ವಿವಿಧ ಕಾಮಗಾರಿಗಳಿಗೆ ಸಂಸದ ತುಕಾರಾಂ ಭೂಮಿಪೂಜೆ

KannadaprabhaNewsNetwork |  
Published : Dec 08, 2025, 02:15 AM IST
ಸ | Kannada Prabha

ಸಾರಾಂಶ

ಪೂರ್ಣಗೊಂಡ ಕೆಲ ಕಾಮಗಾರಿಗಳನ್ನು ಉದ್ಘಾಟಿಸಿದರು.

ಸಂಡೂರು: ತಾಲೂಕಿನ ಕಾಳಿಂಗೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭಾನುವಾರ ಸಂಸದ ಈ. ತುಕಾರಾಂ ಭೂಮಿಪೂಜೆಯನ್ನು ನೆರವೇರಿಸಿದರು. ಪೂರ್ಣಗೊಂಡ ಕೆಲ ಕಾಮಗಾರಿಗಳನ್ನು ಉದ್ಘಾಟಿಸಿದರು.ಕೆಕೆಆರ್‌ಡಿಬಿ ಅನುದಾನ ₹೩೩.೦೫ ಲಕ್ಷ ವೆಚ್ಚದಲ್ಲಿ ಕಾಳಿಂಗೇರಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨ ಶಾಲಾ ಕೊಠಡಿಗಳ ನಿರ್ಮಾಣ, ಸಣ್ಣ ಉಪ್ಪಾರಹಳ್ಳಿ ಗ್ರಾಮದಲ್ಲಿ ₹೧೦ ಲಕ್ಷ ವೆಚ್ಚದಲ್ಲಿ ಆಂಜನೇಯ ದೇವಸ್ಥಾನ ನಿರ್ಮಾಣ, ಎಸ್. ಗೊಲ್ಲರಹಟ್ಟಿ ಗ್ರಾಮದಲ್ಲಿ ₹೧೬.೫೩ ಲಕ್ಷ ಕೆಕೆಆರ್‌ಡಿಬಿ ಅನುದಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಒಂದು ತರಗತಿ ಕೊಠಡಿ ನಿರ್ಮಾಣ, ಸಿ. ಲಕ್ಕಲಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಶಾಲೆಯಲ್ಲಿ ೩೩.೦೬ ಲಕ್ಷ ವೆಚ್ಚದಲ್ಲಿ ಎರಡು ತರಗತಿ ಕೊಠಡಿಗಳ ನಿರ್ಮಾಣ ಹಾಗೂ ಟಿ.ಎಸ್.ಪಿ ಅನುದಾನ ₹೨೫ ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ಅಗ್ರಹಾರ ಗ್ರಾಮದಲ್ಲಿ ₹೧೭ ಲಕ್ಷ ವೆಚ್ಚದಲ್ಲಿ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಸಂಸದರು ಭೂಮಿಪೂಜೆಯನ್ನು ನೆರವೇರಿಸಿದರು.

ಉದ್ಘಾಟನೆ:

ಕೆಕೆಆರ್‌ಡಿಬಿ ಅನುದಾನ ₹೨೫.೫೩ ಲಕ್ಷ ವೆಚ್ಚದಲ್ಲಿ ಕಾಳಿಂಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಎರಡು ಶಾಲಾ ಕೊಠಡಿಗಳು, ₹೯೯.೧೮ ಲಕ್ಷ ವೆಚ್ಚದಲ್ಲಿ ಸೋವೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಿರ್ಮಿಸಲಾದ ೬ ಶಾಲಾ ಕೊಠಡಿಗಳನ್ನು ಸಂಸದರು ಉದ್ಘಾಟಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಶರಣಬಸಪ್ಪ ಕರಿಶೆಟ್ಟಿ, ಮುಖಂಡರಾದ ಎನ್.ಎಂ. ವೀರೇಶಯ್ಯ, ಜಯರಾಂ, ಕೆ. ಮಲ್ಲಿಕಾರ್ಜುನ ಮುಂತಾದವರು ಉಪಸ್ಥಿತರಿದ್ದರು.

ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಂಸದ ತುಕಾರಾಂ ಭೂಮಿಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ರಾಹ್ಮಣರು ನಮ್ಮನ್ನು ಗುಲಾಮ ಮಾಡಲು ಹಿಂದು ಧರ್ಮ ಹುಟ್ಟು ಹಾಕಿದ್ರು : ನಿವೃತ್ತ ಜಡ್ಜ್‌
ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ