ಸಿಲಿಂಡರ್ ಸ್ಫೋಟಗೊಂಡು ತಾಯಿ ಮಗಳ ಸ್ಥಿತಿ ಗಂಭೀರ

KannadaprabhaNewsNetwork |  
Published : Aug 11, 2026, 01:30 AM IST
10ಎಚ್ಎಸ್ಎನ್11 :  | Kannada Prabha

ಸಾರಾಂಶ

ಸ್ಫೋಟದ ತೀವ್ರತೆಗೆ ಮನೆಯೊಳಗೆ ಭಾರೀ ಶಬ್ದ ಉಂಟಾಗಿದ್ದು, ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡರು. ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿಯ ಒಂದು ಭಾಗ ಹಾನಿಗೊಳಗಾಗಿದ್ದು, ಮನೆಯಲ್ಲಿದ್ದ ಕೆಲವು ವಸ್ತುಗಳು ಕೂಡ ಹಾನಿಗೊಳಗಾಗಿವೆ. ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡಿದ್ದ ತಾಯಿ-ಮಗಳಿಗೆ ನೆರವಾದರು. ಘಟನೆಯಲ್ಲಿ ದಿವ್ಯಮಣಿ ಹಾಗೂ ಮಾಲತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ವೈದ್ಯರು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ತಾಯಿ-ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿಯ ಒಂದು ಭಾಗ ಹಾರಿ ಹೋಗಿದೆ.

ಉದಯಗಿರಿ ಬಡಾವಣೆಯಲ್ಲಿ ಪಶುವೈದ್ಯ ನಾಗೇಂದ್ರ ಅವರ ಮನೆಯಲ್ಲಿ ದಿಲೀಪ್ ಎಂಬುವವರು ಬಾಡಿಗೆಗೆ ವಾಸವಾಗಿದ್ದು, ಅವರ ಕುಟುಂಬದ ದಿವ್ಯಮಣಿ (೫೫) ಹಾಗೂ ಪುತ್ರಿ ಮಾಲತಿ (೨೫) ಗಾಯಗೊಂಡವರು ಎಂದು ತಿಳಿದುಬಂದಿದೆ. ರಾತ್ರಿ ತಾಯಿ ದಿವ್ಯಮಣಿ ಹಾಗೂ ಪುತ್ರಿ ಮಾಲತಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದರು. ಈ ವೇಳೆ ಅಡುಗೆಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್‌ನಿಂದ ಏಕಾಏಕಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯೊಳಗೆ ಭಾರೀ ಶಬ್ದ ಉಂಟಾಗಿದ್ದು, ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡರು. ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿಯ ಒಂದು ಭಾಗ ಹಾನಿಗೊಳಗಾಗಿದ್ದು, ಮನೆಯಲ್ಲಿದ್ದ ಕೆಲವು ವಸ್ತುಗಳು ಕೂಡ ಹಾನಿಗೊಳಗಾಗಿವೆ. ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡಿದ್ದ ತಾಯಿ-ಮಗಳಿಗೆ ನೆರವಾದರು. ಘಟನೆಯಲ್ಲಿ ದಿವ್ಯಮಣಿ ಹಾಗೂ ಮಾಲತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ವೈದ್ಯರು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಿಲಿಂಡರ್ ಸ್ಫೋಟಗೊಂಡಿರುವ ಸ್ಥಳವನ್ನು ಪರಿಶೀಲಿಸಿದ ಪೊಲೀಸರು, ಘಟನೆಗೆ ಕಾರಣವಾಗಿರಬಹುದಾದ ಅಂಶಗಳ ಕುರಿತು ಮಾಹಿತಿ ಕಲೆಹಾಕಿದರು. ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿತೇ ಅಥವಾ ಸಿಲಿಂಡರ್‌ನಲ್ಲಿ ತಾಂತ್ರಿಕ ದೋಷವಿತ್ತೇ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ. ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿರುವುದು ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಸ್ಫೋಟದ ವೇಳೆ ಮನೆಯಲ್ಲಿದ್ದ ಇತರರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ಮುಂದುವರಿದಿದ್ದು, ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ಹಾಗೂ ಉಂಟಾಗಿರುವ ಹಾನಿಯ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಹಾಸನದ ಕ್ರೀಡಾಪಟುಗಳ ಸಾಧನೆ
ಕನಿಷ್ಠ ವೇತನ ಪರಿಷ್ಕರಣೆ ಆದೇಶ ತಕ್ಷಣ ಜಾರಿಯಾಗಲಿ