾಯಿತು. ಯಾವುದೇ ಕೇಂದ್ರದಲ್ಲಿ ಮತಯಂತ್ರ ತೊಂದರೆಯಾಗದೇ ಸುಸೂತ್ರವಾಗಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭದಲ್ಲಿ ಏರಿಕೆ ಕಂಡಿತ್ತು. ಬಳಿಕ ಮಧ್ನಾಹ್ನದ ಹೊತ್ತಿಗೆ ಮಂಧಗತಿಯಲ್ಲಿತ್ತು. ಇನ್ನೂ ಬಹುತೇಕ ಎಲ್ಲ ಮತಗಟ್ಟೆಗಳಲ್ಲೂ ಇದೇ ವಾತಾವರಣ ಇತ್ತು. ಸುಡು ಬಿಸಿಲನ್ನು ಲೆಕ್ಕಿಸದೇ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಸಂಜೆ ಹೊತ್ತಿಗೆ ಮತದಾನ ಏರಿಕೆ ಕಂಡಿತ್ತು.

105 ವರ್ಷದ ಅಜ್ಜಿಯಿಂದ ಮತದಾನ:

ತಾಲೂಕಿನ ಶಿರಾಡೋಣ ಗ್ರಾಮದಲ್ಲಿ 105 ವಯಸ್ಸಿನ ಅಜ್ಜಿ ನಡೆಯುತ್ತಾ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ವಿಶೇಷವಾಗಿತ್ತು. ಅಜ್ಜಿಯ ಉತ್ಸಾಹ ಯುವಕರಿಗೆ ಮಾದರಿಯಾಗುವಂತಿತ್ತು.

ಮೊದಲ ಬಾರಿ ಮತ ಚಲಾಯಿಸಲು ಬಂದಿದ್ದ ಯುವ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು‌. ಸಾಮಾಜಿಕ ಜಾಲತಾಣಗಳಲ್ಲಿ ಗುರುತಿನ ಭಾವಚಿತ್ರದ ಬೆರಳಿನ ಶಾಯಿಯನ್ನು ತೋರಿಸುವ ಸೆಲ್ಫಿ ಚಿತ್ರಗಳನ್ನು ಹಂಚಿಕೊಳ್ಳುತ್ತಿರುವುದು ಸಾಮಾನ್ಯವಾಗಿತ್ತು.

ಮತಗಟ್ಟೆಯಲ್ಲಿ ಮತದಾನಕ್ಕಾಗಿ ಬಂದ ಮತದಾರರಿಗೆ, ತಣ್ಣನೆ ಕುಡಿವ ನೀರು, ಶೌಚಾಲಯ, ಆರೋಗ್ಯ ಚಿಕಿತ್ಸೆ ಸೇರಿದಂತೆ ಹಲವು ರೀತಿಯ ವ್ಯವಸ್ಥೆಗಳು ಉಚಿತವಾಗಿ ಕಲ್ಪಿಸಿದ್ದು ಮತದಾರರನ್ನು ಆಕರ್ಷಿಸಿವಂತಿತ್ತು.

ಮತಗಟ್ಟೆಯಲ್ಲಿದ್ದ ಸಿಬ್ಬಂದಿಗೆ ನೀರು, ಊಟ, ಶೌಚಾಲಯ, ಪೊಲೀಸ್‌ ಭದ್ರತೆ, ವಿದ್ಯುತ್‌ ಸೇರಿದಂತೆ ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ