ಮುಡುಕುತೊರೆ ಜಾತ್ರೆ: ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

KannadaprabhaNewsNetwork |  
Published : Jan 30, 2025, 12:30 AM IST
31 | Kannada Prabha

ಸಾರಾಂಶ

ಟಿ.ನರಸೀಪುರ ತಾಲೂಕು ಮುಡುಕುತೊರೆ ಜಾತ್ರಾ ಮಹೋತ್ಸವ ಜ.31ರಿಂದ ಫೆ.16ರವರೆಗೆ ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುಬೇಕು. ಜ.31ರಿಂದ ಫೆ.16 ರವರೆಗೆ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದೆ, ಫೆ.7ರಂದು ರಥೋತ್ಸವ, ಫೆ.10ಕ್ಕೆ ತೆಪ್ಪೋತ್ಸವ ಸಮಾರಂಭ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಟಿ.ನರಸೀಪುರ ತಾಲೂಕು ಮುಡುಕುತೊರೆ ಜಾತ್ರಾ ಮಹೋತ್ಸವ ಜ.31ರಿಂದ ಫೆ.16ರವರೆಗೆ ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.

ತಮ್ಮ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜ.31ರಿಂದ ಫೆ.16 ರವರೆಗೆ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದೆ, ಫೆ.7ರಂದು ರಥೋತ್ಸವ, ಫೆ.10ಕ್ಕೆ ತೆಪ್ಪೋತ್ಸವ ಸಮಾರಂಭ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಸಂಬಂಧ ಅಧಿಕಾರಿಗಳು ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

ಆರೋಗ್ಯ ಇಲಾಖೆಯಿಂದ ಆ್ಯಂಬುಲೆನ್ಸ್ ಹಾಗೂ ವೈದ್ಯರು ತಂಡ ಜಾತ್ರಾ ಮಹೋತ್ಸವದಲ್ಲಿ ಇರಬೇಕು. ಸೆಸ್ಕ್ ಇಲಾಖೆಯಿಂದ ವಿದ್ಯುತ್ ದೀಪಾಲಂಕಾರ ಮಾಡಬೇಕು. ತಾತ್ಕಾಲಿಕ ಶೌಚಾಲಯ, ಮೊಬೈಲ್ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್, ಧ್ವನಿವರ್ಧಕ , ಸಿಸಿ ಕ್ಯಾಮೆರಾ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಜಾತ್ರಾ ಮಾಳದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾತ್ರಾ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ ನೈರ್ಮಲೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಉತ್ತಮ ರಾಸುಗಳಿಗೆ ಆಯ್ಕೆ ಸಂಬಂಧ ಜ.31ರಿಂದ ಫೆಬ್ರವರಿ 3 ವರೆಗೆ ರಾಸುಗಳ ರೈತರು ಸ್ಥಳದಲ್ಲಿದ್ದು, ಆಯ್ಕೆ ಸಂಬಂಧ ನೋಂದಣಿ ಮಾಡಿಕೊಳ್ಳಬೇಕು. ಫೆ.5ರಂದು ಉತ್ತಮ ರಾಸುಗಳ ಆಯ್ಕೆ ನಡೆಯುತ್ತದೆ. ಆದರೆ, ಕೊನೆಯ ಎರಡು ದಿನ ಅಥವಾ ಆಯ್ಕೆಯ ದಿನ ನೇರವಾಗಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಪಶುಪಾಲನಾ ಇಲಾಖೆಯ ಸಹಾಯ ನಿರ್ದೇಶಕರಾದ ಡಾ ಲಿಂಗರಾಜು ಸಭೆಯಲ್ಲಿ ಹೇಳಿದರು.

ಸಭೆಯಲ್ಲಿ ತಹಸೀಲ್ದಾರ್ ಸುರೇಶ್ ಆಚಾರ್, ಮುಜರಾಯಿ ಇಲಾಖೆಯ ತಹಸೀಲ್ದಾರ್ ಲತಾ ಹಾಗೂ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಿಥಿ ಚಿತ್ರದ ನಟ ‘ಸೆಂಚುರಿ’ಗೌಡ ಸೊಂಟದ ಮೂಳೆ ಮುರಿದು ನಿಧನ
ರಾಜ್ಯ ರಾಜಕಾರಣದಲ್ಲಿ ನನ್ನ ಕ್ಷೇತ್ರ ಚಾಮರಾಜನಗರ : ಪ್ರತಾಪ್‌ ಸಿಂಹ