ಮೊಹರಂ ತ್ಯಾಗ, ಮಾನವೀಯತೆ ಪ್ರತೀಕ: ಡಾ. ಮಂತರ್ ಗೌಡ

KannadaprabhaNewsNetwork |  
Published : Aug 27, 2026, 03:15 AM IST
೨೬ಎಸ್‌ಪಿಟಿ೦೧,೦೨: ಸೋಮವಾರಪೇಟೆ ಸಮೀಪದ ಬಜೆಗುಂಡಿ ಗ್ರಾಮದಲ್ಲಿ ನಡೆದ ಈದ್ ಮಿಲಾದ್ ಸಭಾ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್ ಗೌಡ ಪಾಲ್ಗೊಂಡು ಮಾತನಾಡಿದರು. | Kannada Prabha

ಸಾರಾಂಶ

ಪಟ್ಟಣ ಸೇರಿದಂತೆ ವಿವಿಧೆಡೆ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಪಟ್ಟಣ ಸೇರಿದಂತೆ ವಿವಿಧೆಡೆ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು.

ಇಲ್ಲಿಗೆ ಸಮೀಪದ ಬಜೆಗುಂಡಿ ಗ್ರಾಮದ ಖಿಳಾರಿಯ ಮಸಿದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್ ಗೌಡ ಪಾಲ್ಗೊಂಡು ಮಾತನಾಡಿ, ಮೊಹರಂ ಆಚರಣೆಯು ತ್ಯಾಗ, ಮಾನವೀಯತೆ, ಸಹೋದರತ್ವ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವಂತಾಗಲಿ ಎಂದು ಆಶಿಸಿದರು.

ನಮ್ಮ ಜೀವನದಲ್ಲಿ ಬದಲಾವಣೆ ತರಲು ಮೊದಲು ನಮ್ಮ ಮನೆಗಳಿಂದಲೇ ಪ್ರಾರಂಭಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಅದರಲ್ಲಿಯೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ, ಅವರ ಜೀವನವನ್ನು ಅವರು ಮುನ್ನೆಡೆಸುವಂತಾದಾಗ ಅವರಿಗೆ ಮದುವೆ ಮಾಡಿದಲ್ಲಿ ಅವರ ಜೀವನ ಸುಗಮವಾಗಿ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಮಸೀದಿಯ ಅಭಿವೃದ್ಧಿಗೆ ೧೦ ಲಕ್ಷ ರು. ಶಾಸಕರ ನಿಧಿಯಿಂದ ನೀಡಲಾಗುವುದು. ಸ್ಮಶಾನಕ್ಕೆ ಸ್ಥಳ ಮೀಸಲಿಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಖಿಳಾರಿಯ ಮಸೀದಿ ಅಧ್ಯಕ್ಷ ಕೆ.ಎ. ಯಾಕೂಬ್ ಮಾತನಾಡಿ, ಮಹಮ್ಮದ್ ಪೈಗಂಬರ್ ಅವರ ೧೫೦೧ನೇ ಜನ್ಮದಿನಾಚರಣೆಯನ್ನು ನಾಡಿನೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅವರು ಸರ್ವಧರ್ಮದವರೊಂದಿಗೆ ನಾವುಗಳು ಹೇಗೆ ಒಂದಾಗಿ ಬದುಕಬೇಕು. ದೇಶದ ವಿಷಯ ಬಂದಾಗ ನಮ್ಮ ಮಾತೃ ಭೂಮಿಗೆ ಯಾವ ರೀತಿಯ ಗೌರವ ನೀಡಬೇಕು ಎಂದು ತಿಳಿಹೇಳಿದ್ದು, ಅದನ್ನು ಎಲ್ಲರೂ ಪಾಲಿಸಿಕೊಂಡು ಬರುತಿದ್ದೇವೆ. ತ್ಯಾಗ, ಧೈರ್ಯ ಹಾಗೂ ಸತ್ಯಕ್ಕಾಗಿ ಹೋರಾಡಿದ ಇಮಾಮ್ ಹುಸೇನ್ ಅವರ ಸ್ಮರಣೆಗೆ ವಿಶೇಷ ಮಹತ್ವ ಹೊಂದಿದ್ದು, ಎಲ್ಲರೂ ಅವರ ಆದರ್ಶಗಳನ್ನು ಪಾಲಿಸಿಕೊಂಡು ಮುನ್ನೆಡೆದಲ್ಲಿ ಮಾತ್ರ ಇಂದಿನ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ ಎಂದರು.

ಕಾರ್ಯಕ್ರಮವನ್ನು ಮಸೀದಿಯ ಧರ್ಮಗುರುಗಳಾದ ನೌಷಾದ್ ಫೌಜಿ ಉದ್ಘಾಟಿಸಿದರು. ಧರ್ಮಗುರು ಶಮೀರ್ ಫೌಜಿ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಆರ್‌ಟಿಒ ಆಲಿ ಹುಸೇನ್, ಈಚೆಗೆ ನೇಪಾಳದಲ್ಲಿ ನಡೆದ ಕರಾಟೆಯಲ್ಲಿ ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳಾದ ಅಫೀಜ್ ಮತ್ತು ಯಾಸಿನ್, ಸಮಾಜದ ಮಹಮ್ಮದ್ ಇಸಾನ್, ಕೆ.ಎಂ. ಸುಲೈಮಾನ್, ನಿಯಾಜ್, ಇಬ್ರಾಹಿಂ, ಬೀರಾನ್ ಕುಟ್ಟಿ, ಅನಿಫ್, ಕೆ.ಎಸ್. ಅಬ್ಬಾಸ್, ರಷೀದ್, ಮುನೀರ್, ಮುಸ್ತಾಫ, ನಾಸೀರ್, ಇಸ್ಮಾಯಿಲ್ ಅವರುಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ನಡೆದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ - ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ಮಹಾಸಭೆ
ಸೆ. 8, ಮೊಂತಿ ಫೆಸ್ತ್‌ಗೆ ರಜೆ ನೀಡಲು ಸಿಎಂಗೆ ಕಥೊಲಿಕ್ ಸಭಾ ಮನವಿ