ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ನೀಡುವಂತೆ ಸಂಸದ ಮನವಿ

KannadaprabhaNewsNetwork |  
Published : Nov 09, 2024, 01:23 AM IST
೮ಕೆಜಿಎಫ್೩ಪ್ರತಿಭಟನಾ ಸ್ಥಳಕ್ಕೆ ಸಂಸದ ಎಂ.ಮಲ್ಲೇಶ್‌ಬಾಬು ಹೊರ ಗುತ್ತಿಗೆ ಕಾರ್ಮಿಕರೊಂದಿಗೆ ಮಾತುಕತೆ ನಡೆಸುತ್ತಿರುವುದು. | Kannada Prabha

ಸಾರಾಂಶ

ನೀವು ಬಿಇಎಂಎಲ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕೆಲಸ ಮಾಡುತ್ತಿದ್ದು, ನಿಮ್ಮನ್ನು ಕಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ನಿಮ್ಮನ್ನು ಕಾಯಂಗೊಳಿಸಲು ಮುಂದಾದರೆ ಇತರೆ ಸರ್ಕಾರಿ ಕಾರ್ಖಾನೆಗಳಲ್ಲಿ ಗುತ್ತಿಗೆ ಆದಾರದ ಮೇರೆಗೆ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕಾದ ಪರಿಸ್ಥಿತಿ ಬರಲಿದ್ದು, ಆದು ಸಾಧ್ಯವಾಗದ ಮಾತು.

ಕನ್ನಡಪ್ರಭ ವಾರ್ತೆ ಕೆಜಿಎಫ್

ಬಿಇಎಂಎಲ್ ಹೊರ ಗುತ್ತಿಗೆ ಆಧಾರದ ಮೇರೆಗೆ ನೌಕರಿ ಮಾಡುತ್ತಿರುವ ೧೧೦೦ ಕಾರ್ಮಿಕರನ್ನು ಕಾಯಂಗೊಳಿಸಲು ಸಾಧ್ಯವಿಲ್ಲ, ಆದರೆ ಕಾರ್ಮಿಕರ ಇತರೆ ಬೇಡಿಕೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಬೆಮೆಲ್ ಸಿಎಂಡಿಯನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಅಲ್ಲಿ ಪರಿಹಾರ ಕಂಡು ಬರದಿದ್ದರೆ ಇದೇ ತಿಂಗಳ ೨೫ ರಂದು ಪ್ರಾರಂಭವಾಗುವ ಲೋಕಸಭಾ ಅಧಿವೇಶದಲ್ಲಿ ವಿಷಯ ಪ್ರಸ್ತಾಪ ಮಾಡುತ್ತೇನೆ ಎಂದು ಸಂಸದ ಎಂ.ಮಲ್ಲೇಶಬಾಬು ಹೊರ ಗುತ್ತಿಗೆ ಕಾರ್ಮಿಕರಿಗೆ ಆಶ್ವಾಸನೆ ನೀಡಿದರು.

ಹೊರ ಗುತ್ತಿಗೆ ಆಧಾರದ ಮೇರೆಗೆ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕು, ವೇತನ ಪರಿಷ್ಕರಣೆಗೊಳಿಸಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟು ಅನಿರ್ಧಿಷ್ಟಾವಧಿ ಮುಷ್ಕರ ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರು ನಗರದ ಪೈಲೈಟ್ಸ್ ವೃತ್ತದಲ್ಲಿ ಹೋರಾಟ ಪ್ರಾರಂಭಿಸಿ ೪ನೇ ದಿನಕ್ಕೆ ಕಾಲಿಟ್ಟಿದ್ದ ಹಿನ್ನಲೆಯಲ್ಲಿ ಸಂಸದ ಮಲ್ಲೇಶಬಾಬು ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರನ್ನು ಸಂತೈಸುವ ಕೆಲಸಕ್ಕೆ ಮುಂದಾದರು.

ಕಾರ್ಮಿಕರ ಅಹವಾಲುಗಳನ್ನು ಆಲಿಸಿದ ಸಂಸದ ಮಲ್ಲೇಶಬಾಬು ಮಾತನಾಡಿ, ನೀವು ಬಿಇಎಂಎಲ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕೆಲಸ ಮಾಡುತ್ತಿದ್ದು, ನಿಮ್ಮನ್ನು ಕಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ನಿಮ್ಮನ್ನು ಕಾಯಂಗೊಳಿಸಲು ಮುಂದಾದರೆ ಇತರೆ ಸರ್ಕಾರಿ ಕಾರ್ಖಾನೆಗಳಲ್ಲಿ ಗುತ್ತಿಗೆ ಆದಾರದ ಮೇರೆಗೆ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕಾದ ಪರಿಸ್ಥಿತಿ ಬರಲಿದ್ದು, ಆದು ಸಾಧ್ಯವಾಗದ ಮಾತು. ನಾನು ನಿಮ್ಮಲ್ಲಿ ಸುಳ್ಳು ಆಶ್ವಾಸನೆಗಳನ್ನು ನೀಡಿ ಹೋಗುವುದು ನನಗೆ ಇಷ್ಟವಾಗುವುದಿಲ್ಲ. ಕಾರ್ಮಿಕರ ವೇತನ ಪರಿಷ್ಕರಣೆಗೊಳಿಸಬೇಕಿದ್ದು ಹೊರ ಗುತ್ತಿಗೆ ಪಡೆದಿರುವ ಕಂಪನಿಯ ಅಧಿಕಾರಿಗಳು ಹಾಗೂ ಬೆಮೆಲ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಮತ್ತು ಇದೇ ತಿಂಗಳ ೧೩ ರಂದು ಉಪ ಚುನಾವಣೆ ಇರುವುದರಿಂದ ಚುನಾವಣೆ ನಂತರ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ, ರಕ್ಷಣಾ ಸಚಿವರನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ, ಅದು ೧ ತಿಂಗಳು ಅಥವಾ ಇನ್ನೂ ಹೆಚ್ಚು ದಿನಗಳಾಗಹುದು. ಆದ್ದರಿಂದ ಪ್ರತಿಭಟನೆ ಕೈಬಿಡುವುದು ಅಥವಾ ಮುಂದುವರೆಸುವುದರ ಬಗ್ಗೆ ನೀವು ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ಸಿಎಂಡಿಯೊಂದಿಗೆ ನೀವು ಮಾತುಕತೆ ನಡೆಸಿ, ನಿಮ್ಮ ಉತ್ತರಕ್ಕಾಗಿ ನಾವು ಕಾಯುತ್ತೇವೆ ಎಂದು ಕಾರ್ಮಿಕರು ದೃಢವಾಗಿ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ