ಕೋಲ್ಡ್‌ ಸ್ಟೋರೆಜ್‌ ನಿರ್ಮಾಣಕ್ಕೆ ಮುಂದಾಗಿ

KannadaprabhaNewsNetwork |  
Published : Dec 24, 2025, 04:15 AM IST
ಸಂಸದ ಜಗದೀಶ ಶೆಟ್ಟರ ಅಧ್ಯಕ್ಷತೆಯಲ್ಲಿ ಡಿಸಿಸಿ- ಡಿಎಲ್ಆರ್‌ಸಿ ಸಭೆ ನಡೆಯಿತು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಬೈಲಹೊಂಗಲ ಮತ್ತು ಸವದತ್ತಿ ತಾಲೂಕುಗಳಲ್ಲಿ ಕೋಲ್ಡ್ ಸ್ಟೋರೇಜ್ ಅಗತ್ಯವಿದ್ದು, ನಬಾರ್ಡ್ ಅಧಿಕಾರಿಗಳು ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೈಲಹೊಂಗಲ ಮತ್ತು ಸವದತ್ತಿ ತಾಲೂಕುಗಳಲ್ಲಿ ಕೋಲ್ಡ್ ಸ್ಟೋರೇಜ್ ಅಗತ್ಯವಿದ್ದು, ನಬಾರ್ಡ್ ಅಧಿಕಾರಿಗಳು ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ 2025–26ನೇ ಸಾಲಿನ ಮೂರನೇ ತ್ರೈಮಾಸಿಕ ಡಿಸಿಸಿ–ಡಿ.ಎಲ್.ಆರ್.ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಲಹೊಂಗಲ ಮತ್ತು ಸವದತ್ತಿ ತಾಲೂಕುಗಳಲ್ಲಿ ಈ ಬಗ್ಗೆ ರೈತರಿಂದ ಬೇಡಿಕೆ ಇದೆ. ಇದರಿಂದ ರೈತರು ಬೆಳೆಯುವ ತರಕಾರಿ, ಹಣ್ಣುಗಳು ಹಾಗೂ ಬೆಳೆಗಳಿಗೆ ಅನುಕೂಲವಾಗಲಿದೆ. ಅಲ್ಲದೇ,

ಬೆಳಗಾವಿ ನಗರದ ಎಪಿಎಂಸಿ ಆವರಣದಲ್ಲಿ ಇತ್ತೀಚೆಗೆ ಪ್ರಾರಂಭಿಸಲಾಗಿರುವ ಕೋಲ್ಡ್ ಸ್ಟೋರೇಜ್‌ನಿಂದ ಉಂಟಾಗಿರುವ ಅನುಕೂಲಗಳ ಬಗ್ಗೆ ಮಾಹಿತಿ ಪಡೆದು, ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರಿಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತಿದ್ದು, ಇದರಿಂದ ಅನೇಕ ವ್ಯಾಪಾರಸ್ಥರು ಪ್ರಯೋಜನ ಪಡೆದಿದ್ದಾರೆ. ಹೀಗಾಗಿ, ಅಗತ್ಯವಿರುವ ವ್ಯಾಪಾರಿಗಳಿಗೆ ಈ ಯೋಜನೆಯಡಿ ಸಾಲ ದೊರಕಿಸಿಕೊಡಿ. ಜೊತೆಗೆ ಪಿಎಂ ವಿಶ್ವಕರ್ಮ, ಪಿಎಂ ಇಜಿಪಿ, ಎನ್.ಎಲ್.ಎಮ್, ಎಸ್.ಎಚ್.ಜಿ ಯೋಜನೆಯಡಿ ಕೂಡ ಅರ್ಹರಿಗೆ ಸೌಲಭ್ಯಗಳನ್ನು ಒದಗಿಸುವಂಯೆ ಸೂಚನೆ ನೀಡಿದರು.

ಇತ್ತೀಚೆಗೆ ಎಟಿಎಂ ದರೋಡೆ ಹಾಗೂ ಗ್ರಾಹಕರಿಗೆ ಅಪರಿಚಿತರಿಂದ ತೊಂದರೆಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬ್ಯಾಂಕುಗಳು ಸಂಬಂಧಿಸಿದ ಎಟಿಎಮ್ ಕೇಂದ್ರಗಳಲ್ಲಿ ಸೆಕ್ಯುರಿಟಿ ಗಾರ್ಡ್‌ಗಳನ್ನು ನಿಯೋಜಿಸಬೇಕು. ಗ್ರಾಹಕರಿಗೆ ತೊಂದರೆಯಾಗದಂತೆ ತಾಂತ್ರಿಕ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.ಬಿ.ಸಿ ಸಖಿಗಳನ್ನು ನಿಯೋಜಿಸಿ

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಜಿಲ್ಲೆಯ 500 ಗ್ರಾಮ ಪಂಚಾಯತಿಗಳಲ್ಲಿ ಪ್ರಸ್ತುತ 74 ಗ್ರಾಪಂ ವ್ಯಾಪ್ತಿಯಲ್ಲಿ ಮಾತ್ರ ಬಿ.ಸಿ ಸಖಿಗಳು (ಬ್ಯುಸಿನೆಸ್ ಕರೆಸ್ಪಂಡೆಂಟ್) ಇದ್ದು, ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಬ್ಯಾಂಕ್‌ಗಳು ಬಿ.ಸಿ ಸಖಿಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಮಾತನಾಡಿ, ಜನಸುರಕ್ಷಾ ಯೋಜನೆಯಡಿ ಪಿಎಂಜೆಜೆಬಿವೈ ಹಾಗೂ ಪಿಎಂಎಸ್‌ ಬಿವೈಯಡಿ ಹೆಚ್ಚಿನ ಜನರ ನೋಂದಣಿ ಮಾಡಿಸಬೇಕು. ನೋಂದಣಿ ಅಭಿಯಾನಕ್ಕೆ ಸಹಕಾರ ನೀಡುವಂತೆ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಎಲ್ಲ ಬ್ಯಾಂಕುಗಳಲ್ಲಿನ ಸಿಬ್ಬಂದಿ ಗ್ರಾಹಕರೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂದು ಸೂಚಿಸಿದರು.ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ್ ಘೋಡಕೆ, ಭಾರತೀಯ ರಿಸರ್ವ್ ಬ್ಯಾಂಕ್‌ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರಭಾಕರನ್, ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಶ್ರೀವಿದ್ಯಾ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಅಭಿನವ್ ಯಾದವ್, ಎಲ್ಲ ಬ್ಯಾಂಕ್‌ಗಳ ಹಾಗೂ ಅನುಷ್ಠಾನ ಇಲಾಖೆಗಳ ಪ್ರತಿನಿಧಿಗಳು ಹಾಜರಿದ್ದರು.

----ಕೋಟ್‌ಬ್ಯಾಂಕಿಂಗ್ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಎಲ್ಲಾ ಸದಸ್ಯ ಬ್ಯಾಂಕ್‌ಗಳು ಶಾಖೆಗಳ ತೆರೆಯುವಿಕೆಗೆ ಸಂಬಂಧಪಟ್ಟ ಅರ್ಜಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಜೊತೆಗೆ ಬಾಕಿ ಇರುವ ಎಲ್ಲಾ ಪ್ರಾಯೋಜಿತ ಯೋಜನೆಗಳ ಅರ್ಜಿಗಳನ್ನು ಕೂಡ ತ್ವರಿತವಾಗಿ ಪ್ರಕ್ರಿಯೆಗೊಳಿಸಿ ಪೂರೈಸಬೇಕು.ರಾಹುಲ್‌ ಶಿಂಧೆ, ಜಿಪಂ ಸಿಇಒ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ