ಕನ್ನಡಪ್ರಭ ವಾರ್ತೆ ಸುರಪುರ
ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ಪರಿಶೀಲಿಸಿ ಮಾತನಾಡಿದ ಅವರು, ಸುಮಾರು 65 ರೋಗಿಗಳಲ್ಲಿ ಭಾನುವಾರ ಸುಮಾರು 43 ಜನರು ಗುಣಮುಖರಾಗಿ ಬಿಡುಗಡೆಗೊಳಿಸಲಾಗಿದೆ.
ಇನ್ನೂ17 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ರಾತ್ರಿ 11 ಜನ ರೋಗಿಗಳು ಬಂದು ದಾಖಲಾಗಿದ್ದರೆ. ಭಾನುವಾರ ಇಬ್ಬರು ಮಕ್ಕಳು ಸೇರಿದಂತೆ ಒಬ್ಬ ವಯಸ್ಕರನ್ನು ಮುಂದಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.ವೈದ್ಯರು ಸೇರಿದಂತೆ ಆರೋಗ್ಯ ಸಿಬ್ಬಂದಿ ಉತ್ತಮವಾಗಿ ಕೆಲಸ ಮಾಡಿ ರೋಗಿಗಳಿಗೆ ಚಿಕಿತ್ಸೆ ನೀಡಿ ಗುಣಪಡಿಸಲು ಶ್ರಮಿಸುತ್ತಿದ್ದಾರೆ. ಸುಮಾರು ಶೇ.70 ರಷ್ಟು ಜನರು ಗುಣಮುಖರಾದ್ದರಿಂದ ಬಿಡುಗಡೆಗೊಳಿಸಲಾಗಿದೆ.
ಈ ವೇಳೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ, ಡಾ. ಪ್ರಿಯಾಂಕ ಪಾಟೀಲ್, ಡಾ. ಸಿದ್ದು ನ್ಯಾಮಗೊಂಡ ಸೇರಿದಂತೆ ಆರೋಗ್ಯ ಸಿಬ್ಬಂದಿಗಳಿದ್ದರು.