ಹೂವಿನಹಡಗಲಿ: ಬಳ್ಳಾರಿ ಸಂಸದರ ನಿಧಿಯಲ್ಲಿ ವಿಕಲಚೇತನರಿಗೆ ವಿತರಣೆಯಾಗಬೇಕಿದ್ದ 14 ಯಂತ್ರ ಚಾಲಿತ ತ್ರಿಚಕ್ರ ವಾಹನಗಳು, ವಿಜಯನಗರ ಜಿಲ್ಲಾ ಒಳ ಕ್ರೀಡಾಂಗಣದಲ್ಲಿ ಮಳೆ, ಗಾಳಿ ಬಿಲಿಸಿಗೆ ಮೈಯೊಡ್ಡಿ ತುಕ್ಕು ಹಿಡಿಯುತ್ತಿವೆ.
ವಿಕಲಚೇತನರಿಗೆ ವಾಹನಗಳ ವಿತರಣೆಗೆ ಕೆಲ ಸಮಸ್ಯೆಗಳು ಅಡ್ಡಿಯಾಗಿವೆ. ಇದರಲ್ಲಿ ಫಲಾನುಭವಿಗಳು ಎರಡು ಬಾರಿ ಅರ್ಜಿ ಸಲ್ಲಿಸಿದ್ದಾರೆ. ಅಂಧರು, ಕೈ ಇಲ್ಲದವರೂ ಅರ್ಜಿ ಹಾಕಿದ್ದಾರೆ. ಇಂತಹವರನ್ನು ಆಯ್ಕೆ ಮಾಡಲು ಬರುವುದಿಲ್ಲ. ಇದರಲ್ಲಿಯೂ ರಾಜಕೀಯ ಒಳಸುಳಿ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಮತ್ತಷ್ಟು ವಿಳಂಬವಾಗಿದೆ ಎನ್ನಲಾಗಿದೆ.
ಕಳೆದ 4 ತಿಂಗಳ ಹಿಂದೆಯೇ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನಗಳು ವಿತರಣೆಯಾಗಬೇಕಿತ್ತು. ಆದರೆ, ವಿಜಯನಗರ ಜಿಲ್ಲಾ ಒಳ ಕ್ರೀಡಾಂಗಣದ ಆವರಣದಲ್ಲಿ, ಬಿಸಿಲು, ಮಳೆ, ಗಾಳಿಗೆ ತುಕ್ಕು ಹಿಡಿದು ಹಾಳಾಗುತ್ತಿವೆ. ಕೂಡಲೇ ಸಂಸದ ಈ ತುಕಾರಾಂ ಹಾಗೂ ಶಾಸಕ ಕೃಷ್ಣನಾಯ್ಕ ಈ ಕುರಿತು ಗಮನ ಹರಿಸಿ ವಿತರಣೆ ಮಾಡಬೇಕೆಂಬ ಒತ್ತಾಯ ಕೇಳಿ ಬರುತ್ತಿವೆ.ಈಗಾಗಲೇ ಫಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧವಿದೆ. ಜತೆಗೆ ಅವರ ಹೆಸರಿನಲ್ಲಿ ವಾಹನಗಳ ಆರ್ಟಿಒ ಕಚೇರಿಯಲ್ಲಿ ನೋಂದಣಿಯಾಗಿವೆ. ತಾಂತ್ರಿಕ ದೋಷವಿದೆ ಎಂಬ ಕುಂಟು ನೆಪ ಹೇಳುತ್ತ, ವಾಹನಗಳ ವಿತರಣೆಗೆ ಕ್ರಮ ಕೈಗೊಳ್ಳದಿರುವ ಹಿಂದಿನ ಮರ್ಮವೇನು? ವಾಹನಗಳು ಹಾಳಾಗುವ ಮೊದಲೇ ಬಡ ಫಲಾನುಭವಿಗೆ ವಿತರಣೆ ಮಾಡಿದರೇ ಅನುಕೂಲವಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ.
ವಿಕಲಚೇತನ ಹಾಗೂ ಪಾಲಕರ ಸಂಘದ ಅಧ್ಯಕ್ಷ ಎಸ್. ಚಂದ್ರಪ್ಪ ತಳಕಲ್ಲು ತಿಳಿಸಿದರು.