ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ

KannadaprabhaNewsNetwork |  
Published : Mar 12, 2025, 12:47 AM IST
11ಎಚ್ಎಸ್ಎನ್21 : ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗ. | Kannada Prabha

ಸಾರಾಂಶ

ಮದುವೆಯಾದ 8 ತಿಂಗಳಲ್ಲೇ ಅತ್ತೆ ಸೊಸೆ ಜಗಳದಿಂದ ಪತ್ನಿ ದೂರಾದ ಹಿನ್ನೆಲೆಯಲ್ಲಿ ಮನನೊಂದು ತಾಯಿ ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಎಂಟು ತಿಂಗಳ ಹಿಂದಷ್ಟೇ ಭರತ್‌ಗೆ ಅರಸೀಕೆರೆ ತಾಲೂಕಿನ ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿತ್ತು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ನಡೆಯುತ್ತಿತ್ತು.

ಕನ್ನಡಪ್ರಭ ವಾರ್ತೆ ಹಾಸನ

ಮದುವೆಯಾದ 8 ತಿಂಗಳಲ್ಲೇ ಅತ್ತೆ ಸೊಸೆ ಜಗಳದಿಂದ ಪತ್ನಿ ದೂರಾದ ಹಿನ್ನೆಲೆಯಲ್ಲಿ ಮನನೊಂದು ತಾಯಿ ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.

ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಕಳೆದ ಎಂಟು ತಿಂಗಳ ಹಿಂದಷ್ಟೇ ಭರತ್‌ಗೆ ಅರಸೀಕೆರೆ ತಾಲೂಕಿನ ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿತ್ತು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಗೀತಾ ಮನೆ ಬಿಟ್ಟು ಹೋಗಿದ್ದಳು. ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ-ಪಂಚಾಯ್ತಿ ಮಾಡಿದ್ದರು. ಆದರೂ ಪತ್ನಿ ಗೀತಾ ಗಂಡನ ಜೊತೆ ಇರದೆ ತವರು ಮನೆಗೆ ಹೋಗಿದ್ದಳು. ಇದರಿಂದ ಮನನೊಂದಿದ್ದ ತಾಯಿ-ಮಗ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಹಿರಿಸಾವೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ