ಕನ್ನಡಪ್ರಭ ವಾರ್ತೆ ನಾಪೋಕ್ಲು
ಚಲನಚಿತ್ರದ ನಿರ್ದೇಶಕರಾಗಿ ಆಚೆಯಡ ಗಗನ್ ಗಣಪತಿ ಮಾತನಾಡಿ, ಕೊಡವ ಭಾಷೆ ನೂತನ ಸಿನಿಮಾ ಉತ್ತಮ ಚಿತ್ರಕಥೆಯನ್ನು ಹೊಂದಿದೆ ಈಗಿನ ಕಾಲಘಟ್ಟದಲ್ಲಿ ನಡೆಯುವ ಸಾಮಾಜಿಕ ದುಷ್ಪರಿಣಾಮಗಳ ಕುರಿತ ಸಿನಿಮಾ ಇದಾಗಿದ್ದು ಸಾಮಾಜಿಕ ಕಳಕಳಿಯನ್ನು ಹೊಂದಿದೆ ಎಲ್ಲರೂ ವೀಕ್ಷಿಸಿ, ಪ್ರೋತ್ಸಾಹಿಸಬೇಕು ಎಂದರು.
ಸೋಮೆಂಡ ಬೋಸ್ ಬೆಳ್ಳಿಯಪ್ಪ ಮಾತನಾಡಿ, ಹಲವು ಕಿರು ಚಿತ್ರಗಳನ್ನು ಈಗಾಗಲೇ ನಿರ್ಮಿಸಿದ್ದು ನೂತನ ಸಿನಿಮಾ ಉತ್ತಮ ಚಿತ್ರಕಥೆಯನ್ನು ಹೊಂದಿದೆ ಎಂದರು.ಕಾಲತ್ ರ ಕಳಿ ಚಿತ್ರ ತಾರಾ ಗಣದಲ್ಲಿ ತಾತಂಡ ಪ್ರಭ, ಗೋಪುಡ ದೇಸ್ನ ದೇಚಮ್ಮ, ಮಾಚೇಟಿರ ವಿಕಾಸ್, ಚೇನಂಡ ಗಿರೀಶ್ , ಸಪ್ನಾ , ಪಾಲೆಯಡ ಸುಚಿತ್ರ ಸುಬ್ಬಯ್ಯ,
ಸುಮಿತ್ರ , ಶ್ಯಾಮಲ ಸೇರಿದಂತೆ 50ಕೂ ಹೆಚ್ಚು ಕಲಾವಿದರನ್ನು ಒಳಗೊಂಡಿದೆ. ಛಾಯಾಗ್ರಾಹಕನ ಮತ್ತು ಸಂಕಲನವನ್ನು ಚಂದ್ರಶೇಖರ್( ಪಾಪು )ನಿರ್ವಹಿಸುತ್ತಿದ್ದಾರೆ ಎಂದು ಬಾಳೆಯಡ ಪ್ರತಿಷ್ ಪೂವಯ್ಯ ಮಾಹಿತಿ ನೀಡಿದರು.ಈ ಸಂದರ್ಭ ಅಖಿಲ ಕೊಡವ ಸಮಾಜದ ಅಧ್ಯಕ್ಷರಾದರೂ, ದೇವ ತಕ್ಕರುಅದ ಪರದಂಡ ಸುಬ್ರಮಣಿ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ನಾಣ್ಣಯ್ಯ, ಲೆಫ್ಟಿನಲ್ ಬಿದ್ದಂಡ ನಾಣ್ಣಯ್ಯ , ಅಲ್ಲರಂಡ ವಿಠಲ ಹಾಗೂ ಚಿತ್ರತಂಡ ಉಪಸ್ಥಿತರಿದ್ದರು.