- ಬಿಜೆಪಿ ಮುಖಂಡ ರೇಣುಕಾಚಾರ್ಯ ಬಾಂಬ್ । ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲು ತಾಕೀತು
- ಕಾಂಗ್ರೆಸ್ ಸರ್ಕಾರ ಕೆಡವೋದು ಬೇಡ, ಒಳಜಗಳದಿಂದಾಗಿಯೇ ಪತನವಾಗುತ್ತೆ
- ಈ ಹಿಂದೆ ಬಿಎಸ್ವೈ ರಾಜೀನಾಮೆ ಕೇಳಿದವ್ರು ಈಗ ರಾಜಿನಾಮೆ ಕೊಡದಿದ್ರೆ ಹೇಗೆ ಎಂದು ಪ್ರಶ್ನೆ - - - ಕನ್ನಡಪ್ರಭ ವಾರ್ತೆ ದಾವಣಗೆರೆಮುಡಾ ಹಗರಣ ದಾಖಲೆ ನೀಡಿರುವುದೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಟ್ಟ ಹೆಸರು ತರಲು ಸಿದ್ದರಾಮಯ್ಯ ಆಪ್ತ ಬಳಗದವರೇ ಒಳಸಂಚು ಮಾಡುತ್ತಿದ್ದಾರೆ. ಸ್ವತಃ ಸಿದ್ದರಾಮಯ್ಯ ತಮಗೆ ಸಂಗೊಳ್ಳಿ ರಾಯಣ್ಣನವರಂತಹ ಸ್ಥಿತಿ ತಂದಿದ್ದಾರೆಂದು ಹೇಳಿರುವುದು ಸಿಎಂ ಆಪ್ತ ಬಳಗದವರೇ ಮುಡಾ ಹಗರಣಕ್ಕೆ ಸಂಬಂಧಿಸಿದ ದಾಖಲೆ ನೀಡಿರಬಹುದೆಂಬ ಮಾತಿಗೆ ಪುಷ್ಠಿ ನೀಡುತ್ತದೆ ಎಂದು ಹೇಳಿದರು.
ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿ ಬಂದಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆಗ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ಸಿನ ನಾಯಕರು ರಾಜಿನಾಮೆಗೆ ಒತ್ತಾಯಿಸಿದ್ದರು. ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಕರಣ ಬೇರೆ, ಸಿದ್ದರಾಮಯ್ಯ ಪ್ರಕರಣ ಬೇರೆ ಎಂದು ಅವರು ವಿವರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ಮಾಜಿ ಮೇಯರ್ ಬಿ.ಜಿ. ಅಜಯಕುಮಾರ, ಬಿ.ಎಂ. ಸತೀಶ ಕೊಳೇನಹಳ್ಳಿ, ಪ್ರವೀಣ ಜಾಧವ್, ರಾಜು ವೀರಣ್ಣ ಇತರ ರು ಇದ್ದರು.
ಬಾಕ್ಸ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆ ಎದುರಿಸಬೇಕು ಅಂತಾ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾಗಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಬಿಜೆಪಿ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಏನಾದರೂ ಸಂಭವಿಸಿದರೆ ಅದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಎನ್.ರಾಜಶೇಖರ ನಾಗಪ್ಪ ಎಚ್ಚರಿಸಿದರು.
ಕೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಪಾರ ಗೌರವ, ಅಭಿಮಾನವಿದೆ. ನಾವು ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕವಾಗಿ ಹೋರಾಟ ಮಾಡುತ್ತಿಲ್ಲ. ಭ್ರಷ್ಟಾಚಾರ, ಹಗರಣದ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ. ರಾಜ್ಯದ ಜನತೆ ಇಟ್ಟಿರುವ ಅಭಿಮಾನ, ಗೌರವ ಉಳಿಸಿಕೊಳ್ಳಲು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು. ತನಿಖೆಗೆ ಸಹಕರಿಸಬೇಕು
- ರೇಣುಕಾಚಾರ್ಯ, ಮಾಜಿ ಸಚಿವ- - -
-25ಕೆಡಿವಿಜಿ3, 4:ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.