ಆಟೋ ಮೊಬೈಲ್ ಕ್ಲಸ್ಟರ್‌ ಸ್ಥಾಪನೆಗೆ ಸಂಸದ ಯದುವೀರ್ ಮನವಿ

KannadaprabhaNewsNetwork |  
Published : Jan 15, 2026, 01:30 AM IST
೧೪ಕೆಎಂಎನ್‌ಡಿ-೫ಮೈಸೂರು-ಮಂಡ್ಯ ನಡುವೆ ಆಟೋಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸುವಂತೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದ ಯದುವೀರ್ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಆಟೋ ಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಯಿಂದ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಮೈಸೂರು ಮತ್ತು ಮಂಡ್ಯದ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗವನ್ನರಸಿ ಬೆಂಗಳೂರು ಸೇರುವುದು ತಪ್ಪಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮೈಸೂರು ಮತ್ತು ಮಂಡ್ಯ ನಡುವೆ ಆಟೋ ಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸುವಂತೆ ಮೈಸೂರು-ಕೊಡಗು ಸಂಸದ ಯದುವೀರ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಆಟೋ ಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಯಿಂದ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಮೈಸೂರು ಮತ್ತು ಮಂಡ್ಯದ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗವನ್ನರಸಿ ಬೆಂಗಳೂರು ಸೇರುವುದು ತಪ್ಪಲಿದೆ. ಆಟೋಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಡಿಪ್ಲೋಮಾ ಪದವೀಧರರಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಯದುವೀರ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜ.18ರಂದು ಮದ್ದೂರಿನಲ್ಲಿ ಪ್ರಾಂತೀಯ ಸಮ್ಮೇಳನ

ಮದ್ದೂರು:

ನಗರದ ಟಿ.ಬಿ.ವೃತ್ತದ ಎಂ.ಎಂ.ಪಾರ್ಟಿಹಾಲ್‌ನಲ್ಲಿ ಜ.18 ರಂದು ಅಸೋಷಿಯೇಷನ್ ಆಫ್ ಅಲಯನ್ಸ್ ಸಂಸ್ಥೆ ಇಂಟರ್‌ನ್ಯಾಷನಲ್ ವತಿಯಿಂದ ಆಹಾರ ಪರಿಕ್ರಮದಲ್ಲಿ ಆಯೋಗ್ಯ-ಆರೋಗ್ಯಾಭಿಲಾಸಿಗಳ ಸಮ್ಮಿಲನ ಘೋಷವಾಕ್ಯದೊಂದಿಗೆ ಪ್ರಾಂತೀಯ ಸಮ್ಮೇಳನ-ಪ್ರಾಂತ್ಯ-1ರ ಸಮಾರಂಭ ನಡಯೆಲಿದೆ.

ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಅಲಯನ್ಸ್ ಸಂಸ್ಥೆ ನಿರ್ದೇಶಕ ಡಾ.ನಾಗರಾಜು ವಿ.ಭೈರಿ, ಗ್ಯಾಸ್ಟ್ರೋ ಎಂಟ್ರೋಲಾಜಿ ತಜ್ಞ ಡಾ.ಟಿ.ಅಂಜನಪ್ಪ, ಅಲಯನ್ಸ್ ಸಂಸ್ಥೆ ರಾಜ್ಯಪಾಲ ಎಚ್.ಮಾದೇಗೌಡ, ಸೌತ್ ಮಲ್ಟಿಪಲ್‌ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು, 3ನೇ ಉಪರಾಜ್ಯಪಾಲ ಕೆ.ಆರ್.ಶಶಿಧರ್ ಈಚಗೆರೆ, 2ನೇ ಉಪರಾಜ್ಯಪಾಲ ಚಂದ್ರಶೇಖರ್, ಪ್ರಾಂತೀಯ ಅಧ್ಯಕ್ಷ ಟಿ.ನಾಗರಾಜು, ಧ್ವನಿ ಮಹಿಳಾ ಸಂಸ್ಥೆ ಅಧ್ಯಕ್ಷೆ ರಜನಿರಾಜ್, ಸಂಪುಟ ಕಾರ್ಯದರ್ಶಿ ಆರ್.ಮಹೇಶ್, ಪಿಆರ್‌ಒ ಡಾ.ರತ್ನಮ್ಮ, ಅಪ್ಪಾಜಿ, ರಕ್ಷಿತ್‌ರಾಜ್ ಸೇರಿದಂತೆ ಹಲವು ಪಾಲ್ಗೊಳ್ಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ