ನಗರಸಭೆ ಪೌರಾಯುಕ್ತರು, ಎಂಜಿನಿಯರ್ಗಳೊಂದಿಗೆ ಸಭೆ, ಚರ್ಚೆ
ಚಿತ್ರದುರ್ಗ ನಗರದಲ್ಲಿ ಕೃತಕವಾಗಿ ಸೃಷ್ಟಿಯಾಗಿರುವ ಕುಡಿಯುವ ನೀರಿನ ಅಭಾವ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಗೋವಿಂದ ಕಾರಜೋಳ ನಗರಸಭೆ ಪೌರಾಯುಕ್ತೆ ಹಾಗೂ ಎಂಜಿನಿಯರ್ಗೆ ಸೂಚನೆ ನೀಡಿದರು.
ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಶುಕ್ರವಾರ ಸಂಸದ ಕಚೇರಿಯಲ್ಲಿ ನಗರಸಭೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಚಿತ್ರದುರ್ಗ ನಗರಕ್ಕೆ ಪ್ರಸ್ತುತ ವಿವಿ ಸಾಗರ ಮತ್ತು ದಾವಣಗೆರೆ ಜಿಲ್ಲೆಯ ಶಾಂತಿಸಾಗರದಿಂದ ಕುಡಿಯುವ ನೀರು ಸರಬರಾಜಾಗುತ್ತಿದೆ, ಹೀಗಿದ್ದೂ ಕೂಡ ಚಿತ್ರದುರ್ಗ ನಗರದ 2,3,4 ಮತ್ತು 5 ನೇ ವಾರ್ಡುಗಳಿಗೆ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ನೀರು ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲದಿಂದರೂ ಜನರಿಗೆ ನೀರು ಕೊಡಲು ಏಕೆ ಉದಾಸೀನ ಎಂದರು. ಬೇಸಿಗೆ ಕಾಲದಲ್ಲಿ ನಗರದ ಜನತೆಗೆ ಕುಡಿಯುವ ನೀರು ಕೊಡಲಾಗುತ್ತಿಲ್ಲ ಎಂದರೆ ಏನರ್ಥ? ಕೂಡಲೇ ಸಮಸ್ಯೆ ಪರಿಹರಿಸಿ ವರದಿ ನೀಡುವಂತೆ ತಾಕೀತು ಮಾಡಿದರು.ಚಿತ್ರದುರ್ಗ ನಗರದ ಕರುವಿನಕಟ್ಟೆ ಸರ್ಕಲ್, ಕೋಟೆ ರಸ್ತೆ, ದೊಡ್ಡಪೇಟೆ, ಚಿಕ್ಕಪೇಟೆ ಸೇರಿದಂತೆ ಅನೇಕ ಬಡಾವಣೆಗಳಿಗೆ ನಗರಸಭೆಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿಲ್ಲ. ಕಳೆದ ಒಂದು ತಿಂಗಳ ಹಿಂದೆ ಐದು ದಿನಕ್ಕೊಮ್ಮೆ ನೀರು ಕೊಡಲಾಗುತ್ತಿತ್ತು, ಈಗ ಒಂದು ತಿಂಗಳಿನಿಂದ ನೀರನ್ನು ಸಾರ್ವಜನಿಕರಿಗೆ ಕೊಡುತ್ತಿಲ್ಲ, ಕುಡಿಯುವ ನೀರೇ ಸಿಗದಿದ್ದರೆ ಸಾರ್ವಜನಿಕರ ಪಾಡೇನು ಎಂದು ಪ್ರಶ್ನಿಸಿದರು.
ಚಿತ್ರದುರ್ಗದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಡಿವೈಡರ್ಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಸಂಸದರ ಮುಂದೆ ಇದೇ ವೇಳೆ ಹರವಿದ ವ್ಯಾಪಾರಸ್ಥರು ಮಳೆಗಾಲದಲ್ಲಿ ಅನುಭವಿಸುತ್ತಿರುವ ನೋವು ತೋಡಿಕೊಂಡರು. ಮಳೆಗಾಲದಲ್ಲಿ ನೀರು ಅಂಗಡಿಗಳೊಳಕ್ಕೆ ನುಗ್ಗುತ್ತಿದೆ ಎಂದು ದೂರಿದರು.
ಸ್ಲಂ ಬೋರ್ಡ್ ಎಂಜಿನಿಯರ್ಗಳಿಗೆ ಈ ಸಮಸ್ಯೆಯನ್ನು ಏ.5ನೇ ತಾರೀಖಿನೊಳಗಾಗಿ ಪರಿಹರಿಸಿ ಹಕ್ಕುಪತ್ರಗಳನ್ನು ವಿತರಣೆ ಮಾಡಲು ದಿನಾಂಕ ನೀಡುತ್ತೇನೆ. ಎಲ್ಲರೂ ಸೇರಿ ಹಕ್ಕುಪತ್ರಗಳನ್ನು ಜನರಿಗೆ ನೀಡೋಣ ಎಂದು ಗೋವಿಂದ ಕಾರಜೋಳ ಹೇಳಿದರು.