ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಅಡುಗೆ ಎಣ್ಣೆ ಬೆಲೆ ಎಷ್ಟಾಗಿದೆ? ಸಿಲಿಂಡರ್ ಗ್ಯಾಸ್ ಬೆಲೆ ಎಷ್ಟಿದೆ? ಎಂದು ಮಹಿಳೆಯರನ್ನು ಪ್ರಶ್ನೆ ಮಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬೆಲೆ ಎಷ್ಟಿತ್ತು ಎಂಬುದನ್ನು ಮನವರಿಕೆ ಮಾಡಲು ಪ್ರಯತ್ನಿಸಿದರು.
ಅಲ್ಲೇ ಇದ್ದ ಯುವಕರತ್ತ ನೋಡುತ್ತ ಪೆಟ್ರೋಲ್ ಬೆಲೆ ಎಷ್ಟಾಗಿದೆ ? ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಹೇಳಿದ್ದ ಮೋದಿಯವರು ಹತ್ತು ವರ್ಷಗಳಲ್ಲಿ ಎಷ್ಟು ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.ಸಾಮರಸ್ಯದ ಬದುಕು ಕಾಂಗ್ರೆಸ್ ಪಕ್ಷದ ಆಶಯ. ಆದರೆ ಯುವಕರಲ್ಲಿ ಧರ್ಮದ ವಿಷ ಬೀಜ ಬಿತ್ತುವ ಪ್ರಯತ್ನ ನಡೆದಿದೆ. ಯುವಕರಿಗೆ ಬದುಕು ಕಟ್ಟಿಕೊಳ್ಳಲು ಮಾರ್ಗದರ್ಶನ ಮಾಡುವ ಬದಲಿಗೆ ಅವರಲ್ಲಿ ಧರ್ಮದ ಅಫೀಮು ಕೊಡುತ್ತಿದ್ದಾರೆ. ಸ್ವಾಸ್ಥ್ಯ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕಾದವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಯುವಕರು ಇದನ್ನು ಗಂಭೀರವಾಗಿ ಆಲೋಚಿಸಿ ದೇಶದ ಭವಿಷ್ಯಕ್ಕಾಗಿ ಯಾರಿಗೆ ಅಧಿಕಾರ ಕೊಡಬೇಕು ಎಂಬುದನ್ನುನಿರ್ಧರಿಸಬೇಕು ಎಂದು ಮನವಿ ಮಾಡಿದರು.
ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂತೋಷ ಹೊಕ್ರಾಣಿ ಮತ್ತಿತರ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.