ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಗುರುವಾರ ಜಾತ್ರೆಯ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ಕಾರ್ತಿಕೋತ್ಸವ ಅಂಗವಾಗಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಎಲ್ಲ ಸಿದ್ಧತೆಯನ್ನು ಮುಚಖಂಡಿ ಗ್ರಾಮದ ಗುರುಹಿರಿಯರು, ಯುವಕರು ಹಾಗೂ ವೀರಭದ್ರೇಶ್ವರ ಜೀರ್ಣೋದ್ಧಾರ ಕಮಿಟಿಯ ಸದಸ್ಯರ ಸಹಕಾರದಿಂದೊಂದಿಗೆ ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.
ಹೊಸ್ತಿಲ ಹುಣ್ಣಿಮೆಯಲ್ಲಿ ಬರುವ ಜಾತ್ರೆಯು 1972ರಿಂದ ಆರಂಭಗೊಂಡಿದ್ದು, ಈ ವರ್ಷ 51ನೇ ವರ್ಷದ ಜಾತ್ರೆ ಆಚರಿಸಲಾಗುತ್ತಿದೆ. ಜಾತ್ರೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.ಡಿ.22ರಂದು ಮುಚಖಂಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಿಂದ ಗ್ರಾಮದ ಅಗಸಿ ಬಾಗಿಲವರೆಗೆ ಚಿಕ್ಕ ರಥೋತ್ಸವ ಸಂಜೆ 7 ಗಂಟೆಗೆ ಐದು ದಿನಗಳ ಕಾಲ ಗ್ರಾಮದಲ್ಲಿ ಸಂಭ್ರಮದಿಂದ ಜರುಗಲಿದೆ. ಡಿ.24ರಂದು ಬೆಳಗ್ಗೆ ಅಯ್ಯಾಚಾರ ಮತ್ತು ಶಿವದೀಕ್ಷೆ ಕಾರ್ಯಕ್ರಮ ಬಿಲ್ಕೆರೂರಿನ ಸಿದ್ಧಲಿಂಗ ಶಿವಾಚಾರ್ಯರು ಹಾಗೂ ಚರಂತಿಮಠದ ಪ್ರಭುಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನಡೆಯಲಿದೆ.
ಡಿ.26ರಂದು ರಾತ್ರಿ 10.30ಕ್ಕೆ ಗ್ರಾಮದ ಯುವಕರು ಸೇರಿಕೊಂಡು ಹರಹಂತಕರಿಗೊಬ್ಬ ನರಸಿಂಹ ಎಂಬ ನಾಟಕ ಪ್ರದರ್ಶನ ನಡೆಯಲಿದೆ. ಡಿ.27ರಂದು ಸಂಜೆ 4 ಗಂಟೆಗೆ ಪ್ರಸಿದ್ಧ ಪೈಲ್ವಾನರ ಕುಸ್ತಿಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.
ಈರಣ್ಣ ಗಂಗಾವತಿ, ಅರ್ಚಕ ಸಂಗಯ್ಯ ಸರಗಣಾಚಾರಿ, ರಾಚಯ್ಯ ಸರಗಣಾಚಾರಿ, ಚಂದ್ರಶೇಖರ ಶಿಕ್ಕೇರಿ, ರಂಗಪ್ಪ ಜಳೇಂದ್ರ ಇದ್ದರು.