3 ದಿನದಲ್ಲಿ 15,500 ಜನರ ನೋಂದಣಿ ಮಾಡಿದ ಅಧಿಕಾರಿಗಳು । ರೈತ ಬದಲಿಗೆ ವರ್ತಕರ ನೇಮಕ । ರೈತರ ಪಟ್ಟಿ ಬಿಡುಗಡೆಗೆ ಒತ್ತಾಯ ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಗುರುವಾರ ನಡೆದ ದಿಶಾ ಸಭೆಯಲ್ಲಿ ಕೊಬ್ಬರಿ ಖರೀದಿ ಕುರಿತು ಪರಿಶೀಲಿಸಿ ಮಾತನಾಡಿದರು. ಈಗಾಗಲೇ ಹಾಸನ ಜಿಲ್ಲೆಯಲ್ಲಿ ಕೊಬ್ಬರಿ ಖರೀದಿ ಕೇಂದ್ರ ತೆರೆದು ನೋಂದಾವಣಿ ಕಾರ್ಯ ನಡೆಯುತ್ತಿದೆ. ಆದರೆ ಇಲ್ಲಿ ಅಕ್ರಮ ನಡೆಸಲಾಗಿದೆ. ವರ್ತಕರಿಂದ ಕೊಬ್ಬರಿ ಖರೀದಿ ನಡೆಸಲಾಗಿದೆ ಎಂದು ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿದ್ದ ಎಪಿಎಂಸಿ ಅಧಿಕಾರಿ ಶ್ರೀಹರಿ ಅವರಿಗೆ ಪ್ರಶ್ನೆ ಮಾಡಿದರಲ್ಲದೆ ಯಾರಿಂದ ಕೊಬ್ಬರಿ ಖರೀದಿ ಮಾಡಲಾಗಿದೆ ಎಂಬ ಬಗ್ಗೆ ಫೆ.16 ರಂದು ನಡೆಯುವ ಸಭೆಯಲ್ಲಿ ಫಲಾನುಭವಿಗಳ ಪಟ್ಟಿ ಕೊಡಬೇಕು. ರೈತರ ಹೆಸರಿನಲ್ಲಿ ಬೇರೆ ಯಾರಿಂದಲಾದರೂ ಕೊಬ್ಬರಿ ಖರೀದಿ ಆಗಿದ್ದರೆ ತನಿಖೆ ಮಾಡಿ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.‘ಕೊಬ್ಬರಿ ಖರೀದಿ ಹಗರಣದ ಬಗ್ಗೆ ನಾನೇ ದೂರು ನೀಡುತ್ತೇನೆ. ಕೇಸ್ ದಾಖಲು ಮಾಡಿ, ಇಲ್ಲವೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿ’ ಎಂದು ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಕಲೇಶಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಬಿಎಸ್ಎನ್ಎಲ್ ಟವರ್ ಅಳವಡಿಸುವ ನಿಟ್ಟಿನಲ್ಲಿ ಅನುಮತಿಗಾಗಿ ಅರಣ್ಯ ಇಲಾಖೆಗೆ ಆನ್ಲೈನ್ ಮುಖಾಂತರ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿದರು. ಅಂಚೆ ಇಲಾಖೆಯಲ್ಲಿರುವ ಸವಲತ್ತುಗಳ ಕುರಿತು ಗ್ರಾಮೀಣ ಜನತೆಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ದಿಶಾ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಡಿಎಫ್ಒ ಸೌರಭ್ ಕುಮಾರ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಪರಪ್ಪಸ್ವಾಮಿ ಇದ್ದರು.ಹಾಸನದಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ದಿಶಾ ಸಭೆ ನಡೆಯಿತು.