ಕನ್ನಡಪ್ರಭ ವಾರ್ತೆ ಹುನಗುಂದ
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಮಂಗಳವಾರ ನಡೆದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ಕಾರ್ಯಕಾರಿಣಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿನ ಸಭೆಗೆ ಬಸವಜಯಮೃತ್ಯುಂಜಯ ಸ್ವಾಮೀಜಿ, ಬಸವನಗೌಡ ಪಾಟೀಲ ಯತ್ನಾಳ ಅವರನ್ನು ಕರೆಯುವುದಿಲ್ಲ. ಮುರುಗೇಶ ನಿರಾಣಿಯವರನ್ನು ಕರೆಯುತ್ತೇವೆ ಎಂದರು.
ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಮಾಡಿದ 2ಎ ಮೀಸಲಾತಿ ಹೋರಾಟ ಪ್ರಜ್ಞಾರಹಿತವಾಗಿದೆ. ಮುಂದಿನ ಹೋರಾಟ ಪ್ರಜ್ಞಾಸಹಿತವಾಗಿ ಮಾಡುತ್ತೇವೆ. ಯತ್ನಾಳರ ಕುತಂತ್ರದಿಂದ ಹೋರಾಟ ಹಾದಿ, ದಿಕ್ಕು ತಪ್ಪುತ್ತಿದೆ. ಬಸವಜಯಮೃತ್ಯುಂಜಯ ಸ್ವಾಮೀಜಿ ಒಂದು ಪಕ್ಷಕ್ಕೆ ಸೀಮಿತವಾಗಿ ಹೋರಾಟ ಮಾಡುತ್ತಿರುವುದುನ್ನು ನಾವು ಖಂಡಿಸುತ್ತೇವೆ ಎಂದು ಕಿಡಿಕಾರಿದರು.ಬಿಜೆಪಿ ಅವಧಿಯಲ್ಲಿ ನಡೆದ ಹೋರಾಟದಲ್ಲಿ ಯತ್ನಾಳ ಮೋಸಕ್ಕೆ ನಾವೆಲ್ಲರೂ, ಶ್ರೀಗಳು ಬಲಿಯಾಗಿದ್ದೇವೆ. ಶ್ರೀಗಳು ಎಲ್ಲ ಪಕ್ಷದವರನ್ನು ಕೂಡಿಸಿಕೊಂಡು ಹೋರಾಟ ಮಾಡಬೇಕು. ಒಂದು ಪಕ್ಷಕ್ಕೆ ಸೀಮಿತವಾದರೆ ಅವರ ಹೋರಾಟ ಅವರಿಗೆ, ನಾವು ಪ್ರತ್ಯೇಕವಾಗಿ ಹೋರಾಟ ಆರಂಭಿಸುತ್ತೇವೆ. ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದರು.
ಬೆಳಗಾವಿಯಲ್ಲಿ ಶ್ರೀಗಳು ಡಿ.10 ರಂದು ಹಮ್ಮಿಕೊಂಡ ಹೋರಾಟ ನಿಲ್ಲಸಲು ಮುಖ್ಯಮಂತ್ರಿಗಳು ನಿಮ್ಮ ಮೆಲೆ ಒತ್ತಡ ಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಸಮಾಜದ ವಿಷಯದಲ್ಲಿ ರಾಜಕೀಯ ನಾನು ತರುವುದಿಲ್ಲ ಎಂದರು. ಆರಂಭದಿಂದಲೂ ನಾನು ಸಚಿವ ಆಂಕಾಕ್ಷೆಯಾಗಿದ್ದೇನೆ ಎಂದರು.
ಸಭೆಯಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಟ್ರಸ್ಟನ ಟ್ರಸ್ಟಿಗಳಾದ ಶೇಖರಪ್ಪ ಬಾದವಾಡಗಿ, ಗಂಗಣ್ಣ ಬಾಗೇವಾಡಿ, ಶಿವಾನಂದ ಕಂಠಿ, ವಿವಿಧ ಜಿಲ್ಲೆಯ ಪದಾಧಿಕಾರಿಗಳು, ಮುಖಂಡರು ಇದ್ದರು.