ಹೊಸಪೇಟೆ: ಜಿಲ್ಲೆಯ ಗ್ರಾಮೀಣ ಭಾಗದ 586 ಸ್ಮಶಾನಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಬೇಕು. ಸ್ಮಶಾನಗಳಿಗೆ ತೆರಳಲು ರಸ್ತೆಗಳೇ ಇಲ್ಲ. ಹೀಗಿದ್ದರೂ ಕ್ರಮವಹಿಸಲಾಗುತ್ತಿಲ್ಲ ಎಂದು ಬಳ್ಳಾರಿ ಸಂಸದ ಈ. ತುಕಾರಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಜಿಲ್ಲಾಧಿಕಾರಿ ದಿವಾಕರ್ ಮಾತನಾಡಿ, ಮೊದಲು ಕೆಲಸ ಮಾಡೋದನ್ನು ಕಲಿತುಕೊಳ್ಳಿ. ನೀವು ಕ್ರಿಯಾಯೋಜನೆ ರೂಪಿಸಿ ಕೊಡಿ, ಜಿಪಂ ಸಿಇಒ ಅಕ್ರಮ್ ಶಾ ಅವರು ಅನುಮೋದನೆ ನೀಡುತ್ತಾರೆ ಎಂದು ಖಾರವಾಗಿಯೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಳ್ಳಿಗಳಿಗೆ ಭೇಟಿ ಕೊಡಿಜಿಲ್ಲಾಮಟ್ಟದ ಅಧಿಕಾರಿಗಳು ಗ್ರಾಮೀಣ ಭಾಗಕ್ಕೆ ತೆರಳಬೇಕು. ಹಳ್ಳಿಗಳಿಗೆ ಭೇಟಿ ನೀಡಿದಾಗಲೇ ಕೆಲಸ ಮಾಡಲು ಸಾಧ್ಯ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಮಗೆಲ್ಲರಿಗೂ ಕೆಲಸ ಮಾಡಲು ಇದೊಂದು ಅವಕಾಶ ಸಿಕ್ಕಿದೆ. ಹಾಗಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ಟೀಮ್ ಆಗಿ ಕೆಲಸ ಮಾಡಬೇಕು ಎಂದರು.
ವಿಜಯನಗರ ಜಿಲೆಯ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪನಹಳ್ಳಿ ತಾಲೂಕುಗಳಲ್ಲಿ ನುರಿತ ಕೃಷಿತಜ್ಞರ ತಂಡದಿಂದ ಸಮೀಕ್ಷೆ ನಡೆಸಿ ಮಾಸ್ಟರ್ ಪ್ಲಾನ್ ರೂಪಿಸಬೇಕು. ತಜ್ಞರ ಮಾರ್ಗದರ್ಶನದಂತೆ ಜಿಲ್ಲೆಯ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ವಿಶೇಷ ಕ್ರಮ ವಹಿಸಬೇಕು ಎಂದು ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
ನಿಖರ ಅಂಕಿ-ಅಂಶ ಇರಲಿ
ಜಿಲ್ಲೆಯಲ್ಲಿ ಇದುವರೆಗೆ 3208 ಜನರಿಗೆ ರಕ್ತ ತಪಾಸಣೆ ನಡೆಸಿದ್ದು, ಈ ಪೈಕಿ 222 ಜನರಲ್ಲಿ ಡೆಂಘೀ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ಪಡೆದು ಎಲ್ಲರೂ ಗುಣಮುಖರಾಗಿದ್ದಾರೆ ಎಂದು ಡಾ. ಷಣ್ಮುಖ ನಾಯ್ಕ ಸಭೆಗೆ ಮಾಹಿತಿ ನೀಡಿದರು.
ಅಂಗನವಾಡಿಗಳು ಸುಧಾರಣೆಯಾಗಬೇಕು. ಗುಣಮಟ್ಟದ ಆಹಾರ ಪೂರೈಕೆ ಮತ್ತು ಸಕಾಲಕ್ಕೆ ಚಿಕಿತ್ಸೆ ಕೊಡಿಸುವ ಮೂಲಕ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕಿಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಅವರಿಗೆ ಸಂಸದರು ಸೂಚಿಸಿದರು.
ಬಾಲ್ಯ ವಿವಾಹ ತಡೆಗಟ್ಟಿ
ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ, ಡಾ. ಎನ್.ಟಿ. ಶ್ರೀನಿವಾಸ್, ಎಲ್. ಕೃಷ್ಣ ನಾಯ್ಕ, ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಶಾ, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ವಿವೇಕಾನಂದ ಪಿ., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಭೀಮ್ಪಪ ಲಾಳಿ, ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಜೆ.ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಮತ್ತು ತಾಪಂ ಇಒಗಳು ಇದ್ದರು.