ಹೊಸಪೇಟೆ: ಪ್ರವಾಸಕ್ಕೆಂದು ಹಂಪಿಗೆ ಬಂದಿದ್ದ ತಾಯಿ, ಮಗಳು ಸ್ನಾನಘಟ್ಟದ ತುಂಗಭದ್ರಾ ನದಿಯ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಶನಿವಾರ ಹಂಪಿಯಲ್ಲಿ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಿಕರು ಆತಂಕಗೊಂಡು ನೀರಿನಲ್ಲಿ ಕೊಚ್ಚಿಹೋದ ತಾಯಿ-ಮಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದರು. ತಕ್ಷಣವೇ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪೊಲೀಸರು, ಅಗ್ನಿ ಶಾಮಕದಳ ಸಿಬ್ಬಂದಿ, ಸ್ಥಳೀಯ ಈಜುಗಾರರು, ಬೋಟಿಂಗ್ ನಡೆಸುವರು ಸೇರಿದಂತೆ ಸುಮಾರು 20 ಜನ ಶೋಧನಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ತುಂಗಭದ್ರಾ ನದಿಯ ನೀರಿನ ಹರಿವು ಈಗ ಹೆಚ್ಚಾಗಿದೆ. ಶಾಹೀನ್ ಪತಿ ಸ್ಥಳಕ್ಕೆ ಆಗಮಿಸಿದ್ದು, ಪತ್ನಿ, ಮಗಳನ್ನು ನೆನೆದು ರೋಧಿಸುತ್ತಿದ್ದರು.
ತಾಯಿ ಶವ ಪತ್ತೆಹಂಪಿಯ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ತಾಯಿ-ಮಗಳ ಪೈಕಿ ತಾಯಿಯ ಶವ ಶನಿವಾರ ಸಂಜೆ ಪತ್ತೆಯಾಗಿದೆ. ಮಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ದಾವಣಗೇರೆಯಿಂದ ನುರಿತ ಈಜುಗಾರರು, ಎಸ್ಡಿಆರ್ಎಫ್ ತಂಡ ಶನಿವಾರ ರಾತ್ರಿ ಹಂಪಿಗೆ ಆಗಮಿಸಿದ್ದು, ಭಾನುವಾರ ಬೆಳಗ್ಗೆಯಿಂದಲೇ ಶೋಧ ಕಾರ್ಯ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಂಪಿ ಪ್ರವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನ ನಡೆದಿದೆ.
ಮರಿಯಮ್ಮನಹಳ್ಳಿ: ಕಾರ್ಖಾನೆಯಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಕಾರ್ಯನಿರ್ವಹಿಸಿದ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಗಾಳೆಮ್ಮನಗುಡಿ ಸಮೀಪದಲ್ಲಿರುವ ಸ್ಮಯೋರ್ ಕಾರ್ಖಾನೆಯಲ್ಲಿ ಶುಕ್ರವಾರ ನಡೆದಿದೆ. ಸಂಡೂರಿನ ನಿವಾಸಿ ರಮೇಶ್ (27) ಮೃತ ಕಾರ್ಮಿಕ. ಸ್ಮಯೋರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಹಾಗೂ ಇತರೆ ಕಾರ್ಮಿಕರಿಗೆ ಸುರಕ್ಷಿತ ಸಾಧನ ಸಲಕರಣೆಗಳನ್ನು ನೀಡದೇ ಕನ್ವೇರ್ ಬೆಲ್ಟ್ ಎಳೆಯುತ್ತಿರುವಾಗ ಎಡ ಮಗ್ಗುಲಾಗಿ ಬಿದ್ದು ಎಚ್ಚರ ತಪ್ಪಿದ್ದ. ತಕ್ಷಣವೇ ಹೊಸಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗೆ ಸುರಕ್ಷತಾ ಪರಿಕರಗಳನ್ನು ನೀಡದೇ ಕೆಲಸ ಮಾಡಿಸಿದ್ದರಿಂದ ಮೃತಪಟ್ಟಿದ್ದಾನೆ ಎಂದು ಮೃತನ ತಂದೆ ಪ್ರಹ್ಲಾದ್ ನೀಡಿದ ದೂರಿನ ಮೇರೆಗೆ ಸ್ಮಯೋರ್ ಕಾರ್ಖಾನೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಧ್ಯಕ್ಷರು, ನಿರ್ದೇಶಕರ ಕಿರುಕುಳಕ್ಕೆ ಬೇಸತ್ತು ಕಾರ್ಯದರ್ಶಿ ಆತ್ಮಹತ್ಯೆ