ಕನ್ನಡಪ್ರಭ ವಾರ್ತೆ ಹರಪನಹಳ್ಳಿ
ಶಮನಾಬಾನು (18) ತಾಯಿಯಿಂದ ಕೊಲೆಗೀಡಾದ ಮಗಳು. ಬೇಗಂಬೀ (50) ಮಗಳನ್ನು ಕೊಂದು ನೇಣಿಗೆ ಶರಣಾದ ತಾಯಿ.ಕ್ಷುಲ್ಲಕ ವಿಚಾರದಲ್ಲಿ ಶುಕ್ರವಾರ ರಾತ್ರಿ ತಾಯಿ ಬೇಗಂಬೀ ಹಾಗೂ ಮಗಳು ಶಮನಾಬಾನು ಮತ್ತು ಮಗ ಅಮಾನುಲ್ಲಾ ಮಧ್ಯೆ ಜಗಳ ಆರಂಭವಾಗಿದೆ. ಆನಂತರ ಬೆಳಗಿನ ಜಾವ ಇಬ್ಬರು ಮಕ್ಕಳ ತಲೆಗೆ ತಾಯಿ ಬೇಗಂಬೀ ಕಟ್ಟಿಗೆಯಿಂದ ಬಲವಾಗಿ ಹೊಡೆದಿದ್ದಾಳೆ. ಮಗಳಾದ ಶಮನಾಬಾನು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾಳೆ. ಮಗ ಅಮಾನುಲ್ಲಾ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ.
ಇಬ್ಬರೂ ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದು ತಾನೂ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಶನಿವಾರ ಬೆಳಗ್ಗೆ 7 ಗಂಟೆಗೆ ಅದೇ ಗ್ರಾಮದ ನನ್ನೇ ಸಾಹೇಬ್ ಎಂಬವರು ಬೇಗಂಬೀ ಅವರ ಮನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಅಮಾನುಲ್ಲಾಗೆ ಹರಪನಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತ ಬೇಗಂಬೀ ಗಂಡನ ತಮ್ಮ ಅಂಗಡಿ ಅಬ್ದುಲ್ಲಾ ಸಾಹೇಬ್ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಶ್ವಾನದಳ, ಬೆರಳಚ್ಚು ತಜ್ಞರನ್ನು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರನ್ನು ಕರೆಯಿಸಿ ಹೆಚ್ಚಿನ ಸಾಕ್ಷಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಎಸ್ಪಿ ಶ್ರೀಹರಿಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.