ಉಡುಪಿ: ಗ್ರಾಮ ಆಡಳಿತ ಅಧಿಕಾರಿಗಳ ಧರಣಿಗೆ ಸಂಸದ ಕೋಟ ಭೇಟಿ

KannadaprabhaNewsNetwork |  
Published : Oct 03, 2024, 01:19 AM IST
ಕೋಟ30 | Kannada Prabha

ಸಾರಾಂಶ

ಮನವಿ ಸ್ವೀಕರಿಸಿದ ಸಂಸದ ಕೋಟ ಸಂಬಂಧಪಟ್ಟ ಕಂದಾಯ ಸಚಿವರ ಜೊತೆ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಕೋರಿಕೆಯನ್ನು ಮನವರಿಕೆ ಮಾಡುತ್ತೇನೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಹಲವು ಬೇಡಿಕೆಗಳನ್ನು ಮುಂದಿರಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿ ಧರಣಿ ನಿರತರ ಮನವಿ ಸ್ವೀಕರಿಸಿದರು.

15ಕ್ಕೂ ಹೆಚ್ಚು ಆ್ಯಪ್‌ ಗಳ ಮೂಲಕ ಇಲಾಖೆಯ ಕಾರ್ಯಕ್ರಮಗಳು ನಡೆಯುತ್ತಿದ್ದು, ನಮಗೆ ಇಲ್ಲಿಯವರೆಗೆ ಯಾವುದೆ ಮೊಬೈಲ್ ಫೋನ್ ಗಳ ಸರಬರಾಜು ಮಾಡಿಲ್ಲ, ಹಾಗಿರುವಾಗ ಜನರ ಕೆಲಸಗಳನ್ನು ಹೇಗೆ ಮಾಡುವುದು ಎಂದು ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ದೂರಿದರು.

ತಮ್ಮಿಂದ ಇಲಾಖೆಯು ರಜಾ ದಿನಗಳಲ್ಲಿಯೂ ಕೆಲಸ ಮಾಡಿಸಿಕೊಳ್ಳುತ್ತಿದ್ದು, ಹೆಚ್ಚುವರಿ ಸೌಲಭ್ಯ ನೀಡುತ್ತಿಲ್ಲ, ಅಂತರ್ ಜಿಲ್ಲಾ ವರ್ಗಾವಣೆ ನಿಲುಗಡೆ ಮಾಡಿದ್ದು, ನಾವು ಕೆಲವರಂತೂ 15 - 20 ವರ್ಷಗಳಿಂದ ತವರು ಜಿಲ್ಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲು ತಾವು ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಅವರು ಸಂಸದರನ್ನು ವಿನಂತಿಸಿದರು.

ಮನವಿ ಸ್ವೀಕರಿಸಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸಂಬಂಧಪಟ್ಟ ಕಂದಾಯ ಸಚಿವರ ಜೊತೆ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಕೋರಿಕೆಯನ್ನು ಮನವರಿಕೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!