ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ

KannadaprabhaNewsNetwork |  
Published : Mar 01, 2024, 02:15 AM IST
ಸಿಕೆಬಿ-6 ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜ್ ಡೀನ್ ಡಾ. ಮಂಜುನಾಥ್ ಉಧ್ಘಾಟಿಸಿದರು | Kannada Prabha

ಸಾರಾಂಶ

ಈ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ದೊರಕದ ಅತ್ಯಾಧುನಿಕ ಆರೋಗ್ಯ ಸೇವೆ ಮಹಿಳೆಯರು ಮತ್ತು ಮಕ್ಕಳಿಗೆ ದೊರೆಯುತ್ತದೆ. ಗರ್ಭಿಣಿ ಸ್ತ್ರಿಯರಿಗೆ, ಮಕ್ಕಳ ಆರೋಗ್ಯ ಚಿಕಿತ್ಸೆಗೆ, ಹೆರಿಗೆಯ ಆರೋಗ್ಯ ಸೇವೆಗಳು ಇಲ್ಲಿ ಸಂಪೂರ್ಣ ಉಚಿತ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರಜನರ ಬಹುದಿನದ ಕನಸಾಗಿದ್ದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗುರುವಾರದಿಂದ ಸಾರ್ವಜನಿಕರ ಸೇವೆಗೆ ಮುಕ್ತವಾಗಿದ್ದು, ಮಾರ್ಚ್‌ 4ರಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ನಂದಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದನಾ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ ಮನವಿ ಮಾಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಂದಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲಾಗಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ ಜಿಲ್ಲಾಸ್ಪತ್ರೆಯಾಗಿದ್ದ ಕಟ್ಟಡವನ್ನು ನವ ವಿನ್ಯಾಸಗೊಳಿಸುವ ಜೊತೆಗೆ ಸುಸಜ್ಜಿತ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿ 150 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಇದಕ್ಕೆ ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಶಾಸಕ ಪ್ರದೀಪ್ ಈಶ್ವರ್ , ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳು ಎಂದರು.

ಉಚಿತ ಆರೋಗ್ಯ ಸೇವೆ

ಈ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರಿಯರಿಗೆ, 0-5 ವರ್ಷದೊಳಗಿನ ಮಕ್ಕಳ ಆರೋಗ್ಯ ಚಿಕಿತ್ಸೆಗೆ, ಹೆರಿಗೆಯ ಆರೋಗ್ಯ ಸೇವೆಗಳು ಇಲ್ಲಿ ಸಂಪೂರ್ಣವಾಗಿ ಉಚಿತ. ಇದಕ್ಕಾಗಿ ಐವರು ಮಕ್ಕಳ ತಜ್ಞ ವೈದ್ಯರು, ಇಬ್ಬರು ಆರೋಗ್ಯಾಧಿಕಾರಿಗಳು, ಮೂವರು ಅನಸ್ತೇಶಿಯ ವೈದ್ಯರು, 26 ಆರೋಗ್ಯ ಶೂಶ್ರೂಷಕಿಯರು, 10 ಡಿ, ದರ್ಜೆ ನೌಕರರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಸ್ಪತ್ರೆಯಲ್ಲಿ 17 ಮಕ್ಕಳ ವಾರ್ಡ್‌ಗಳಿವೆ. ಸ್ತ್ರೀ ರೋಗಗಳ ಆರೋಗ್ಯ ಸೇವೆಗಾಗಿ 20 ವಾರ್ಡ್ ಗಳನ್ನು ನಿರ್ಮಿಸಲಾಗಿದೆ. ಒಟ್ಟಾರೆ 87 ವಾರ್ಡ್ ಗಳು, 04 ಹೆರಿಗೆ ಕೊಠಡಿಗಳನ್ನು ಅತ್ಯಂತ ಆಧುನಿಕ ವ್ಯವಸ್ಥೆಯಡಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ ಎಂದರು. ಅತ್ಯಾಧುನಿಕ ಸೌಲಭ್ಯ ಲಭ್ಯ

ಜಿಲ್ಲಾ ಶಸ್ತ್ರಚಿಕಿತ್ಸಕಿ ಮಂಜುಳ ದೇವಿ ಮಾತನಾಡಿ, ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ದೊರಕದ ಅತ್ಯಾಧುನಿಕ ಆರೋಗ್ಯ ಸೇವೆ ಮಹಿಳೆಯರು ಮತ್ತು ಮಕ್ಕಳಿಗೆ ದೊರೆಯುತ್ತದೆ. ಸಾರ್ಜವನಿಕರು ಈ ವಲತ್ತುಗಳನ್ನು ಸಮರ್ಪಕವಾಗಿ ಉಪಯೋಗಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ಮಹೇಶ್ ಕುಮಾರ್, ನಿವಾಸಿ ವೈದ್ಯಡಾ.ಪಿ.ವಿ.ರಮೇಶ್, ಹಿರಿಯ ಮಕ್ಕಳ ತಜ್ಞರಾದ ಡಾ.ಪ್ರಕಾಶ್, ಡಾ.ರವಿಕುಮಾರ್, ವೈದ್ಯರಾದ ಡಾ. ವಿಜಯ, ಡಾ.ಚಂದ್ರಶೇಖರ್ ಸೇರಿದಂತೆ ಹಲವು ವೈದ್ಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ