ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಂಸದ ಶ್ರೇಯಸ್‌

KannadaprabhaNewsNetwork |  
Published : Mar 01, 2026, 01:45 AM IST
28ಎಚ್ಎಸ್ಎನ್6 : ಪರೀಕ್ಷಾರ್ಥಿಗಳೊಂದಿಗೆ ಮಾತನಾಡಿದ ಸಂಸದ ಶ್ರೇಯಸ್‌ ಪಟೇಲ್‌. | Kannada Prabha

ಸಾರಾಂಶ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾರ್ಥಿಗಳಿಗೆ ಹುರಿದುಂಬಿಸಲು ಸಂಸದ ಶ್ರೇಯಸ್ ಎಂ. ಪಟೇಲ್ ಭೇಟಿ ನೀಡಿದರು. ಆರೋಗ್ಯ ಸಹಾಯಕಿಯರ ಬಳಿ ಅಗತ್ಯ ಔಷಧಿ ಸಾಮಗ್ರಿಗಳು ಲಭ್ಯವಿದೆಯೇ ಎಂಬುದನ್ನು ವಿಚಾರಿಸಿ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಗ್ಲೂಕೋಸ್ ಪೌಡರ್ ಸೇರಿದಂತೆ ಅಗತ್ಯವಿರುವ ವಸ್ತುಗಳನ್ನು ಸಿದ್ಧವಾಗಿಡುವಂತೆ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ ಆರಂಭವಾಗಿದ್ದು, ಪರೀಕ್ಷಾರ್ಥಿಗಳಿಗೆ ಹುರಿದುಂಬಿಸಲು ಸಂಸದ ಶ್ರೇಯಸ್ ಎಂ. ಪಟೇಲ್ ಭೇಟಿ ನೀಡಿದರು.

ನಗರದ ಗಂಧದಕೋಠಿಯಲ್ಲಿರುವ ಬಾಲಕಿಯರ ವಿಭಜಿತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಂಸದರು ಪರೀಕ್ಷಾರ್ಥಿಗಳೊಂದಿಗೆ ಸಂವಾದ ನಡೆಸಿ ಶುಭಾಶಯ ಕೋರಿದರು. ಪರೀಕ್ಷಾ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳ ಸಿದ್ಧತೆ ಬಗ್ಗೆ ವಿಚಾರಿಸಿದ ಅವರು, “ಯಾವುದೇ ರೀತಿಯ ಭಯವಿಲ್ಲದೆ, ಧೈರ್ಯವಾಗಿ ಪ್ರಶ್ನೆಗಳನ್ನು ಓದಿ, ಆತ್ಮವಿಶ್ವಾಸದಿಂದ ಉತ್ತರ ಬರೆಯಿರಿ. ಉತ್ತಮ ಅಂಕಗಳನ್ನು ಗಳಿಸಿ ನಿಮ್ಮ ಭವಿಷ್ಯವನ್ನು ಸುಧಾರಿಸಿಕೊಳ್ಳಿ” ಎಂದು ಪ್ರೇರಣೆ ನೀಡಿದರು. ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ವ್ಯವಸ್ಥೆಗಳನ್ನೂ ಸಂಸದರು ಪರಿಶೀಲಿಸಿದರು. ಆರೋಗ್ಯ ಸಹಾಯಕಿಯರ ಬಳಿ ಅಗತ್ಯ ಔಷಧಿ ಸಾಮಗ್ರಿಗಳು ಲಭ್ಯವಿದೆಯೇ ಎಂಬುದನ್ನು ವಿಚಾರಿಸಿ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಗ್ಲೂಕೋಸ್ ಪೌಡರ್ ಸೇರಿದಂತೆ ಅಗತ್ಯವಿರುವ ವಸ್ತುಗಳನ್ನು ಸಿದ್ಧವಾಗಿಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಾಧರ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಗಿರಿ ತಾಲೂಕಿನ 5 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಜಿಲ್ಲೆಯಲ್ಲಿ ಮೊದಲ ದಿನ ಪಿಯುಸಿ ಪರೀಕ್ಷೆ ಸುಗಮ