ಬ್ಯಾಡಗಿ ಮುಖ್ಯರಸ್ತೆ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Dec 10, 2024, 12:30 AM IST
ಮ | Kannada Prabha

ಸಾರಾಂಶ

ಮೃತ್ಯುಂಜಯಪ್ಪನವರು ಧಾರವಾಡದಲ್ಲಿ ಮುರುಘಾಮಠ ಸ್ಥಾಪನೆ ಮಾಡಿ ನಂತರ ಹಂಸಭಾವಿಯಲ್ಲಿ ಇಲ್ಲಿಯ ಜನರ ಆಶಯದಂತೆ ಸ್ವಾತಂತ್ರ್ಯ ಪೂರ್ವದಲ್ಲಿ ಸಂಸ್ಥೆಯನ್ನು ಸ್ಥಾಪಿಸಿ ಇಲ್ಲಿಯ ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಅವರು ಸ್ಥಾಪಿಸಿದ ವಿದ್ಯಾ ಸಂಸ್ಥೆ ಇಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಶ್ಲಾಘನೀಯವೆಂದು ಮೈಸೂರಿನ ಸುತ್ತೂರಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.

ಬ್ಯಾಡಗಿ: ಹೋರಾಟ ಸಮಿತಿಯ ಸದಸ್ಯರನ್ನು ಬಂಧಿಸಿದ ಪೊಲೀಸರ ನಡೆಯನ್ನು ಖಂಡಿಸಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು 4 ತಾಸಿಗೂ ಹೆಚ್ಚು ಕಾಲ ಧರಣಿ ನಡೆಸಿದರು.

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಹಾವೇರಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಲ್.ವೈ. ಶಿರಕೋಳ ಆಗಮಿಸಿ ಕೂಡಲೇ ಬಂಧಿತರನ್ನ ಬಿಡುವ ಭರವಸೆ ನೀಡಿದ ನಂತರ ಧರಣಿ ಕೈಬಿಟ್ಟು ನಂತರ ಅಲ್ಲಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿರೂಪಾಕ್ಷಪ ಬಳ್ಳಾರಿ, ರಾಜ್ಯದಲ್ಲಿ ಕಾಂಗ್ರೆಸ್ ತುಘಲಕ್ ಸರ್ಕಾರ ನಡೆಸುತ್ತಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪ್ರತಿಭಟನಕಾರರನ್ನು ಬಂಧಿಸಿ ಜನ ವಿರೋಧಿ ಸರಕಾರ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಶಿವಯೋಗಿ ಶಿರೂರ, ಉಪಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ ಮಾತನಾಡಿ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಪ್ರಕ್ರಿಯೆ ಬಿಟ್ಟರೆ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಸಹ ಯಾವುದೇ ಸಣ್ಣ ಪ್ರಕ್ರಿಯೆ ಇಲ್ಲಿವರೆಗೂ ಆರಂಭಿಸಿಲ್ಲ. ಶಾಸಕರೇ ಇದೇನಾ ನಿಮ್ಮ ಜನಸೇವೆ..? ಇದೇನಾ ಪಟ್ಟಣದ ಜನತೆಯ ಪರವಾದ ಕಾಳಜಿ..? ಹಾಳಾಗಿ ಹೋಗಿರುವ ಮುಖ್ಯರಸ್ತೆ ಅಗಲೀಕರಣ ಮಾಡಿ ತೋರಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಬಸವರಾಜ ಛತ್ರದ, ಚಂದ್ರಣ್ಣ ಶೆಟ್ಟರ, ರಾಮಣ್ಣ ಕೋಡಿಹಳ್ಳಿ, ಸರೋಜಾ ಉಳ್ಳಾಗಡ್ಡಿ, ಕಲಾವತಿ ಬಡಿಗೇರ, ವಿನಯ ಹಿರೇಮಠ, ಮೆಹಬೂಬ ಅಗಸನಹಳ್ಳಿ, ಶಿವರಾಜ ಅಂಗಡಿ, ಹನುಮಂತ ಮ್ಯಾಗೇರಿ, ಮುಖಂಡರಾದ ಹಾಲೇಶ ಜಾಧವ, ಪರುಶರಾಮ ಉಜನಿಕೊಪ್ಪ, ಸುರೇಶ ಯತ್ನಳ್ಳಿ, ಗಣೇಶ ಅಚಲಕರ, ಸುರೇಶ ಉದ್ಯೋ ಗಣ್ಣನವರ, ಶಿವಯೋಗಿ ಉಕ್ಕುಂದ, ಈರಣ್ಣ ಅಕ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ