ಮುಡಾ ನಿವೇಶನ ಪ್ರಕರಣ : ಮರಳಿಸಿದ ಹದಿನಾಲ್ಕು ಸೈಟ್ ಮತ್ತೆ ಪಡೆದುಕೊಳ್ಳುತ್ತೇವೆ : ಯತೀಂದ್ರ ಸಿದ್ದರಾಮಯ್ಯ

KannadaprabhaNewsNetwork |  
Published : Mar 09, 2025, 01:45 AM ISTUpdated : Mar 09, 2025, 10:23 AM IST
Yathindra siddaramaiah

ಸಾರಾಂಶ

ಮುಡಾ ನಿವೇಶನ ಪ್ರಕರಣದ ತನಿಖಾ ಪ್ರಕ್ರಿಯೆ ‌ಮುಗಿದ ಮೇಲೆ ಕೋರ್ಟ್ ಮೂಲಕವೇ 14 ಸೈಟ್ ಹಿಂದಕ್ಕೆ ಪಡೆಯುವ ಬಗ್ಗೆ ನಮ್ಮ ತಾಯಿ ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

 ಮೈಸೂರು : ಮುಡಾ ನಿವೇಶನ ಪ್ರಕರಣದ ತನಿಖಾ ಪ್ರಕ್ರಿಯೆ ‌ಮುಗಿದ ಮೇಲೆ ಕೋರ್ಟ್ ಮೂಲಕವೇ 14 ಸೈಟ್ ಹಿಂದಕ್ಕೆ ಪಡೆಯುವ ಬಗ್ಗೆ ನಮ್ಮ ತಾಯಿ ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ. ನೋಟಿಸ್‌ನಿಂದ ನಮ್ಮ ತಾಯಿ ಮನಸಿಕವಾಗಿ ನೊಂದಿದ್ದರು. ಈಗ ಹೈ ಕೋರ್ಟ್‌ ಇಸಿಆರ್‌ ರದ್ದು, ವಿಚಾರಣೆಗೆ ಹಾಜರಾಗಲು ನೀಡಿದ್ದ ಸಮನ್ಸ್‌ ವಜಾ ಮಾಡಿ ತೀರ್ಪು ನೀಡಿದ್ದರಿಂದ ಸಮಾಧಾನವಾಗಿದೆ. ನಮ್ಮ ತಂದೆಯನ್ನು ಈ ಪ್ರಕರಣದಲ್ಲಿ ವಿನಾ ಕಾರಣ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು. ಈ ಕಾರಣಕ್ಕಾಗಿ ನಾವು 14 ಸೈಟ್ ಗಳನ್ನು ವಾಪಸ್ಸು ಕೊಟ್ಟಿದ್ದೆವು. ನ್ಯಾಯ ಪ್ರಕಾರವಾಗಿ ನಮಗೆ ಆ ಸೈಟ್ ಗಳು ಬರಬೇಕಿದೆ ಎಂದು ಯತೀಂದ್ರ ವಾದಿಸಿದರು.

ಅವತ್ತಿನ ಸಂದರ್ಭದಲ್ಲಿ ನಮಗೆ ಸೈಟ್‌ ವಾಪಸ್ಸು ಕೊಡಬೇಕಾದ ವಾತಾವರಣ ನಿರ್ಮಾಣ ಮಾಡಿದ್ದರು. ವಿನಾಕಾರಣ ಟೀಕೆ ನಾವು ನಿಲ್ಲಿಸಬೇಕಾಗಿತ್ತು. ಹೀಗಾಗಿ ನಾವು ಸೈಟ್ ವಾಪಸ್ಸು ಕೊಟ್ಟಿದ್ದೆವು. ನಮ್ಮದು ತಪ್ಪಿಲ್ಲ ಎಂದು ತನಿಖಾ ವರದಿ ಬಂದಿದೆ. ಅದ್ದರಿಂದ ಸೈಟ್ ಹಿಂದಕ್ಕೆ ಪಡೆಯುವ ಬಗ್ಗೆ ನಮ್ಮ ತಾಯಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!