ಹುಬ್ಬಳ್ಳಿ:
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನೇರವಾಗಿ ಸಿದ್ದರಾಮಯ್ಯ ಇದ್ದಾರೆ. ವಿಜಯನಗರದಲ್ಲಿ ನಿಮಗೆ ಸೈಟ್ ಯಾಕೆ ಕೊಟ್ಟರು. 2013ರ ಚುನಾವಣೆ ಅಫಿಡ್ವಿಟ್ನಲ್ಲಿ ಸಿದ್ದರಾಮಯ್ಯ ಮಾಹಿತಿ ಕೊಟ್ಟಿಲ್ಲ. ತಮ್ಮ ಪ್ರಭಾವ ಬಳಸಿ 14 ಸೈಟ್ ಹೊಡೆದಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯವರು ಕೊಟ್ಟರು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನೀವು ಬೇಡವೆಂದು ಅನ್ನಬೇಕಿತ್ತು. ಯಾಕೆ ತೆಗೆದುಕೊಂಡರಿ ಎಂದು ಪ್ರಶ್ನಿಸಿದ ಜೋಶಿ, ಬಿಜೆಪಿಯವರಿದ್ದಾರೆ ಎಂದರೆ ಅವರ ಮೇಲೂ ಕ್ರಮವಾಗಲಿ. ನೀವು ಏನೂ ಮಾಡಿಲ್ಲ ಅಂದರೆ ಸಿಬಿಐ ತನಿಖೆಗೆ ಒಪ್ಪಿಸಲು ಏಕೆ ಭಯ. ಸಿಬಿಐ ತನಿಖೆಗೊಪ್ಪಿಸಿ ಎಂದು ಆಗ್ರಹಿಸಿದರು.100 ಪರ್ಸೆಂಟ್ ಸರ್ಕಾರ:
ಯಾವುದೇ ಆರೋಪ ಇಲ್ಲದೆ ನಮ್ಮ ಮೇಲೆ 40 ಪರ್ಸೆಂಟ್ ಕಮೀಷನ್ ಅರೋಪ ಮಾಡಿದ್ದರು. ಇದು 100 ಪರ್ಸೆಂಟ್ ಭ್ರಷ್ಟ ಸರ್ಕಾರ. ಈ ಬಗ್ಗೆ ರಾಹುಲ್ ಗಾಂಧಿ ಇವತ್ತಿನವರೆಗೂ ಒಂದೂ ಮಾತನಾಡಿಲ್ಲ. 40 ದಿನ ಆದರೂ ನಾಗೇಂದ್ರಗೆ ನೋಟಿಸ್ ಕೊಟ್ಟಿರಲಿಲ್ಲ. ಇಡಿ ಎಂಟ್ರಿ ಆದಾಗ ನೋಟಿಸ್ ಕೊಟ್ಟಿದ್ದರು. ಐಷಾರಾಮಿ ಹೋಟೆಲ್ಗೆ ಕರೆದು ವಿಚಾರಣೆ ಮಾಡುವ ನಾಟಕ ಮಾಡಿದರು. ಐಷಾರಾಮಿ ಹೋಟೆಲ್ ಬಿಲ್ ಕಟ್ಟಿದ್ದು ಕೂಡಾ ಎಸ್ಐಟಿ ಎಂದು ಜೋಶಿ ಆರೋಪಿಸಿದರು.
ನರೇಂದ್ರ ಮೋದಿ ಮತ್ತು ಪ್ರಹ್ಲಾದ ಜೋಶಿ ರಾಜೀನಾಮೆ ಕೊಡಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿಕೆಗೆ ತಿರುಗೇಟು ನೀಡಿದ ಜೋಶಿ, ಇಂತಹ ಚಿಲ್ಲರೆ, ಅಸಂಬದ್ಧ ಹೇಳಿಕೆಗೆ ಉತ್ತರ ಕೊಡಲ್ಲ. ಮೋದಿ ಏನ್ ಸೈಟ್ ತೆಗೆದುಕೊಂಡಿದ್ದಾರಾ? ಎಂದರು.