ಪ್ರಧಾನಿ ಮೋದಿ ಭೇಟಿಯಾದ ಸಂಸದ ಶೆಟ್ಟರ್‌

KannadaprabhaNewsNetwork |  
Published : Jan 12, 2025, 01:16 AM IST
ನವದೆಹಲಿಯಲ್ಲಿ ಪ್ರಧಾನಿ ಭೇಟಿ ಮಾಡಿದ ಸಂಸದ ಜಗದೀಶ ಶೆಟ್ಟರ್‌ | Kannada Prabha

ಸಾರಾಂಶ

ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಅವರು ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಅವರು ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.

ಲೋಕಸಭೆ ಚುನಾವಣೆ ವೇಳೆ ಬೆಳಗಾವಿ ನಗರಕ್ಕೆ ಆಗಮಿಸಿ, ಗೆಲುವಿಗೆ ಸಹಕಾರ ನೀಡಿದ್ದನ್ನು ಸ್ಮರಿಸಿದರು. ಸಂಸದರು ಪ್ರಧಾನಿಗೆ ಸನ್ಮಾನಿಸಲು ಹೋದಾಗ ನಾನು ಸಾಮಾನ್ಯ ಕಾರ್ಯಕರ್ತ ಸನ್ಮಾನ ಬೇಡ ಎಂದು ನಯವಾಗಿ ನಿರಾಕರಿಸಿ ಕುಶಲೋಪರಿ ವಿಚಾರಿಸಿದರು. ಈ ವೇಳೆ ಹುಬ್ಬಳ್ಳಿಯ ಸಾಹಿತ್ಯ ಭಂಡಾರ ಪ್ರಕಟಿಸಿದ Temple treasures a journey through time ಪುಸ್ತಕವನ್ನು ಪ್ರಧಾನಿಗೆ ನೀಡಿದರು.ಸಂಸದರು ಸವದತ್ತಿಯ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನ ಅಭಿವೃದ್ಧಿಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಕ್ಕೆ ಪ್ರಧಾನಿಗೆ ಧನ್ಯವಾದ ತಿಳಿಸಿದರಲ್ಲದೆ, ರಾಮದುರ್ಗದಲ್ಲಿರುವ ಐತಿಹಾಸಿಕ ಶಬರಿಕೊಳ್ಳ ಅಭಿವೃದ್ಧಿಪಡಿಸುವಂತೆ, ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು, ಉಡಾನ್ 3.0 ಯೋಜನೆಯ ಅವಧಿಯನ್ನು ಇನ್ನೂ ಹೆಚ್ಚಿಸಿದಲ್ಲಿ ಪ್ರಯಾಣಿಕರಿಗೆ ಹಾಗೂ ಬೆಳಗಾವಿ ನಗರ ಹಾಗೂ 2 ಟಯರ್ ಸಿಟಿಗಳ ವಿಮಾನಯಾನ ಸೇವೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಮನವಿ ಸಲ್ಲಿಸಿದರು. ಬೇಡಿಕೆ ಆಲಿಸಿದ ಪ್ರಧಾನಿ ಈ ಬಗ್ಗೆ ರೈಲ್ವೆ ಸಚಿವರಿಗೆ ಸೂಚಿಸುವ ಭರವಸೆ ನೀಡಿದರು ಎಂದು ಸಂಸದರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ