ಹುಬ್ಬಳ್ಳಿ:
ಸರ್ಕಾರ ವಿವಿಧ ಹಗರಣಗಳಲ್ಲಿ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ನೈತಿಕತೆ ಉಳಿಸಿಕೊಂಡಿಲ್ಲ. ಸಾರ್ವಜನಿಕವಾಗಿ ಮುಖ ತೋರಿಸಲು ಆಗದ ಸ್ಥಿತಿಯಲ್ಲಿದ್ದಾರೆ ಎಂದು ಆರೋಪಿಸಿದರು.
ಭೇಟಿ ನೀಡದ ಸಿಎಂ:ರಾಜ್ಯದ ಕರಾವಳಿ ಭಾಗ ಸೇರಿದಂತೆ ಚಿಕ್ಕಮಗಳೂರು, ಕೊಡಗಿನಲ್ಲಿ ಅಪಾರ ಪ್ರಮಾಣದ ಮಳೆಯಾಗಿ 7 ಜನರು ಸಾವನ್ನಪ್ಪಿದ್ದಾರೆ. ಹಲವೆಡೆ ಗುಡ್ಡಕುಸಿದು ಸಾಕಷ್ಟು ಹಾನಿಯಾಗಿದ್ದರೂ ಮುಖ್ಯಮಂತ್ರಿ, ಸಚಿವರು ಸ್ಥಳಕ್ಕೆ ಭೇಟಿ ನೀಡದಿರುವುದು ಆಶ್ಚರ್ಯ ತಂದಿದೆ. ಆದರೆ, ಕಂದಾಯ ಸಚಿವರು ಜಿಲ್ಲಾಧಿಕಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ಕೊಡುತ್ತಿದ್ದಾರೆ. ಏನಾದರೂ ಕೇಳಿದರೆ ಪಿಡಿ ಖಾತೆಯಲ್ಲಿ ಹಣವಿದೆ ಎನ್ನುತ್ತಿದ್ದಾರೆ. ಹಣ ಇಟ್ಟರೆ ಸಾಲದು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಜನರಿಗೆ ಧೈರ್ಯ ತುಂಬುವ, ಸಾಂತ್ವನ ಹೇಳುವ ಕಾರ್ಯ ಮಾಡಬೇಕಿತ್ತು. ಇವರ ಈ ನಡೆಯಿಂದ ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಕುಟುಕಿದರು.
ಅತಿವೃಷ್ಟಿಯಾಗಿರುವ ಪ್ರದೇಶಗಳಿಗೆ ನಾನು ಮೂರು ದಿನಗಳ ಹಿಂದೆಯೇ ಭೇಟಿ ಕೊಡಲು ಯೋಜಿಸಿದ್ದೆ. ಆದರೆ, ದೆಹಲಿಯಲ್ಲಿ ಇಲಾಖೆಯ ನಿಗದಿತ ಕಾರ್ಯಕ್ರಮಗಳು ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಭೇಟಿ ನೀಡಲು ಆಗಿರಲಿಲ್ಲ. ಈಗ ಉತ್ತರ ಕನ್ನಡಕ್ಕೆ ಭೇಟಿ ನೀಡುತ್ತಿದ್ದು, ಭಾನುವಾರ ಸಕಲೇಶಪುರದಲ್ಲಿ ಮಳೆಯಿಂದಾಗಿ ಹಾನಿಗೊಳಲಾಗದ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸುವೆ ಎಂದರು.
ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಏನೇ ಇರಲಿ. ಜನತೆ ಸಂಕಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲೂ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸದಿರುವುದು ದುರ್ದೈವದ ಸಂಗತಿ. ಈ ಸರ್ಕಾರ ಆಡಳಿತ ಹೇಗೆ ನಡೆಸಬೇಕೆಂಬುದನ್ನು ಮರೆತು ಹೋಗಿದೆ ಎಂದರು.ಭ್ರಷ್ಟಾಚಾರ ತಾಂಡವ:
ಕೆಐಎಡಿಬಿಯಲ್ಲಿಯೂ ಹಗರಣ ನಡೆದಿದೆ ಎನ್ನುವ ಮಾಹಿತಿ ಬರುತ್ತಿದ್ದು, ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ. ನಾನು ಕೇಂದ್ರ ಸಚಿವರಾಗಿರುವುದರಿಂದ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಅವರೇ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಧಾರವಾಡದಲ್ಲಿ ಒಂದು ವರ್ಷದಿಂದ ಹಾಲಿನ ಸಬ್ಸಿಡಿ ಹಣ ನೀಡುತ್ತಿಲ್ಲ ಎಂದು ರೈತರು ಕೆಎಂಎಫ್ ಎದುರು ಹೋರಾಟ ಮಾಡುತ್ತಿದ್ದಾರೆ. ಅದಕ್ಕೂ ಸರ್ಕಾರ ಸ್ಪಂದಿಸುವ ಕಾರ್ಯ ಮಾಡದಿರುವುದು ದುರ್ದೈವದ ಸಂಗತಿ ಎಂದರು.