ಕನ್ನಡಪ್ರಭವಾರ್ತೆ ಮಡಿಕೇರಿಆಹಾರ ಅರಸಿ ಬಂದ ಕಾಡಾನೆಗಳ ಹಿಂಡಿನಲ್ಲಿದ್ದ ಮರಿಯಾನೆಯೊಂದು ಸೆಫ್ಟಿಕ್ ಟ್ಯಾಂಕ್ ಗೆ ಬಿದ್ದ ಘಟನೆ ಕುಶಾಲನಗರ ಅರಣ್ಯ ವಲಯದ ನೆಲ್ಯಹುದಿಕೇರಿ ವ್ಯಾಪ್ತಿಯ ನಾಲ್ವತೆಕ್ರೆಯಲ್ಲಿ ನಡೆದಿದೆ.ನಾಲ್ವತೆಕ್ರೆ ನಿವಾಸಿ ಮಣಿ ಎಂಬುವವರ ಮನೆ ಬಳಿ ಬಂದ ಆನೆ ಗುಂಪಿನಲ್ಲಿದ್ದ ಮರಿಯೊಂದು ನಿರ್ಮಾಣ ಹಂತದಲ್ಲಿರೋ ಸೆಫ್ಟಿಂಕ್ ಟ್ಯಾಂಕ್ಗೆ ಬಿದ್ದಿದೆ. ಮಂಗಳವಾರ ರಾತ್ರಿ 7.30 ಸುಮಾರಿಗೆ ಘಟನೆ ನಡೆದಿದ್ದು, ಗುಂಡಿಯಿಂದ ಮೇಲಕ್ಕೆರಲು ಮರಿಯಾನೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟಿದೆ. ಕೂಡಲೇ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ತಲುಪುವ ಮುನ್ನವೇ ತಾಯನೆ ಸಹಾಯದಿಂದ ಗುಂಡಿಯಿಂದ ಮೇಲೇರಿದ ಆನೆ ಮರಿ ಗುಂಪಿನೊಂದಿಗೆ ಕಾಡಿನತ್ತ ಸಾಗಿದೆ.
ಡಿಆರ್ಎಫ್ಒ ಸಚಿನ್ ನಿಂಬಾಳ್ಕರ್, ಅರಣ್ಯ ವೀಕ್ಷಕರಾದ ಜಗದೀಶ್, ತಿಲಕ್, ಸತೀಶ್, ಆಶಿಕ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.