ಸೋಲಾರ್ ಅಳವಡಿಕೆ ಯೋಜನೆ ತೀವ್ರಗೊಳಿಸಲು ಸಂಸದ ಚೌಟ ನಿರ್ದೇಶನ

KannadaprabhaNewsNetwork |  
Published : Jan 02, 2025, 12:34 AM IST
ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸಭೆ ನಡೆಸುತ್ತಿರುವುದು | Kannada Prabha

ಸಾರಾಂಶ

ಜನವರಿ 2 ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ಅಳವಡಿಸಿರುವ ಗ್ರಾಹಕರ ಅನುಭವವನ್ನು ತಿಳಿದುಕೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರ್ಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಾಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರ್ಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್‌ಗೆ 30 ಸಾವಿರ ರು., 2 ಕಿಲೋ ವ್ಯಾಟ್ 60 ಸಾವಿರ ರು., 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‌ಗಳಿಗೆ 78 ಸಾವಿರ ರು. ವರೆಗೆ ಸಬ್ಸಿಡಿ ದೊರಕಲಿದೆ ಎಂದು ಅವರು ತಿಳಿಸಿದರು.

ಈ ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್‍ನ್ನು ತಮ್ಮ ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್‌ನ್ನು ಮೆಸ್ಕಾಂಗೆ ಮಾರಬಹುದಾಗಿದೆ ಎಂದು ಸಂಸದರು ತಿಳಿಸಿದರು.

ಇಂದು ಕೇಂದ್ರ ಸಚಿವರು ಜಿಲ್ಲೆಗೆ: ಜನವರಿ 2 ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ಅಳವಡಿಸಿರುವ ಗ್ರಾಹಕರ ಅನುಭವವನ್ನು ತಿಳಿದುಕೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು.

ಮೆಸ್ಕಾಂ ವ್ಯವಸ್ಥಾಪನಾ ನಿರ್ದೇಶಕ ಜಯಕುಮಾರ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 675 ಜನರು ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ. ಸಾರ್ವಜನಿಕರು ಅರ್ಜಿಯನ್ನು ನೋಂದಾಯಿಸಲು ಆನ್‍ಲೈನ್ www.pmsuryaghar.gov.in ಗೆ ಭೇಟಿ ನೀಡಬಹುದು ಎಂದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಮಾತನಾಡಿ, ಪ್ರಧಾನಮಂತ್ರಿ ಸೋಲಾರ್ ಘರ್ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್, ಲೀಡ್ ಬ್ಯಾಂಕ್ ಮೆನೇಜರ್ ಕವಿತಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ