ಮುಡಾ ಪ್ರಕರಣ: ಹೈಕೋರ್ಟ್‌ ಹೇಳಿದ್ದೇನು?

KannadaprabhaNewsNetwork |  
Published : Sep 25, 2024, 12:49 AM IST
ಹೈಕೋರ್ಟ್ | Kannada Prabha

ಸಾರಾಂಶ

ನಿಗದಿತ ಅರ್ಹತೆ ಇಲ್ಲದಿದ್ದರೂ ಸಿಎಂ ಪತ್ನಿ 56 ಕೋಟಿ ರು. ಮೌಲ್ಯದ 14 ನಿವೇಶನ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣ ಬಿಟ್ಟು ಮತ್ಯಾವ ಪ್ರಕರಣ ತನಿಖೆ ನಡೆಸಬಹುದು?

- ನಿಗದಿತ ಅರ್ಹತೆ ಇಲ್ಲದಿದ್ದರೂ ಸಿಎಂ ಪತ್ನಿ 56 ಕೋಟಿ ರು. ಮೌಲ್ಯದ 14 ನಿವೇಶನ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣ ಬಿಟ್ಟು ಮತ್ಯಾವ ಪ್ರಕರಣ ತನಿಖೆ ನಡೆಸಬಹುದು?- ಮುಡಾ ನಿಯಮಗಳ ಪ್ರಕಾರವೇ ಬಡಾವಣೆ ಅಭಿವೃದ್ಧಿಗೆ 3 ಎಕರೆಗಿಂತ ಹೆಚ್ಚು ಜಮೀನು ಕಳೆದುಕೊಂಡ ವ್ಯಕ್ತಿ 4,800 ಚದರ ಅಡಿ ವಿಸ್ತೀರ್ಣದ 40*60 ಎರಡು ನಿವೇಶನ ಪಡೆಯಲು ಅರ್ಹರಾಗಿರುತ್ತಾರೆ. ಈ ಪ್ರಕರಣದಲ್ಲಿ 14 ನಿವೇಶನ ನೀಡಿರುವುದು ಆಘಾತ ಮೂಡಿಸಿದೆ. - ಪರ್ಯಾಯ ನಿವೇಶನವನ್ನು ಮೈಸೂರಿನ ಹೃದಯ ಭಾಗದ ವಿಜಯನಗರದಲ್ಲಿ ನೀಡಲಾಗಿದೆ. ಆದ್ದರಿಂದ ಸಿಎಂ ಅನುಕೂಲಕ್ಕಾಗಿ ಹೇಗೆ ಮತ್ತು ಯಾಕೆ ನಿಯಮವನ್ನು ಸಡಿಲಿಸಲಾಯಿತು ಎಂಬ ಬಗ್ಗೆ ತನಿಖೆ ನಡೆವ ಅಗತ್ಯವಿದೆ - ಮೇಲ್ನೋಟಕ್ಕೆ ದೂರುದಾರರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿರುವುದು, ಪ್ರಭಾವ ಬಳಸಿರುವುದು ಕಂಡು ಬರುತ್ತದೆ. ಪ್ರಭಾವ ಬೀರುವುದಕ್ಕೆ ಯಾವುದೇ ಶಿಫಾರಸು ಮಾಡುವ ಅಥವಾ ಆದೇಶ ಹೊರಡಿಸುವ ಅಗತ್ಯವಿಲ್ಲ.- ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದ ಬಳಿಕ 50:50 ಅನುಪಾತದಲ್ಲಿ ಪರಿಹಾರ ಭೂಮಿ ನೀಡುವ ನಿರ್ಣಯವನ್ನು ಮುಡಾ ಹಿಂತೆಗೆದುಕೊಂಡಿತ್ತು. ಆ ಸಭೆಯಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ ನಿವೇಶನ ಹಂಚಿಕೆ ಬಗ್ಗೆ ಚರ್ಚೆ ನಡೆಯುವಾಗ ಮೌನವಾಗಿದ್ದರು ಎಂಬ ವಾದ ನಿಜಕ್ಕೂ ಹಾಸ್ಯಾಸ್ಪದ.- ರಾಜ್ಯಪಾಲರು ಕೈಗೊಂಡಿರುವ ಸ್ವತಂತ್ರ ನಿರ್ಧಾರದಲ್ಲಿ ಯಾವುದೇ ಲೋಪ ಕಂಡುಬರುತ್ತಿಲ್ಲ. ರಾಜ್ಯಪಾಲರು ಸಂಪೂರ್ಣ ವಿವೇಚನೆಯುತವಾಗಿ ಆದೇಶ ಹೊರಡಿಸಿದ್ದಾರೆ- ರಾಜ್ಯಪಾಲರು ಸಾಮಾನ್ಯ ಸಂದರ್ಭದಲ್ಲಿ ಸಚಿವ ಸಂಪುಟದ ಸಲಹೆ ಹಾಗೂ ಸಲಹೆ ಆಧಾರದಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಆದರೆ, ಅಸಾಧಾರಣ ಸಂದರ್ಭದಲ್ಲಿ ರಾಜ್ಯಪಾಲರು ಸ್ವತಂತ್ರ ನಿರ್ಧಾರಗಳನ್ನೂ ತೆಗೆದುಕೊಳ್ಳಬಹುದು. ಹಾಲಿ ಪ್ರಕರಣವು ಅಂತಹ ಅಸಾಧಾರಣ ಸಂದರ್ಭದ್ದಾಗಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು